AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸೋತಾಗ ಅಕ್ಷಯ್ ಕುಮಾರ್ ಹೇಗಿರುತ್ತಾರೆ? ನಿರ್ದೇಶಕಿ ಕೊಟ್ಟರು ಉತ್ತರ

ಸುಧಾ ಕೊಂಗರಾ ಅವರು ನಿರ್ದೇಶನ ಮಾಡಿದ ‘ಸೂರರೈ ಪೊಟ್ರು’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೆಚ್ಚುಗೆ ಪಡೆಯಿತು. ಈ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲಾಗಿದೆ. ‘ಸರ್ಫಿರಾ’ ಹೆಸರಲ್ಲಿ ಈ ಚಿತ್ರವನ್ನು ರಿಮೇಕ್ ಮಾಡಲಾಗಿದೆ. ಈ ಸಿನಿಮಾ ಮೊದಲ ದಿನ ಗಳಿಸಿದ್ದು ಕೇವಲ 2.40 ಕೋಟಿ ರೂಪಾಯಿ.

ಸಿನಿಮಾ ಸೋತಾಗ ಅಕ್ಷಯ್ ಕುಮಾರ್ ಹೇಗಿರುತ್ತಾರೆ? ನಿರ್ದೇಶಕಿ ಕೊಟ್ಟರು ಉತ್ತರ
ಅಕ್ಷಯ್-ಸುಧಾ
ರಾಜೇಶ್ ದುಗ್ಗುಮನೆ
|

Updated on: Jul 17, 2024 | 7:35 AM

Share

ಸುಧಾ ಕೊಂಗರ ನಿರ್ದೇಶನದ ‘ಸೂರರೈ ಪೋಟ್ರು’ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರ ರಾಷ್ಟ್ರಪ್ರಶಸ್ತಿ ಬಾಚಿಕೊಂಡಿತ್ತು. ಕೊವಿಡ್ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಈ ಸಿನಿಮಾ ರಿಲೀಸ್ ಆದರೂ ಜನರು ಈ ಚಿತ್ರವನ್ನು ಥಿಯೇಟರ್​ನಲ್ಲಿ ನೋಡಿ ಮೆಚ್ಚಿಕೊಂಡಿದ್ದರು. ಈ ಚಿತ್ರವನ್ನು ‘ಸರ್ಫಿರಾ’ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಲಾಗಿದ್ದು ಅಕ್ಷಯ್ ಕುಮಾರ್ ನಟಿಸಿದ್ದರು. ಆದರೆ, ಈ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಈ ಬಗ್ಗೆ ಅಕ್ಷಯ್ ಕುಮಾರ್ ಅವರು ಅಪ್ಸೆಟ್ ಆಗುತ್ತಾರಂತೆ. ಈ ಬಗ್ಗೆ ನಿರ್ದೇಶಕಿ ಸುಧಾ ಕೊಂಗರ ಅವರು ಮಾತನಾಡಿದ್ದಾರೆ.

‘ಸಿನಿಮಾ ಶೂಟಿಂಗ್ ಆರಂಭದ ಆರೇಳು ದಿನ ನಾನು ಅವರನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನಮ್ಮ ಮಧ್ಯೆ ಘರ್ಷಣೆ ಇತ್ತು. ಆದರೆ, ಅವರು ಸಿಟ್ಟಾಗುತ್ತಿದ್ದಾಗಲಿ ಅಥವಾ ಕೂಗಾಡುತ್ತಿದ್ದುದಾಗಲಿ ಮಾಡುತ್ತಾ ಇರಲಿಲ್ಲ. ನಾನು ಆ ಬಗ್ಗೆ ಆಲೋಚಿಸುತ್ತಲೂ ಇರಲಿಲ್ಲ. ನನಗೆ ಏನು ಬೇಕೋ ಅದನ್ನೇ ಶೂಟ್ ಮಾಡುತ್ತಿದ್ದೆ. ಆದರೆ, ಅವರು ಕುಗ್ಗಿದ್ದಾಗ ನೋಡೋಕೆ ಆಗಲ್ಲ’ ಎಂದಿದ್ದಾರೆ ಅವರು.

‘ನಾವು ಅಂದು ಉಡುಪಿ ದೃಶ್ಯವನ್ನು ಶೂಟ್ ಮಾಡಬೇಕಿತ್ತು. ಅದಕ್ಕೂ ಹಿಂದಿನ ದಿನ ಅವರ ಸಿನಿಮಾ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಕಾರಣಕ್ಕೆ ಅವರು ಸೆಟ್​ನಲ್ಲಿ ನಿರುತ್ಸಾಹಿ ಆಗಿ ಕುಳಿತಿದ್ದರು. ಆ ಉಡುಪಿ ದೃಶ್ಯ ನನ್ನ ಫೇವರಿಟ್ ಆಗಿತ್ತು. ಅದನ್ನು ಹೇಗೆ ಶೂಟ್ ಮಾಡುತ್ತೇವೇನೋ ಎನ್ನುವ ಭಯ ನನ್ನನ್ನು ಕಾಡುತ್ತಿತ್ತು. ಆದರೂ ದೃಶ್ಯ ಪರ್ಫೆಕ್ಟ್ ಆಗಿ ಬಂದಿತ್ತು’ ಎಂದಿದ್ದಾರೆ ಸುಧಾ.

ಇದನ್ನೂ ಓದಿ: ಅಕ್ಷಯ್ ಕುಮಾರ್ ಸೋಲಿನ ಸಾಲಿಗೆ ಮತ್ತೊಂದು ಸಿನಿಮಾ; ಹೊಸ ಚಿತ್ರದ ಗಳಿಕೆ 2 ಕೋಟಿ ರೂ.!

‘ಆ ದೃಶ್ಯ ಸರಿಯಾಗಿ ಬಂದಿದೆ ಎಂದು ನಾನು ಹೇಳಿದೆ. ಆದಾಗ್ಯೂ ರೀಟೇಕ್ ತೆಗೆದುಕೊಳ್ಳೋಕೆ ಅವರು ಹೇಳಿದರು. ನನಗೋಸ್ಕರ ಮತ್ತೊಂದು ಟೇಕ್ ಎಂದರು. ಇದು ಹಿಂದೆಂದೂ ಆಗಿರಲಿಲ್ಲ. ಅವರು ಪ್ರತಿ ಚಿತ್ರಕ್ಕೂ ಸಂಪೂರ್ಣ ಪರಿಶ್ರಮ ಹಾಕುತ್ತಾರೆ’ ಎಂದಿದ್ದಾರೆ ಸುಧಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​