AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಸಾರಾ​ ಅಲಿ ಖಾನ್​ ಹೊಸ ವೇಷ ಕಂಡು ನೆಟ್ಟಿಗರಿಗೆ ಅಚ್ಚರಿ; ಮೀಸೆ-ಗಡ್ಡದ ಲುಕ್​ನಲ್ಲಿ ಸೈಫ್​ ಪುತ್ರಿ

Homi Adajania | Sara Ali Khan: ಹಲವು ಸಿನಿಮಾಗಳಲ್ಲಿ ಸಾರಾ ಅಲಿ ಖಾನ್​ ಬ್ಯುಸಿ ಆಗಿದ್ದಾರೆ. ಹೋಮಿ ಅದಜಾನಿಯಾ ನಿರ್ದೇಶನದ ‘ಮರ್ಡರ್​ ಮುಬಾರಕ್​’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ ಎಂಬ ಮಾಹಿತಿ ಇದೆ.

Sara Ali Khan: ಸಾರಾ​ ಅಲಿ ಖಾನ್​ ಹೊಸ ವೇಷ ಕಂಡು ನೆಟ್ಟಿಗರಿಗೆ ಅಚ್ಚರಿ; ಮೀಸೆ-ಗಡ್ಡದ ಲುಕ್​ನಲ್ಲಿ ಸೈಫ್​ ಪುತ್ರಿ
ಸಾರಾ ಅಲಿ ಖಾನ್
ಮದನ್​ ಕುಮಾರ್​
|

Updated on:Mar 01, 2023 | 10:33 AM

Share

ನಟಿ ಸಾರಾ ಅಲಿ ಖಾನ್​ (Sara Ali Khan) ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ನಟಿಯರು ಫೋಟೋ ಶೇರ್​ ಮಾಡಿಕೊಳ್ಳುವುದು ಹೊಸ ವಿಚಾರ ಏನಲ್ಲ. ಆದರೆ ಈ ಬಾರಿ ಸಾರಾ ಅಲಿ ಖಾನ್​ ಅವರು ಮೀಸೆ-ಗಡ್ಡ ಅಂಟಿಸಿಕೊಂಡು ಪೋಸ್​ ನೀಡಿದ್ದಾರೆ. ಅದನ್ನು ನೋಡಿ ನೆಟ್ಟಿಗರಿಗೆ ಅಚ್ಚರಿ ಆಗಿದೆ. ಅವರು ಈ ರೀತಿ ಫೋಟೋ ಹಂಚಿಕೊಳ್ಳಲು ಕಾರಣ ಕೂಡ ಇದೆ. ಮಂಗಳವಾರ (ಫೆ.28) ನಿರ್ದೇಶಕ ಹೋಮಿ ಅದಜಾನಿಯಾ (Homi Adajania) ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಅವರಿಗೆ ವಿಶ್​ ಮಾಡುವ ಸಲುವಾಗಿ ಸಾರಾ ಅಲಿ ಖಾನ್​ ಅವರು ಈ ವೇಷದಲ್ಲಿ ಪೋಸ್​ ನೀಡಿದ್ದಾರೆ. ಹಾಗಂತ ಅವರು ನಿಜವಾಗಿ ಮೀಸೆ-ಗಡ್ಡ ಅಂಟಿಸಿಕೊಂಡಿಲ್ಲ. ಬದಲಿಗೆ, ಫಿಲ್ಟರ್ ಬಳಸಿ ಈ ರೀತಿ ಎಡಿಟ್​ ಮಾಡಿದ್ದಾರೆ.

ಸಾರಾ ಅಲಿ ಖಾನ್​ ಅವರ ಈ ಫೋಟೋ ಕ್ಲಿಕ್ಕಿಸಿದ್ದು ಹೋಮಿ ಅದಜಾನಿಯಾ ಅವರು. ಹಾಗಾಗಿ ಅವರ ಬರ್ತ್​ಡೇ ಪ್ರಯುಕ್ತ ಇದೇ ಫೋಟೋವನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡುವ ಮೂಲಕ ವಿಶ್​ ಮಾಡಿದ್ದಾರೆ ಸೈಫ್​ ಅಲಿ ಖಾನ್​ ಪುತ್ರಿ. ಅಲ್ಲದೇ, ಹೋಮಿ ಅದಜಾನಿಯಾ ಜೊತೆ ವರ್ಕೌಟ್​ ಮಾಡುತ್ತಿರುವ ವಿಡಿಯೋವನ್ನೂ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ

ಇದನ್ನೂ ಓದಿ
Image
Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ
Image
ಮುಖ ಮುಚ್ಚಿಕೊಂಡು ಓಡಾಡುತ್ತಿದ್ದಾರೆ ಸಾರಾ ಅಲಿ ಖಾನ್; ಅಭಿಮಾನಿಗಳಿಗೆ ಕಾಡುತ್ತಿದೆ ಅನುಮಾನ
Image
ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?
Image
ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ಸಾರಾ ಅಲಿ ಖಾನ್​; ಇಲ್ಲಿದೆ ಫೋಟೋ ಗ್ಯಾಲರಿ

ಸೈಫ್​ ಅಲಿ ಖಾನ್​ ಮಗಳು ಎಂಬ ಕಾರಣಕ್ಕೆ ಸಾರಾ ಅಲಿ ಖಾನ್​ ಅವರಿಗೆ ಬಾಲಿವುಡ್​ನಲ್ಲಿ ಹಲವು ಅವಕಾಶಗಳು ಸಿಕ್ಕಿವೆ. ಸ್ಟಾರ್​ ಕಲಾವಿದರ ಜೊತೆ ನಟಿಸುವ ಮೂಲಕ ಅವರು ಫೇಮಸ್​ ಆಗಿದ್ದಾರೆ. ಕಾರ್ತಿಕ್ ಆರ್ಯನ್​, ಅಕ್ಷಯ್​ ಕುಮಾರ್​, ಧನುಶ್​, ರಣವೀರ್​ ಸಿಂಗ್​ ಮುಂತಾದ ನಟರ ಜೊತೆ ಅವರು ತೆರೆಹಂಚಿಕೊಂಡಿದ್ದಾರೆ. ಹಾಗಿದ್ದರೂ ಕೂಡ ನಿರೀಕ್ಷಿತ ಮಟ್ಟದ ಗೆಲುವು ಅವರಿಗೆ ಸಿಕ್ಕಿಲ್ಲ.

ಇದನ್ನೂ ಓದಿ: ಮುಖ ಮುಚ್ಚಿಕೊಂಡು ಓಡಾಡುತ್ತಿದ್ದಾರೆ ಸಾರಾ ಅಲಿ ಖಾನ್; ಅಭಿಮಾನಿಗಳಿಗೆ ಕಾಡುತ್ತಿದೆ ಅನುಮಾನ

ಹಲವು ಸಿನಿಮಾಗಳಲ್ಲಿ ಸಾರಾ ಅಲಿ ಖಾನ್​ ಬ್ಯುಸಿ ಆಗಿದ್ದಾರೆ. ಹೋಮಿ ಅದಜಾನಿಯಾ ನಿರ್ದೇಶನದ ‘ಮರ್ಡರ್​ ಮುಬಾರಕ್​’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಆ ಚಿತ್ರದ ಶೂಟಿಂಗ್​ ಮುಗಿದಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ‘ಏ ವತನ್​ ಮೇರೆ ವತನ್​’ ಚಿತ್ರಕ್ಕೂ ಸಾರಾ ಅಲಿ ಖಾನ್​ ನಾಯಕಿ ಆಗಿದ್ದಾರೆ. ಇನ್ನೂ ಹಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?

ಸೋಶಿಯಲ್​ ಮೀಡಿಯಾದಲ್ಲಿ ಸಾರಾ ಅಲಿ ಖಾನ್​ ಸಕ್ರಿಯರಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 4.1 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ನೆಟ್ಟಿಗರು ಆಗಾಗ ಅವರನ್ನು ಟ್ರೋಲ್ ಮಾಡುತ್ತಾರೆ. ಆದರೆ ಅದಕ್ಕೆಲ್ಲ ಸಾರಾ ಅಲಿ ಖಾನ್​ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 am, Wed, 1 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್