AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ

ಸಾರಾ ಅರ್ಜುನ್​ ಅವರ ತಂದೆ ರಾಜ್ ಅರ್ಜುನ್ ಕೂಡ ಖ್ಯಾತ ನಟನಾಗಿ ಗುರುತಿಸಿಕೊಂಡಿದ್ದಾರೆ. ಸಾರಾ ಅವರು ಕುಟುಂಬದವರ ಜೊತೆ ಕ್ರಿಕೆಟ್ ನೋಡಲು ವಾಂಖೆಡೆ ಸ್ಟೇಡಿಯಂಗೆ ಬಂದಿದ್ದರು. ಆಗ ಅವರನ್ನು ನೋಡಿ ಫ್ಯಾನ್ಸ್ ಮುಗಿಬಿದ್ದರು. ಆ ಸಂದರ್ಭವನ್ನು ರಾಜ್ ಅರ್ಜುನ್ ಚೆನ್ನಾಗಿ ನಿಭಾಯಿಸಿದರು.

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ
Raj Arjun, Sara ArjunImage Credit source: filmygyan
ಮದನ್​ ಕುಮಾರ್​
|

Updated on: Mar 30, 2026 | 5:03 PM

Share

‘ಧುರಂಧರ್ 2’ (Dhurandhar 2) ಚಿತ್ರದ ಅಭೂತಪೂರ್ವ ಯಶಸ್ಸಿನಿಂದ ನಟಿ ಸಾರಾ ಅರ್ಜುನ್ ಅವರಿಗೆ ಖ್ಯಾತಿ ಹೆಚ್ಚಾಗಿದೆ. ಸಾರಾ ಅರ್ಜುನ್ ಅವರಿಗೆ ಕ್ರಿಕೆಟ್ ಬಗ್ಗೆಯೂ ಕ್ರೇಜ್ ಇದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ (Sara Arjun) ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ.

20 ವರ್ಷ ವಯಸ್ಸಿನ ಸಾರಾ ಅರ್ಜುನ್ ಅವರು ಮುಂಬೈ ಇಂಡಿಯನ್ಸ್ ತಂಡದ ಜೆರ್ಸಿ ಧರಿಸಿ, ತಮ್ಮ ಪೋಷಕರಾದ ನಟ ರಾಜ್ ಅರ್ಜುನ್ ಮತ್ತು ತಾಯಿ ಸನ್ಯಾ ಅರ್ಜುನ್ ಅವರೊಂದಿಗೆ ಪಂದ್ಯ ವೀಕ್ಷಿಸಲು ಬಂದಿದ್ದರು. ಕ್ರೀಡಾಂಗಣದಲ್ಲಿ ಪಂದ್ಯವನ್ನು ಪೂರ್ಣವಾಗಿ ಆನಂದಿಸಿದ ನಂತರ ಅವರು ಹೊರಬರುತ್ತಿದ್ದಂತೆ ಅಭಿಮಾನಿಗಳ ಗುಂಪು ಅವರನ್ನು ಸುತ್ತುವರಿಯಿತು.

ಸದ್ಯ ‘ಧುರಂಧರ್ 2’ ಚಿತ್ರದ ಭರ್ಜರಿ ಯಶಸ್ಸಿನಿಂದಾಗಿ ಸಾರಾ ಅವರ ಜನಪ್ರಿಯತೆ ಎಲ್ಲ ಕಡೆಗಳಲ್ಲಿ ಹಬ್ಬಿದೆ. ಸ್ಟೇಡಿಯಂನಿಂದ ಹೊರಬರುತ್ತಿದ್ದ ಸಾರಾ ಅವರನ್ನು ಗುರುತಿಸಿದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಮಗಳ ರಕ್ಷಣೆಗೆ ನಿಂತ ತಂದೆ ರಾಜ್ ಅರ್ಜುನ್ ಅವರು ಸ್ವತಃ ಬಾಡಿಗಾರ್ಡ್‌ನಂತೆ ಕಾರ್ಯನಿರ್ವಹಿಸಿದರು.

ಅಭಿಮಾನಿಗಳ ಗುಂಪನ್ನು ಸರಿಸುತ್ತಾ, ಸಾರಾ ಅವರನ್ನು ಸುರಕ್ಷಿತವಾಗಿ ಕಾರಿನವರೆಗೆ ಕರೆದೊಯ್ದರು ರಾಜ್ ಅರ್ಜುನ್. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳ ಜೊತೆ ಮಾತಾಡಬೇಕು ಎಂಬ ಆಸೆ ಸಾರಾ ಅವರಿಗೆ ಇದ್ದಂತೆ ಕಾಣುತ್ತದೆ. ಆದರೆ ತಂದೆಯಾಗಿ ರಾಜ್ ಅರ್ಜುನ್ ಅವರು ಆ ಕ್ಷಣದಲ್ಲಿ ಜಾಗ್ರತೆ ವಹಿಸಿದ್ದು ಕೂಡ ನೆಟ್ಟಿಗರ ಮೆಚ್ಚುಗೆಗೆ ಕಾರಣ ಆಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

ವಾಂಖೆಡೆ ಸ್ಟೇಡಿಯಂ ಹೊರಗೆ ನಡೆದ ಈ ಗದ್ದಲದ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮಗಳನ್ನು ರಕ್ಷಿಸಲು ನಟ ರಾಜ್ ಅರ್ಜುನ್ ತೋರಿದ ಕಾಳಜಿಯನ್ನು ಕಂಡ ನೆಟ್ಟಿಗರು, ‘ತಂದೆ ಎಂದರೆ ಹೀಗಿರಬೇಕು’ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ಪಂದ್ಯ ಗೆದ್ದ ಸಂಭ್ರಮದ ನಡುವೆ ಸಾರಾ ಅವರ ಈ ವಿಡಿಯೋಗಳು ಕೂಡ ಗಮನ ಸೆಳೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್