AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satyaprem Ki Katha: ಹೇಗಿದೆ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ? ಕಾರ್ತಿಕ್​ ಆರ್ಯನ್​ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..

Satyaprem Ki Katha Twitter Review: ‘ಈ ಸಿನಿಮಾದಲ್ಲಿ ಒಂದು ಶುದ್ಧವಾದ ಪ್ರೇಮ ಕಥೆ ಇದೆ. ಅದರ ಜೊತೆ ಒಂದು ಮಹತ್ವವಾದ ಸಂದೇಶ ಕೂಡ ಇದೆ’ ಎಂದು ಅಭಿಮಾನಿಗಳು ಟ್ವೀಟ್​ ಮಾಡಿದ್ದಾರೆ.

Satyaprem Ki Katha: ಹೇಗಿದೆ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ? ಕಾರ್ತಿಕ್​ ಆರ್ಯನ್​ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..
ಕಿಯಾರಾ ಅಡ್ವಾಣಿ, ಕಾರ್ತಿಕ್​ ಆರ್ಯನ್​
Follow us
ಮದನ್​ ಕುಮಾರ್​
|

Updated on: Jun 29, 2023 | 3:19 PM

ಕಾರ್ತಿಕ್​ ಆರ್ಯನ್​ (Kartik Aaryan) ಮತ್ತು ಕಿಯಾರಾ ಅಡ್ವಾಣಿ ಅವರು ಜೋಡಿಯಾಗಿ ನಟಿಸಿದ ಸತ್ಯಪ್ರೇಮ್​ ಕಿ ಕಥಾ’ (Satyaprem Ki Katha) ಸಿನಿಮಾ ಇಂದು (ಜೂನ್​ 29) ಬಿಡುಗಡೆ ಆಗಿದೆ. ಈ ಚಿತ್ರದ ಮೇಲೆ ಅವರ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಅದಕ್ಕೆ ತಕ್ಕಂತೆಯೇ ಸಿನಿಮಾ ಮೂಡಿಬಂದಿದೆ. ಬಕ್ರೀದ್​ ಹಬ್ಬದ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಸೆಳೆಯಲು ಇಂದು ಸಿನಿಮಾ ರಿಲೀಸ್​ ಮಾಡಲಾಗಿದೆ. ಮೊದಲ ದಿನ ಮೊದಲ ಶೋ ನೋಡಿ ಬಂದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ (Satyaprem Ki Katha Twitter Review) ಹಂಚಿಕೊಳ್ಳುತ್ತಿದ್ದಾರೆ. ಬಹುತೇಕ ಎಲ್ಲರಿಂದಲೂ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿದೆ.

ಎಲ್ಲ ಶೈಲಿಯ ಸಿನಿಮಾಗಳಿಗೂ ಸೂಕ್ತ ಆಗುವಂತಹ ಕಲಾವಿದ ಕಾರ್ತಿಕ್​ ಆರ್ಯನ್​. ಕಳೆದ ವರ್ಷ ಅವರು ‘ಭೂಲ್​ ಭುಲಯ್ಯ’ ಸಿನಿಮಾ ಮೂಲಕ ಯಶಸ್ಸು ಕಂಡಿದ್ದರು. ಈಗ ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ ಮೂಲಕ ಅವರು ಮತ್ತೊಂದು ಗೆಲುವು ಪಡೆಯುವ ಸಾಧ್ಯತೆ ದಟ್ಟವಾಗಿದೆ. ಈ ಚಿತ್ರದ ಬುಕಿಂಗ್​ಗೆ ಪ್ರೇಕ್ಷಕರಿಗೆ ಉತ್ತಮ ರೆಸ್ಪಾನ್ಸ್​ ಬಂದಿದೆ. ಮೊದಲ ದಿನ ಈ ಚಿತ್ರಕ್ಕೆ 8ರಿಂದ 10 ಕೋಟಿ ರೂಪಾಯಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಎಲ್ಲರಿಂದ ಉತ್ತಮ ವಿಮರ್ಶೆ ಸಿಗುತ್ತಿದೆ.

‘ಈ ಸಿನಿಮಾದಲ್ಲಿ ಒಂದು ಶುದ್ಧವಾದ ಪ್ರೇಮ ಕಥೆ ಇದೆ. ಅದರ ಜೊತೆ ಒಂದು ಮಹತ್ವವಾದ ಸಂದೇಶ ಕೂಡ ಇದೆ. ಎಲ್ಲರಿಗೂ ಈ ಸಿನಿಮಾ ಇಷ್ಟ ಆಗಲಿದೆ’ ಎಂದು ಅಭಿಮಾನಿಯೊಬ್ಬರು ಟ್ವೀಟ್​ ಮಾಡಿದ್ದಾರೆ. ‘ಒಂದು ಸೀರಿಯಸ್​ ಆದ ವಿಚಾರವನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಇಂಥ ಒಂದು ಸಿನಿಮಾ ನೀಡಿದ್ದಕ್ಕೆ ನಿರ್ದೇಶಕ ಸಮೀರ್​ ವಿದ್ವಾಂಸ್​ ಅವರಿಗೆ ಹ್ಯಾಟ್ಸ್​ಆಫ್​’ ಎಂದು ಕೂಡ ಜನರು ಟ್ವೀಟ್​ ಮಾಡಿದ್ದಾರೆ.

ಕಾರ್ತಿಕ್​ ಆರ್ಯನ್​ ಅವರು ಬಾಲಿವುಡ್​ನಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಬಾಲಿವುಡ್​ ಮೂವೀ ಮಾಫಿಯಾವನ್ನು ಎದುರು ಹಾಕಿಕೊಂಡು ಅವರು ಬೆಳೆದಿದ್ದಾರೆ. ದೊಡ್ಡ ಯಶಸ್ಸು ಸಿಕ್ಕರೂ ಕೂಡ ಅವರ ಸರಳತೆ ಮರೆತಿಲ್ಲ. ಆ ಕಾರಣಕ್ಕಾಗಿ ಕಾರ್ತಿಕ್​ ಆರ್ಯನ್​ ಅವರನ್ನು ಫ್ಯಾನ್ಸ್​ ಇಷ್ಟಪಡುತ್ತಾರೆ. ಇನ್ನು, ಕಿಯಾರಾ ಅಡ್ವಾನಿ ಕೂಡ ಬಹುಬೇಡಿಕೆಯ ಹೀರೋಯಿನ್​ ಆಗಿದ್ದಾರೆ. ಮದುವೆ ಬಳಿಕವೂ ಅವರಿಗೆ ಒಳ್ಳೊಳ್ಳೆಯ ಆಫರ್​ಗಳು ಸಿಗುತ್ತಿವೆ. ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾ ಗೆದ್ದರೆ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ