AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ

ಸಾರಾ ಅರ್ಜುನ್​ ಅವರ ತಂದೆ ರಾಜ್ ಅರ್ಜುನ್ ಕೂಡ ಖ್ಯಾತ ನಟನಾಗಿ ಗುರುತಿಸಿಕೊಂಡಿದ್ದಾರೆ. ಸಾರಾ ಅವರು ಕುಟುಂಬದವರ ಜೊತೆ ಕ್ರಿಕೆಟ್ ನೋಡಲು ವಾಂಖೆಡೆ ಸ್ಟೇಡಿಯಂಗೆ ಬಂದಿದ್ದರು. ಆಗ ಅವರನ್ನು ನೋಡಿ ಫ್ಯಾನ್ಸ್ ಮುಗಿಬಿದ್ದರು. ಆ ಸಂದರ್ಭವನ್ನು ರಾಜ್ ಅರ್ಜುನ್ ಚೆನ್ನಾಗಿ ನಿಭಾಯಿಸಿದರು.

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ
Raj Arjun, Sara ArjunImage Credit source: filmygyan
ಮದನ್​ ಕುಮಾರ್​
|

Updated on: Mar 30, 2026 | 5:03 PM

Share

‘ಧುರಂಧರ್ 2’ (Dhurandhar 2) ಚಿತ್ರದ ಅಭೂತಪೂರ್ವ ಯಶಸ್ಸಿನಿಂದ ನಟಿ ಸಾರಾ ಅರ್ಜುನ್ ಅವರಿಗೆ ಖ್ಯಾತಿ ಹೆಚ್ಚಾಗಿದೆ. ಸಾರಾ ಅರ್ಜುನ್ ಅವರಿಗೆ ಕ್ರಿಕೆಟ್ ಬಗ್ಗೆಯೂ ಕ್ರೇಜ್ ಇದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ (Sara Arjun) ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ.

20 ವರ್ಷ ವಯಸ್ಸಿನ ಸಾರಾ ಅರ್ಜುನ್ ಅವರು ಮುಂಬೈ ಇಂಡಿಯನ್ಸ್ ತಂಡದ ಜೆರ್ಸಿ ಧರಿಸಿ, ತಮ್ಮ ಪೋಷಕರಾದ ನಟ ರಾಜ್ ಅರ್ಜುನ್ ಮತ್ತು ತಾಯಿ ಸನ್ಯಾ ಅರ್ಜುನ್ ಅವರೊಂದಿಗೆ ಪಂದ್ಯ ವೀಕ್ಷಿಸಲು ಬಂದಿದ್ದರು. ಕ್ರೀಡಾಂಗಣದಲ್ಲಿ ಪಂದ್ಯವನ್ನು ಪೂರ್ಣವಾಗಿ ಆನಂದಿಸಿದ ನಂತರ ಅವರು ಹೊರಬರುತ್ತಿದ್ದಂತೆ ಅಭಿಮಾನಿಗಳ ಗುಂಪು ಅವರನ್ನು ಸುತ್ತುವರಿಯಿತು.

ಸದ್ಯ ‘ಧುರಂಧರ್ 2’ ಚಿತ್ರದ ಭರ್ಜರಿ ಯಶಸ್ಸಿನಿಂದಾಗಿ ಸಾರಾ ಅವರ ಜನಪ್ರಿಯತೆ ಎಲ್ಲ ಕಡೆಗಳಲ್ಲಿ ಹಬ್ಬಿದೆ. ಸ್ಟೇಡಿಯಂನಿಂದ ಹೊರಬರುತ್ತಿದ್ದ ಸಾರಾ ಅವರನ್ನು ಗುರುತಿಸಿದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಮಗಳ ರಕ್ಷಣೆಗೆ ನಿಂತ ತಂದೆ ರಾಜ್ ಅರ್ಜುನ್ ಅವರು ಸ್ವತಃ ಬಾಡಿಗಾರ್ಡ್‌ನಂತೆ ಕಾರ್ಯನಿರ್ವಹಿಸಿದರು.

ಅಭಿಮಾನಿಗಳ ಗುಂಪನ್ನು ಸರಿಸುತ್ತಾ, ಸಾರಾ ಅವರನ್ನು ಸುರಕ್ಷಿತವಾಗಿ ಕಾರಿನವರೆಗೆ ಕರೆದೊಯ್ದರು ರಾಜ್ ಅರ್ಜುನ್. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳ ಜೊತೆ ಮಾತಾಡಬೇಕು ಎಂಬ ಆಸೆ ಸಾರಾ ಅವರಿಗೆ ಇದ್ದಂತೆ ಕಾಣುತ್ತದೆ. ಆದರೆ ತಂದೆಯಾಗಿ ರಾಜ್ ಅರ್ಜುನ್ ಅವರು ಆ ಕ್ಷಣದಲ್ಲಿ ಜಾಗ್ರತೆ ವಹಿಸಿದ್ದು ಕೂಡ ನೆಟ್ಟಿಗರ ಮೆಚ್ಚುಗೆಗೆ ಕಾರಣ ಆಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

ವಾಂಖೆಡೆ ಸ್ಟೇಡಿಯಂ ಹೊರಗೆ ನಡೆದ ಈ ಗದ್ದಲದ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮಗಳನ್ನು ರಕ್ಷಿಸಲು ನಟ ರಾಜ್ ಅರ್ಜುನ್ ತೋರಿದ ಕಾಳಜಿಯನ್ನು ಕಂಡ ನೆಟ್ಟಿಗರು, ‘ತಂದೆ ಎಂದರೆ ಹೀಗಿರಬೇಕು’ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ಪಂದ್ಯ ಗೆದ್ದ ಸಂಭ್ರಮದ ನಡುವೆ ಸಾರಾ ಅವರ ಈ ವಿಡಿಯೋಗಳು ಕೂಡ ಗಮನ ಸೆಳೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು