‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಎದುರು ಕಟ್ಟಪ್ಪ ಸತ್ಯರಾಜ್ ವಿಲನ್?​

ಸಲ್ಮಾನ್​ ಖಾನ್​ ಹಾಗೂ ಎ.ಆರ್​. ಮುರುಗದಾಸ್​ ಅವರ ಕಾಂಬಿನೇಷನ್​ನಲ್ಲಿ ಬರುತ್ತಿರುವ ‘ಸಿಕಂದರ್​’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಇರಲಿದೆ. ಸಲ್ಲು ಎದುರು ವಿಲನ್​ ಯಾರು ಆಗುತ್ತಾರೆ ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒಂದು ಮಾಹಿತಿ ಹೊರಬಿದ್ದಿದೆ. ಕಟ್ಟಪ್ಪ ಅಲಿಯಾಸ್​ ಸತ್ಯರಾಜ್​ ಅವರು ‘ಸಿಕಂದರ್​’ ಚಿತ್ರದ ಖಳನಾಯಕ ಎನ್ನಲಾಗಿದೆ.

‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಎದುರು ಕಟ್ಟಪ್ಪ ಸತ್ಯರಾಜ್ ವಿಲನ್?​
ಸತ್ಯರಾಜ್​, ಸಲ್ಮಾನ್​ ಖಾನ್​
Follow us
|

Updated on: May 26, 2024 | 10:33 PM

ನಟ ಸಲ್ಮಾನ್​ ಖಾನ್​ (Salman Khan) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ. ಈ ಬಾರಿ ಅವರು ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಎ.ಆರ್​. ಮುರುಗದಾಸ್​ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ‘ಸಿಕಂದರ್​’ (Sikandar) ಎಂದು ಶೀರ್ಷಿಕೆ ಇಡಲಾಗಿದೆ. ಸಲ್ಮಾನ್​ ಖಾನ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ಈ ಸಿನಿಮಾದ ಬಗ್ಗೆ ಒಂದು ಎಗ್ಸೈಟಿಂಗ್ ನ್ಯೂಸ್​ ಕೇಳಿಬಂದಿದೆ. ‘ಸಿಕಂದರ್​’ ಸಿನಿಮಾದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್ (Sathyaraj)​ ಅವರು ವಿಲನ್​ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಪೋಸ್ಟ್​ಗಳು ಹರಿದಾಡುತ್ತಿವೆ.

‘ಬಾಹುಬಲಿ’ ಸಿನಿಮಾದಲ್ಲಿ ಸತ್ಯರಾಜ್​ ಅವರು ಕಟ್ಟಪ್ಪ ಎಂಬ ಪಾತ್ರ ಮಾಡಿ ಸಖತ್​ ಫೇಮಸ್​ ಆದರು. ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದಲ್ಲೂ ಅವರಿಗೆ ತುಂಬ ಜನಪ್ರಿಯತೆ ಸಿಕ್ಕಿತು. ಈಗ ಅವರು ಸಲ್ಮಾನ್​ ಖಾನ್​ ಎದುರು ವಿಲನ್​ ಆಗಿ ಅಬ್ಬರಿಸಿದರೆ ಅವರ ಚಾರ್ಮ್​ ಇನ್ನಷ್ಟು ಹೆಚ್ಚಾಗಲಿದೆ. ಆದರೆ ಈ ವಿಷಯವನ್ನು ಚಿತ್ರತಂಡದವರು ಅಧಿಕೃತವಾಗಿ ಹೇಳುವುದು ಬಾಕಿ ಇದೆ. ಅದಕ್ಕಾಗಿ ಫ್ಯಾನ್ಸ್​ ಕಾದಿದ್ದಾರೆ.

ಸಲ್ಮಾನ್​ ಖಾನ್​ ನಟಿಸಿದ್ದ ‘ಟೈಗರ್​ 3’ ಸಿನಿಮಾ 2023ರಲ್ಲಿ ಬಿಡುಗಡೆ ಆಯಿತು. 2024ರಲ್ಲಿ ಅವರು ಯಾವುದೇ ಸಿನಿಮಾ ಬಿಡುಗಡೆ ಆಗುವುದಿಲ್ಲ. 2025ರಲ್ಲಿ ‘ಸಿಕಂದರ್​’ ಬಿಡುಗಡೆ ಆಗಲಿದೆ. ದೊಡ್ಡ ಗ್ಯಾಪ್​ ಆಗಲಿರುವುದರಿಂದ ಅಭಿಮಾನಿಗಳು ಹೆಚ್ಚು ಕಾತರದಿಂದ ಕಾಯುತ್ತಿರುತ್ತಾರೆ. ಅದಕ್ಕೆ ತಕ್ಕಂತೆ ಈ ಸಿನಿಮಾವನ್ನು ಮಾಡಬೇಕಿದೆ. ಸಾಜಿದ್​ ನಾಡಿಯದ್ವಾಲಾ ಅವರು ‘ಸಿಕಂದರ್​’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: ‘ನನ್ನ ಮದುವೆ ಆಗ್ತೀಯಾ’: ಈ ನಟಿಗೆ ಪ್ರಪೋಸ್​ ಮಾಡಿದ್ದರು ಸಲ್ಮಾನ್​ ಖಾನ್​

‘ಸಿಕಂದರ್​’ ಸಿನಿಮಾದಲ್ಲಿ ಸೌತ್​ ಮಂದಿಯ ಪ್ರಾಬಲ್ಯ ಇರಲಿದೆ. ಎ.ಆರ್​. ಮುರುಗದಾಸ್​ ಅವರು ದಕ್ಷಿಣ ಭಾರತದವರು. ವಿಲನ್​ ಪಾತ್ರ ಮಾಡುತ್ತಾರೆ ಎನ್ನಲಾದ ಸತ್ಯರಾಜ್​ ಕೂಡ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಹೆಸರು ಮಾಡಿದವರು. ಅದೇ ರೀತಿ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಕೂಡ ದಕ್ಷಿಣ ಭಾರತದ ಪ್ರತಿಭೆ. ಆ ಕಾರಣದಿಂದಲೂ ‘ಸಿಕಂದರ್​’ ಸಿನಿಮಾ ವಿಶೇಷ ಎನಿಸಿಕೊಳ್ಳಲಿದೆ.

ಕೆಲವೇ ದಿನಗಳ ಹಿಂದೆ ಸತ್ಯರಾಜ್​ ಬಗ್ಗೆ ಒಂದು ಗಾಸಿಪ್​ ಹಬ್ಬಿತ್ತು. ನರೇಂದ್ರ ಮೋದಿ ಬಯೋಪಿಕ್​ನಲ್ಲಿ ಸತ್ಯರಾಜ್​ ಅವರು ನಟಿಸುತ್ತಾರೆ ಎನ್ನಲಾಗಿತ್ತು. ಆದರೆ ಆ ಸುದ್ದಿ ನಿಜವಲ್ಲ ಎಂದು ಸ್ವತಃ ಸತ್ಯರಾಜ್​ ಅವರು ಸ್ಪಷ್ಟಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ