AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ; ನಟಿಯ ಕೈಯಲ್ಲಿವೆ ಇನ್ನೂ ಹಲವು ಸಿನಿಮಾ

The Vaccine War: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ಈಗ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಕೆಲವು ದಿನಗಳ ಶೂಟಿಂಗ್​ ಬಾಕಿ ಇದೆ.

Sapthami Gowda: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದ ರಿಲೀಸ್​ ದಿನಾಂಕ ಮುಂದೂಡಿಕೆ; ನಟಿಯ ಕೈಯಲ್ಲಿವೆ ಇನ್ನೂ ಹಲವು ಸಿನಿಮಾ
ಸಪ್ತಮಿ ಗೌಡ, ದಿ ವ್ಯಾಕ್ಸಿನ್​ ವಾರ್​
ಮದನ್​ ಕುಮಾರ್​
|

Updated on: Jun 08, 2023 | 10:58 PM

Share

ನಟಿ ಸಪ್ತಮಿ ಗೌಡ (Sapthami Gowda) ಅವರಿಗೆ ಇಂದು (ಜೂನ್​ 8) ಜನ್ಮದಿನದ ಸಂಭ್ರಮ. ಆ ಪ್ರಯುಕ್ತ ಅವರಿಗೆ ಎಲ್ಲರೂ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳ ಮತ್ತು ಆಪ್ತರ ಪ್ರೀತಿ-ಹಾರೈಕೆಗಳನ್ನು ಕಂಡು ಸಪ್ತಮಿ ಗೌಡ ಅವರಿಗೆ ಖುಷಿ ಆಗಿದೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಅವರು ನಟಿಸುತ್ತಿರುವ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿದೆ. ಈ ಸಿನಿಮಾಗೆ ‘ದಿ ಕಾಶ್ಮೀರ್​ ಫೈಲ್ಸ್​’ ಖ್ಯಾತಿಯ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಕನ್ನಡದ ಸಿನಿಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಿದೆ. ಈ ವರ್ಷ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಬಿಡುಗಡೆ ಮಾಡುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಈಗ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ.

‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ಈಗ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಕೆಲವು ದಿನಗಳ ಶೂಟಿಂಗ್​ ಬಾಕಿ ಇದೆ. ಭಾರತದಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೂ ಮುನ್ನ ಅಮೆರಿಕದಲ್ಲಿ ಪ್ರೀಮಿಯರ್​ ಮಾಡಲು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಪ್ಲ್ಯಾನ್​ ಪ್ರಕಾರವೇ ಹೋಗುವುದಾದರೆ ‘ದಿ ವ್ಯಾಕ್ಸಿನ್​ ವಾರ್​’ ಬಿಡುಗಡೆ ಆಗಲು ಕೊಂಚ ಕಾಯಬೇಕಾಗುತ್ತದೆ. ಹಾಗಾಗಿ ಈ ವರ್ಷ ದಸರಾ ಹಬ್ಬದ ಸಂದರ್ಭದಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ.

Sapthami Gowda: ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಸಪ್ತಮಿ ಗೌಡ ನಟಿಸಿದ ಮೊದಲ ಸಿನಿಮಾ ‘ಪಾಪ್​ ಕಾರ್ನ್​ ಮಂಕಿ ಟೈಗರ್​’. ಆ ಸಿನಿಮಾದಲ್ಲಿ ಅವರು ಡಾಲಿ ಧನಂಜಯ್​ ಜೊತೆ ತೆರೆ ಹಂಚಿಕೊಂಡಿದ್ದರು. ಎರಡನೇ ಸಿನಿಮಾ ‘ಕಾಂತಾರ’ದಲ್ಲಿ ರಿಷಬ್​ ಶೆಟ್ಟಿ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಅಭಿಷೇಕ್​ ಅಂಬರೀಷ್​ ನಾಯಕತ್ವದ ‘ಕಾಳಿ’ ಸಿನಿಮಾ ಅವರ ಮೂರನೇ ಚಿತ್ರ ಆಗಲಿದೆ. 4ನೇ ಚಿತ್ರದ ಮೂಲಕ ಸಪ್ತಮಿ ಗೌಡ ನೇರವಾಗಿ ಬಾಲಿವುಡ್​ ಟಿಕೆಟ್​ ಪಡೆದರು. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಮೇಲೆ ಪ್ರೇಕ್ಷಕರಿಗೆ ಸಾಕಷ್ಟು ಕುತೂಹಲ ಇದೆ. ಇದರ ಜೊತೆಗೆ ಯುವ ರಾಜ್​ಕುಮಾರ್​ ಅಭಿನಯದ ‘ಯುವ’ ಸಿನಿಮಾಗೂ ಅವರು ನಾಯಕಿ ಆಗಿದ್ದಾರೆ.

Sapthami Gowda Birthday: ಈ ವರ್ಷದ ಬರ್ತ್​ಡೇ ಸಪ್ತಮಿ ಗೌಡಗೆ ಸಖತ್ ವಿಶೇಷ; ಇಲ್ಲಿದೆ ಕಾರಣ

ವಿವೇಕ್​ ಅಗ್ನಿಹೋತ್ರಿ ಅವರು ನೈಜ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಸಿನಿಮಾ ಮಾಡುತ್ತಾರೆ. ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯಾಕಾಂಡದ ವಿಷಯವನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಮೂಡಿಬಂದಿತ್ತು. ಆ ಸಿನಿಮಾ ಭಾರಿ ಚರ್ಚೆ ಹುಟ್ಟುಹಾಕಿತ್ತು. ಈಗ ಅವರು ಕೊರೊನಾ ವ್ಯಾಕ್ಸಿನ್​ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಆ ಚಿತ್ರ ಬಿಡುಗಡೆ ಆದಾಗಲೂ ಸಂಚಲನ ಸೃಷ್ಟಿ ಮಾಡುವ ಸಾಧ್ಯತೆ ಇದೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದಿಂದ ಸಪ್ತಮಿ ಗೌಡ ಅವರ ವೃತ್ತಿ ಜೀವನಕ್ಕೆ ಇನ್ನಷ್ಟು ಮೈಲೇಜ್​ ಸಿಗುತ್ತದೆ ಎಂದು ನಿರೀಕ್ಷಿಸಲಾಗುತ್ತಿದೆ. ಇದಲ್ಲದೇ ಇನ್ನೂ ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?