AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kartik Aaryan: ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ‘ಸತ್ಯಪ್ರೇಮ್​ ಕಿ ಕಥಾ’? ಇಲ್ಲಿದೆ ಬಾಕ್ಸ್​ ಆಫೀಸ್​ ಭವಿಷ್ಯದ ಲೆಕ್ಕಾಚಾರ

Satyaprem Ki Katha: ಕಾರ್ತಿಕ್​ ಆರ್ಯನ್​ ನಟನೆಯ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾದ ಬುಕಿಂಗ್​ಗೆ ಜನರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ಆದ್ದರಿಂದ ಚಿತ್ರತಂಡದವರಿಗೆ ಭರವಸೆ ಚಿಗುರಿದೆ.

Kartik Aaryan: ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ‘ಸತ್ಯಪ್ರೇಮ್​ ಕಿ ಕಥಾ’? ಇಲ್ಲಿದೆ ಬಾಕ್ಸ್​ ಆಫೀಸ್​ ಭವಿಷ್ಯದ ಲೆಕ್ಕಾಚಾರ
ಕಿಯಾರಾ ಅಡ್ವಾಣಿ, ಕಾರ್ತಿಕ್​ ಆರ್ಯನ್​
Follow us
ಮದನ್​ ಕುಮಾರ್​
|

Updated on: Jun 28, 2023 | 6:20 PM

ನಟ ಕಾರ್ತಿಕ್​ ಆರ್ಯನ್​ (Kartik Aaryan) ಅವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ಬಾಲಿವುಡ್​ನಲ್ಲಿ ಅವರು ಬಹುಬೇಡಿಕೆಯ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ಸ್ಟಾರ್​ ನಟನಾದರೂ ಕೂಡ ಅವರು ಸರಳತೆ ಮರೆತಿಲ್ಲ. ಬಾಲಿವುಡ್​ನ ಮೂವೀ ಮಾಫಿಯಾವನ್ನೂ ಎದುರು ಹಾಕಿಕೊಂಡು ಅವರು ಬೆಳೆದಿದ್ದಾರೆ. 2022ರಲ್ಲಿ ಅವರಿಗೆ ‘ಭೂಲ್​ ಭುಲಯ್ಯ 2’ ಸಿನಿಮಾ ಮೂಲಕ ಅಪಾರ ಜನಪ್ರಿಯತೆ ಸಿಕ್ಕಿತು. ಗಲ್ಲಾಪೆಟ್ಟಿಗೆಯಲ್ಲಿ ಆ ಸಿನಿಮಾ ಮೋಡಿ ಮಾಡಿತು. ಕಿಯಾರಾ ಅಡ್ವಾಣಿ (Kiara Advani) ಮತ್ತು ಕಾರ್ತಿಕ್​ ಆರ್ಯನ್​ ಅವರು ಜೋಡಿಯಾಗಿ ನಟಿಸಿದ ಈ ಚಿತ್ರಕ್ಕೆ ಜನಮೆಚ್ಚುಗೆ ಸಿಕ್ಕಿತು. ಈಗ ಅವರಿಬ್ಬರು ಮತ್ತೆ ಒಂದಾಗಿದ್ದು, ‘ಸತ್ಯಪ್ರೇಮ್​ ಕಿ ಕಥಾ’ (Satyaprem Ki Katha) ಸಿನಿಮಾದಲ್ಲಿ ನಟಿಸಿದ್ದಾರೆ. ಜೂನ್​ 29ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಇದರ ಬಾಕ್ಸ್​ ಆಫೀಸ್​ ಭವಿಷ್ಯ ಏನಾಗಲಿದೆ ಎಂಬ ಕೌತುಕ ಮೂಡಿದೆ. ಆ ಬಗ್ಗೆ ಫ್ಯಾನ್ಸ್​ ವಲಯದಲ್ಲಿ ಚರ್ಚೆ ಆಗುತ್ತಿದೆ.

‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾಗೆ ಎರಡು ದಿನಗಳ ಹಿಂದೆ ಬುಕಿಂಗ್​ ಶುರುವಾಯಿತು. ಕಿಯಾರಾ ಅಡ್ವಾಣಿ ಮತ್ತು ಕಾರ್ತಿಕ್​ ಆರ್ಯನ್​ ಅವರ ಹಿಟ್​ ಕಾಂಬಿನೇಷನ್​ ಈ ಸಿನಿಮಾದಲ್ಲಿ ಇರುವುದರಿಂದ ಅಭಿಮಾನಿಗಳಿಗೆ ನಿರೀಕ್ಷೆ ಮನೆ ಮಾಡಿದೆ. ಮೀಡಿಯಂ ಬಜೆಟ್​ನಲ್ಲಿ ಈ ಸಿನಿಮಾ ತಯಾರಾಗಿದೆ. ಹಾಗಾಗಿ ಒಂದು ಹಂತದ ಕಲೆಕ್ಷನ್​ ಮಾಡಿದರೂ ಕೂಡ ನಿರ್ಮಾಪಕರಿಗೆ ಲಾಭ ಆಗಲಿದೆ. ಬುಕಿಂಗ್​ಗೆ ಜನರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ಆದ್ದರಿಂದ ಚಿತ್ರತಂಡದವರಿಗೆ ಭರವಸೆ ಚಿಗುರಿದೆ.

ಇದನ್ನೂ ಓದಿ: Kiara Advani: ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಸಖತ್ ಗ್ಲಾಮರಸ್ ಆಗಿ ಬಂದ ಕಿಯಾರಾ ಅಡ್ವಾಣಿ

ಮೂಲಗಳ ಪ್ರಕಾರ, ‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದ 40 ಸಾವಿರಕ್ಕೂ ಅಧಿಕ ಟಿಕೆಟ್​ಗಳು ಬುಕ್​ ಆಗಿವೆ. ಪಿವಿಆರ್​, ಐನಾಕ್ಸ್​ ಮತ್ತು ಸಿನಿಪೊಲಿಸ್​ ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾದ ಅಡ್ವಾನ್ಸ್​ ಬುಕಿಂಗ್​ಗೆ ಜನರು ಆಸಕ್ತಿ ತೋರಿಸುತ್ತಿದ್ದಾರೆ. ಅದರ ಆಧಾರದ ಮೇಲೆ ಮೊದಲ ದಿನ ಅಂದಾಜು 8ರಿಂದ 10 ಕೋಟಿ ರೂಪಾಯಿ ಕಲೆಕ್ಷನ್​ ಆಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಇದನ್ನೂ ಓದಿ: Karthik Aaryan: ವೇದಿಕೆ ಮೇಲೆ ಚಪ್ಪಲಿ ಹಾಕಿಕೊಳ್ಳಲು ಕಿಯಾರಾಗೆ ಸಹಾಯ ಮಾಡಿದ ಕಾರ್ತಿಕ್​ ಆರ್ಯನ್​; ವಿಡಿಯೋ ವೈರಲ್​

ವೀಕೆಂಡ್​ನಲ್ಲಿ ಖಂಡಿತವಾಗಿಯೂ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾಗೆ ಉತ್ತಮ ಕಮಾಯಿ ಆಗಲಿದೆ ಎಂದು ಟ್ರೇಡ್​ ವಿಶ್ಲೇಷಕರು ಅಂದಾಜಿಸಿದ್ದಾರೆ. ಆದರೆ ಸೋಮವಾರದ ಬಳಿಕ ಯಾವ ರೀತಿ ರೆಸ್ಪಾನ್ಸ್​ ಸಿಗಲಿದೆ ಎಂಬುದು ಮುಖ್ಯವಾಗಲಿದೆ. ಈ ಚಿತ್ರಕ್ಕೆ ಸಮೀರ್​ ವಿದ್ವಾಂಸ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಗೆದ್ದರೆ ಕಾರ್ತಿಕ್​ ಆರ್ಯನ್​ ಅವರ ಹವಾ ಇನ್ನಷ್ಟು ಹೆಚ್ಚಾಗಲಿದೆ. ಅವರಿಗೆ ಇನ್ನಷ್ಟು ಒಳ್ಳೆಯ ಆಫರ್​ಗಳು ಸಿಗಲಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!