AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satyaprem Ki Katha: ಹೇಗಿದೆ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ? ಕಾರ್ತಿಕ್​ ಆರ್ಯನ್​ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..

Satyaprem Ki Katha Twitter Review: ‘ಈ ಸಿನಿಮಾದಲ್ಲಿ ಒಂದು ಶುದ್ಧವಾದ ಪ್ರೇಮ ಕಥೆ ಇದೆ. ಅದರ ಜೊತೆ ಒಂದು ಮಹತ್ವವಾದ ಸಂದೇಶ ಕೂಡ ಇದೆ’ ಎಂದು ಅಭಿಮಾನಿಗಳು ಟ್ವೀಟ್​ ಮಾಡಿದ್ದಾರೆ.

Satyaprem Ki Katha: ಹೇಗಿದೆ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ? ಕಾರ್ತಿಕ್​ ಆರ್ಯನ್​ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..
ಕಿಯಾರಾ ಅಡ್ವಾಣಿ, ಕಾರ್ತಿಕ್​ ಆರ್ಯನ್​
ಮದನ್​ ಕುಮಾರ್​
|

Updated on: Jun 29, 2023 | 3:19 PM

Share

ಕಾರ್ತಿಕ್​ ಆರ್ಯನ್​ (Kartik Aaryan) ಮತ್ತು ಕಿಯಾರಾ ಅಡ್ವಾಣಿ ಅವರು ಜೋಡಿಯಾಗಿ ನಟಿಸಿದ ಸತ್ಯಪ್ರೇಮ್​ ಕಿ ಕಥಾ’ (Satyaprem Ki Katha) ಸಿನಿಮಾ ಇಂದು (ಜೂನ್​ 29) ಬಿಡುಗಡೆ ಆಗಿದೆ. ಈ ಚಿತ್ರದ ಮೇಲೆ ಅವರ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಅದಕ್ಕೆ ತಕ್ಕಂತೆಯೇ ಸಿನಿಮಾ ಮೂಡಿಬಂದಿದೆ. ಬಕ್ರೀದ್​ ಹಬ್ಬದ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಸೆಳೆಯಲು ಇಂದು ಸಿನಿಮಾ ರಿಲೀಸ್​ ಮಾಡಲಾಗಿದೆ. ಮೊದಲ ದಿನ ಮೊದಲ ಶೋ ನೋಡಿ ಬಂದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ (Satyaprem Ki Katha Twitter Review) ಹಂಚಿಕೊಳ್ಳುತ್ತಿದ್ದಾರೆ. ಬಹುತೇಕ ಎಲ್ಲರಿಂದಲೂ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿದೆ.

ಎಲ್ಲ ಶೈಲಿಯ ಸಿನಿಮಾಗಳಿಗೂ ಸೂಕ್ತ ಆಗುವಂತಹ ಕಲಾವಿದ ಕಾರ್ತಿಕ್​ ಆರ್ಯನ್​. ಕಳೆದ ವರ್ಷ ಅವರು ‘ಭೂಲ್​ ಭುಲಯ್ಯ’ ಸಿನಿಮಾ ಮೂಲಕ ಯಶಸ್ಸು ಕಂಡಿದ್ದರು. ಈಗ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ ಮೂಲಕ ಅವರು ಮತ್ತೊಂದು ಗೆಲುವು ಪಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಚಿತ್ರದ ಬುಕಿಂಗ್​ಗೆ ಪ್ರೇಕ್ಷಕರಿಗೆ ಉತ್ತಮ ರೆಸ್ಪಾನ್ಸ್​ ಬಂದಿದೆ. ಮೊದಲ ದಿನ ಈ ಚಿತ್ರಕ್ಕೆ 8ರಿಂದ 10 ಕೋಟಿ ರೂಪಾಯಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಎಲ್ಲರಿಂದ ಉತ್ತಮ ವಿಮರ್ಶೆ ಸಿಗುತ್ತಿದೆ.

‘ಈ ಸಿನಿಮಾದಲ್ಲಿ ಒಂದು ಶುದ್ಧವಾದ ಪ್ರೇಮ ಕಥೆ ಇದೆ. ಅದರ ಜೊತೆ ಒಂದು ಮಹತ್ವವಾದ ಸಂದೇಶ ಕೂಡ ಇದೆ. ಎಲ್ಲರಿಗೂ ಈ ಸಿನಿಮಾ ಇಷ್ಟ ಆಗಲಿದೆ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ. ‘ಒಂದು ಸೀರಿಯಸ್​ ಆದ ವಿಚಾರವನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಇಂಥ ಒಂದು ಸಿನಿಮಾ ನೀಡಿದ್ದಕ್ಕೆ ನಿರ್ದೇಶಕ ಸಮೀರ್​ ವಿದ್ವಾಂಸ್​ ಅವರಿಗೆ ಹ್ಯಾಟ್ಸ್​ಆಫ್​’ ಎಂದು ಕೂಡ ಜನರು ಟ್ವೀಟ್​ ಮಾಡಿದ್ದಾರೆ.

ಕಾರ್ತಿಕ್​ ಆರ್ಯನ್​ ಅವರು ಬಾಲಿವುಡ್​ನಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಬಾಲಿವುಡ್​ ಮೂವೀ ಮಾಫಿಯಾವನ್ನು ಎದುರು ಹಾಕಿಕೊಂಡು ಅವರು ಬೆಳೆದಿದ್ದಾರೆ. ದೊಡ್ಡ ಯಶಸ್ಸು ಸಿಕ್ಕರೂ ಕೂಡ ಅವರ ಸರಳತೆ ಮರೆತಿಲ್ಲ. ಆ ಕಾರಣಕ್ಕಾಗಿ ಕಾರ್ತಿಕ್​ ಆರ್ಯನ್​ ಅವರನ್ನು ಫ್ಯಾನ್ಸ್​ ಇಷ್ಟಪಡುತ್ತಾರೆ. ಇನ್ನು, ಕಿಯಾರಾ ಅಡ್ವಾನಿ ಕೂಡ ಬಹುಬೇಡಿಕೆಯ ಹೀರೋಯಿನ್​ ಆಗಿದ್ದಾರೆ. ಮದುವೆ ಬಳಿಕವೂ ಅವರಿಗೆ ಒಳ್ಳೊಳ್ಳೆಯ ಆಫರ್​ಗಳು ಸಿಗುತ್ತಿವೆ. ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ ಗೆದ್ದರೆ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ