AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್​​ನಲ್ಲಿ ಕೊನೆ ಆಯ್ತು ಸಾನ್ಯಾ-ರಿಷಬ್ ಸಂಬಂಧ; ಮೌನ ತಾಳಿದ ನಟಿ

ಬಾಲಿವುಡ್ ನಟಿ ಸಾನ್ಯಾ ಮಲ್ಹೋತ್ರಾ ಮತ್ತು ಸಿತಾರ್ ವಾದಕ ರಿಷಬ್ ರಿಖಿರಾಮ್ ಶರ್ಮಾ ಒಂದು ವರ್ಷದ ಸಂಬಂಧ ಅಂತ್ಯಗೊಂಡಿದೆ. ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅನ್​​ಫಾಲೋ ಮಾಡಿಕೊಂಡಿರುವುದು ಬ್ರೇಕಪ್ ವದಂತಿಗೆ ಕಾರಣವಾಗಿದೆ. ‘ದಂಗಲ್’ ಖ್ಯಾತಿಯ ಸಾನ್ಯಾ ತಮ್ಮ ವೈಯಕ್ತಿಕ ಸಂಬಂಧದ ಬಗ್ಗೆ ಮೌನ ವಹಿಸಿದ್ದಾರೆ.

ಬ್ರೇಕಪ್​​ನಲ್ಲಿ ಕೊನೆ ಆಯ್ತು ಸಾನ್ಯಾ-ರಿಷಬ್ ಸಂಬಂಧ; ಮೌನ ತಾಳಿದ ನಟಿ
ಸಾನ್ಯಾ
ರಾಜೇಶ್ ದುಗ್ಗುಮನೆ
|

Updated on: Apr 09, 2026 | 7:02 AM

Share

ಬಾಲಿವುಡ್ ನಟಿ ಸಾನ್ಯಾ ಮಲ್ಹೋತ್ರ (Sanya Malhotra) ಈಗ ವೈಯಕ್ತಿಕ ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಅವರು ಸಿತಾರ್ ವಾದಕ ರಿಷಬ್ ರಿಖಿರಾಮ್ ಶರ್ಮಾ ಜೊತೆ ಕಳೆದು ಒಂದು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು. ಈಗ ಇಬ್ಬರೂ ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಪರಸ್ಪರ ಅನ್​​ಫಾಲೋ ಮಾಡಿಕೊಂಡಿದ್ದಾರೆ. ಇದರಿಂದ ಇಬ್ಬರೂ ಬೇರೆ ಆಗಿದ್ದಾರೆ ಎಂಬ ವದಂತಿ ದಟ್ಟವಾಗಿದೆ.

ಸಾನ್ಯಾ ಮಲ್ಹೋತ್ರ ಅವರು ‘ದಂಗಲ್’ ಸಿನಿಮಾ ಮೂಲಕ ಫೇಮಸ್ ಆದರು. ಅವರ ನಟನೆಗೆ ಭಾರೀ ಮೆಚ್ಚುಗೆ ಬಂತು. ಆ ಬಳಿಕ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಅವರ ಸಿನಿಮಾಗಳು ಕೈ ಹಿಡಿಯುತ್ತಿಲ್ಲ. ಹೀಗಿರುವಾಗಲೇ ಸಾನ್ಯಾ ಅವರ ವಿಚ್ಛೇದನ ವಿಷಯ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ.

ಸಾನ್ಯಾ ಹಾಗೂ ರಿಷಬ್ ಅವರು ತಮ್ಮ ರಿಲೇಶನ್​​ಶಿಪ್ ಬಗ್ಗೆ ಎಲ್ಲಿಯೂ ಓಪನ್ ಆಗಿ ಮಾತನಾಡಿಲ್ಲ. ಒಂದು ವರ್ಷಕ್ಕೂ ಅಧಿಕ ಕಾಲ ಇವರು ಸುತ್ತಾಡಿದರು. ಆ ಬಳಿಕ ಇವರು ಬೇರೆ ಆಗುವ ನಿರ್ಧಾರ ಕೈಗೊಂಡಿದ್ದಾರೆ. ಈ ವಿಷಯವನ್ನು ಕೂಡ ಇವರು ಎಲ್ಲಿಯೂ ರಿವೀಲ್ ಮಾಡಿಲ್ಲ. ಇವರ ಬ್ರೇಕಪ್​​ಗೆ ಕಾರಣವೂ ರಿವೀಲ್ ಆಗಿಲ್ಲ.

ಇದನ್ನೂ ಓದಿ: sಬೀಚ್ ಪಕ್ಕ ದುಬಾರಿ ಮನೆ ಖರೀದಿಸಿದ ‘ದಂಗಲ್’ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ

2024ರ ಡಿಸೆಂಬರ್ ಒಂದರ ಈವೆಂಟ್ ಅಲ್ಲಿ ರಿಷಬ್ ಹಾಗೂ ಸಾನ್ಯಾ ಒಟ್ಟಾಗಿ ಕಾಣಿಸಿಕೊಂಡರು. ಈ ವೇಳೆ ಇಬ್ಬರ ಮಧ್ಯೆ ಪರಿಚಯ ಬೆಳೆಯಿತು ಎನ್ನಲಾಗಿದೆ. 2025ರ ಆರಂಭದಲ್ಲಿ ಸಾನ್ಯಾ ಹಾಗೂ ರಿಷಬ್ ಒಟ್ಟಿಗೆ ಇರುವ ಫೋಟೋಗಳು ವೈರಲ್ ಆದವು. ಅಭಿಮಾನಿಯೋರ್ವ ರಿಷಬ್ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದ. ಆ ಸಂದರ್ಭದಲ್ಲಿ ಸಾನ್ಯಾ ಕೂಡ ಅಲ್ಲಿಯೇ ಇದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆ ಬಳಿಕ ಕೆಲವು ಈವೆಂಟ್​​​ಗಳಲ್ಲಿ ಇವರು ಒಟ್ಟಿಗೆ ಕಾಣಿಸಿಕೊಂಡರೂ, ಪ್ರತ್ಯೇಕವಾಗಿಯೇ ತೆರಳುವ ಮೂಲಕ ವದಂತಿ ಮತ್ತಷ್ಟು ಹರಡದಂತೆ ನೋಡಿಕೊಂಡಿದ್ದರು.

ಸಿನಿಮಾ ವಿಷಯಕ್ಕೆ ಬರೋದಾದರೆ, ಸಾನ್ಯಾ ಅವರು 2025ರ ‘ಸನ್​​ಸ್ಕಾರಿ ಕಿ ತುಳಸಿ ಕುಮಾರಿ’ ಸಿನಿಮಾದಲ್ಲಿ ಅವರು ಕಾಣಿಸಿಕೊಂಡಿದ್ದರು. ‘ಟೋಸ್ಟರ್’ ಹೆಸರಿನ ಸಿನಿಮಾ ಮಾಡುತ್ತಿದ್ದು ರಾಜ್​​​ಕುಮಾರ್ ರಾವ್ ಇದಕ್ಕೆ ಹೀರೋ. ಈ ಚಿತ್ರ ಏಪ್ರಿಲ್ 15ರಂದು ನೆಟ್​​ಫ್ಲಿಕ್ಸ್​​ನಲ್ಲಿ ರಿಲೀಸ್ ಆಗಲಿದೆ. ರಿಷಬ್ ರಿಖಿರಾಮ್ ಅವರು ವಿವಿಧ ಕಡೆಗಳಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ