AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್ ಗಂಗೂಲಿ ಬಯೋಪಿಕ್​ನಲ್ಲಿ ರಣಬೀರ್ ಬದಲಿಗೆ ಆಯುಷ್ಮಾನ್ ಖುರಾನಾ?

ಆಯುಷ್ಮಾನ್ ಖುರಾನಾ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ‘ಡ್ರೀಮ್ ಗರ್ಲ್​ 2’ ಚಿತ್ರದ ಮೂಲಕ ಅವರು ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅವರಿಗೆ ಆಫರ್ ಸಂಖ್ಯೆ ಹೆಚ್ಚುತ್ತಿದೆ. ಗಂಗೂಲಿ ಬಯೋಪಿಕ್​ನಲ್ಲಿ ರಣಬೀರ್ ಕಪೂರ್ ಬದಲಿಗೆ ಆಯುಷ್ಮಾನ್ ಅವರನ್ನು ಹೀರೋ ಆಗಿ ಆಯ್ಕೆ ಮಾಡಿಕೊಳ್ಳಲು ತಂಡದವರು ಹೆಚ್ಚಿನ ಉತ್ಸಾಹ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸೌರವ್ ಗಂಗೂಲಿ ಬಯೋಪಿಕ್​ನಲ್ಲಿ ರಣಬೀರ್ ಬದಲಿಗೆ ಆಯುಷ್ಮಾನ್ ಖುರಾನಾ?
ಆಯುಷ್ಮಾನ್-ಸೌರವ್ ಗಂಗೂಲಿ
ರಾಜೇಶ್ ದುಗ್ಗುಮನೆ
|

Updated on: Sep 05, 2023 | 12:07 PM

Share

ಸೌರವ್ ಗಂಗೂಲಿ (Saurav Ganguly) ಅವರು ದೇಶ ಕಂಡ ಮಹಾನ್ ಕ್ರಿಕೆಟರ್. ದಾದಾ ಎಂದೇ ಫೇಮಸ್ ಆದ ಅವರು ಬಿಸಿಸಿಐನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಹಲವು ದಾಖಲೆಗಳು ಇವರ ಹೆಸರಲ್ಲಿ ಇವೆ. ಸೌರವ್ ಗಂಗೂಲಿ ಬಯೋಪಿಕ್ ಸಿದ್ಧವಾಗುತ್ತಿದೆ. ಈ ಬಯೋಪಿಕ್​ನಲ್ಲಿ ಗಂಗೂಲಿ ಪಾತ್ರದಲ್ಲಿ ರಣಬೀರ್ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈಗ ಹೀರೋ ಬದಲಾಗುವ ಸೂಚನೆ ಸಿಕ್ಕಿದೆ. ರಣಬೀರ್ ಬದಲು ಆಯುಷ್ಮಾನ್ ಖುರಾನಾ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆಯುಷ್ಮಾನ್ ಖುರಾನಾ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ‘ಡ್ರೀಮ್ ಗರ್ಲ್​ 2’ ಚಿತ್ರದ ಮೂಲಕ ಅವರು ಗೆಲುವಿನ ಟ್ರ್ಯಾಕ್​ಗೆ ಮರಳಿದ್ದಾರೆ. ಅವರಿಗೆ ಆಫರ್ ಸಂಖ್ಯೆ ಹೆಚ್ಚುತ್ತಿದೆ. ಗಂಗೂಲಿ ಬಯೋಪಿಕ್​ನಲ್ಲಿ ರಣಬೀರ್ ಕಪೂರ್ ಬದಲಿಗೆ ಆಯುಷ್ಮಾನ್ ಅವರನ್ನು ಹೀರೋ ಆಗಿ ಆಯ್ಕೆ ಮಾಡಿಕೊಳ್ಳಲು ತಂಡದವರು ಹೆಚ್ಚಿನ ಉತ್ಸಾಹ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಕೇಳಿದಾಗ ಆಯುಷ್ಮಾನ್ ಅವರು ಒಪ್ಪಿಕೊಂಡಿಲ್ಲ, ಅಲ್ಲಗಳೆಯಲೂ ಇಲ್ಲ.

‘ಡ್ರೀಮ್ ಗರ್ಲ್ 2’ ಗೆಲುವಿನ ಬಳಿಕ ಅನೇಕ ಮಾಧ್ಯಮಗಳಿಗೆ ಆಯುಷ್ಮಾನ್ ಅವರು ಸಂದರ್ಶನ ನೀಡಿದ್ದಾರೆ. ‘ನಾನು ಈ ಬಗ್ಗೆ ಏನನ್ನೂ ಹೇಳಲು ಸಾಧ್ಯವಿಲ್ಲ. ಏನೇ ಆದರೂ ಅದನ್ನು ನಾವು ಅಧಿಕೃತವಾಗಿಯೇ ತಿಳಿಸಬೇಕಾಗುತ್ತದೆ’ ಎಂದಿದ್ದಾರೆ ಆಯುಷ್ಮಾನ್. ಒಂದೊಮ್ಮೆ ಈ ವಿಚಾರ ವದಂತಿಯೇ ಆಗಿದ್ದರೆ ಆಯುಷ್ಮಾನ್ ನೇರವಾಗಿ ಅದನ್ನು ಅಲ್ಲಗಳೆಯುತ್ತಿದ್ದರು. ಆದರೆ, ಅವರು ಹಾಗೆ ಮಾಡಿಲ್ಲ. ಹೀಗಾಗಿ ಅವರ ಮಾತುಗಳು ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: 60 ಕೋಟಿ ರೂಪಾಯಿ ಗಳಿಸಿದ ‘ಡ್ರೀಮ್ ಗರ್ಲ್ 2’: ‘ಗದರ್ 2’ ಅಬ್ಬರದ ನಡುವೆಯೂ ಗೆದ್ದ ಆಯುಷ್ಮಾನ್​

ಇನ್ನು, ‘ಡ್ರೀಮ್ ಗರ್ಲ್ 3’ಗೆ ಸಿದ್ಧತೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ‘ಡ್ರೀಮ್ ಗರ್ಲ್’ ಹಾಗೂ ‘ಡ್ರೀಮ್ ಗರ್ಲ್​ 2’ ಎರಡೂ ಸಿನಿಮಾ ಹಿಟ್ ಆಗಿರುವುದರಿಂದ ನಿರ್ದೇಶಕ ರಾಜ್ ಶಾಂಡಿಲ್ಯ ಅವರು ಈ ಸರಣಿಯ ಮೂರನೇ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿದೆ. ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಡ್ರೀಮ್ ಗರ್ಲ್ 2’ ಸಿನಿಮಾ ಈವರೆಗೆ 91 ಕೋಟಿ ರೂಪಾಯಿ ಬಾಚಿಕೊಂಡಿದೆ. ಅನನ್ಯಾ ಪಾಂಡೆ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಹೆಣ್ಣಿನ ಧ್ವನಿಯಲ್ಲಿ ಮಾತನಾಡಿ ಎಲ್ಲರನ್ನೂ ಯಾಮಾರಿಸುವ ವ್ಯಕ್ತಿಯಾಗಿ ಆಯುಷ್ಮಾನ್ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು