AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗೆ ಶಾರುಖ್​ ಚಿತ್ರದಿಂದ ಮೋಸ;​ 15 ಸಾವಿರ ದಂಡ ವಿಧಿಸಿದ ಸುಪ್ರೀಂ ಕೋರ್ಟ್; ಇದು ಇಂಟರೆಸ್ಟಿಂಗ್​ ಕೇಸ್​

‘ಟ್ರೇಲರ್​​ನಲ್ಲಿ ಏನೋ ತೋರಿಸಿ, ಸಿನಿಮಾದಲ್ಲಿ ಮತ್ತಿನ್ನೇನೋ ತೋರಿಸಿದರೆ ಅದು ಜನರಿಗೆ ಮೋಸ ಮಾಡಿದಂತೆ ಆಗುತ್ತದೆ’ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.​ ಅಲ್ಲದೇ, ನೊಂದ ಅಭಿಮಾನಿಗೆ 15 ಸಾವಿರ ರೂ. ಪರಿಹಾರ ನೀಡುವಂತೆ ನಿರ್ಮಾಪಕರಿಗೆ ಆದೇಶಿಸಿದೆ.

ಅಭಿಮಾನಿಗೆ ಶಾರುಖ್​ ಚಿತ್ರದಿಂದ ಮೋಸ;​ 15 ಸಾವಿರ ದಂಡ ವಿಧಿಸಿದ ಸುಪ್ರೀಂ ಕೋರ್ಟ್; ಇದು ಇಂಟರೆಸ್ಟಿಂಗ್​ ಕೇಸ್​
‘ಫ್ಯಾನ್​’ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Sep 21, 2021 | 8:03 AM

Share

ದೊಡ್ಡ ದೊಡ್ಡ ತಕರಾರುಗಳ ಕಾರಣಕ್ಕೆ ಸೆಲೆಬ್ರಿಟಿಗಳು ಕೋರ್ಟ್​ ಮೆಟ್ಟಿಲು ಹತ್ತಬೇಕಾಗುತ್ತದೆ. ಆದರೆ ಇಲ್ಲೊಂದು ವಿಲಕ್ಷಣ ಪ್ರಕರಣದಲ್ಲಿ ಶಾರುಖ್​ ಖಾನ್​ ನಟನೆಯ ‘ಫ್ಯಾನ್​’ ಚಿತ್ರತಂಡ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ಎದುರಿಸಬೇಕಾಯಿತು. ಅಲ್ಲದೇ ಈ ಸಿನಿಮಾ ನಿರ್ಮಾಣ ಮಾಡಿದ ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಗೆ ಕೋರ್ಟ್​ ಛೀಮಾರಿ ಹಾಕಿದೆ. ‘ಫ್ಯಾನ್​’ ಸಿನಿಮಾದಿಂದ ನಿರಾಸೆಗೊಂಡ ಅಭಿಮಾನಿಗೆ 15 ಸಾವಿರ ರೂ. ಪರಿಹಾರ ಕೊಡುವಂತೆ ಆದೇಶಿಸಿದೆ. ಅಷ್ಟಕ್ಕೂ ಈ ಸಿನಿಮಾ ಮಾಡಿದ ತಪ್ಪೇನು? ಅಭಿಮಾನಿಯನ್ನು ನಂಬಿಸಿ ಮೋಸ ಮಾಡಿದ್ದು!

ಶಾರುಖ್​ ಖಾನ್​ ನಟನೆಯ ಫ್ಯಾನ್​ ಸಿನಿಮಾ 2016ರಲ್ಲಿ ತೆರೆಕಂಡಿತ್ತು. ಆ ಚಿತ್ರದ ಪ್ರಮೋಷನ್​ಗಾಗಿ ‘ಜಬ್ರಾ ಫ್ಯಾನ್​..’ ಎಂಬ ಹಾಡನ್ನು ರಿಲೀಸ್​ ಮಾಡಲಾಗಿತ್ತು. ಅದನ್ನು ನೋಡಿದ ಅಫ್ರೀನ್​ ಫಾತಿಮಾ ಜೈದಿ ಎಂಬ ಅಭಿಮಾನಿಯು ತುಂಬ ಖುಷಿಪಟ್ಟಿದ್ದರು. ಹಾಗಾಗಿ ಸಿನಿಮಾ ನೋಡಲು ಕುಟುಂಬ ಸಮೇತ ಅವರು ಚಿತ್ರಮಂದಿರಕ್ಕೆ ತೆರಳಿದ್ದರು. ಆದರೆ ಸಿನಿಮಾದಲ್ಲಿ ಆ ಹಾಡು ಬರಲೇ ಇಲ್ಲ! ಅದರಿಂದ ನಿರಾಸೆಗೊಂಡ ಅವರು ‘ಫ್ಯಾನ್​’ ಚಿತ್ರತಂಡದ ವಿರುದ್ಧ ದೂರು ನೀಡಿದ್ದರು. ಆ ಸಂಬಂಧ ಸುಪ್ರೀಂ ಕೋರ್ಟ್​ ಈಗ ತೀರ್ಪು ನೀಡಿದೆ.

‘ಶಾರುಖ್​ ನಟನೆಯ ‘ಫ್ಯಾನ್’​ ಸಿನಿಮಾದಿಂದ ನನಗೆ ಮೋಸ ಆಗಿದೆ. ಬಹಳ ಆಸೆಯಿಂದ ಚಿತ್ರಮಂದಿರಕ್ಕೆ ಹೋಗಿ ನೋಡಿದರೆ ಸಿನಿಮಾದಲ್ಲಿ ‘ಜಬ್ರಾ ಫ್ಯಾನ್​..’ ಸಾಂಗ್​ ಬರಲೇ ಇಲ್ಲ. ಇದರಿಂದ ನನ್ನ ಮಕ್ಕಳಿಗೆ ತುಂಬ ನಿರಾಸೆ ಆಯಿತು. ಅಂದು ರಾತ್ರಿ ಮಕ್ಕಳು ಊಟ ಮಾಡಲೇ ಇಲ್ಲ.  ಇದರಿಂದ ಅವರಿಗೆ ಆ್ಯಸಿಡಿಟಿ ಹೆಚ್ಚಾಗಿ, ಆಸ್ಪತ್ರೆಗೆ ಸೇರಿಸಬೇಕಾಯಿತು’ ಎಂದು ತಮ್ಮ ದೂರಿನಲ್ಲಿ ಅಫ್ರೀನ್​ ಫಾತಿಮಾ ಜೈದಿ ಉಲ್ಲೇಖಿಸಿದ್ದರು.

‘ಈ ರೀತಿ ಪ್ರಮೋಷನಲ್​ ಸಾಂಗ್​ ಮಾಡುವುದು ಸಹಜ ಸಂಗತಿ’ ಎಂದು ‘ಫ್ಯಾನ್​’ ಸಿನಿಮಾ ನಿರ್ಮಾಪಕರ ಪರ  ವಕೀಲರು ವಾದ ಮಾಡಿದರು. ಆದರೆ ಅದನ್ನು ಸುಪ್ರೀಂ ಕೋರ್ಟ್​ ನ್ಯಾಯಾಧೀಶರು ಒಪ್ಪಲಿಲ್ಲ. ‘ಟ್ರೇಲರ್​​ನಲ್ಲಿ ಏನೋ ತೋರಿಸಿ, ಸಿನಿಮಾದಲ್ಲಿ ಮತ್ತಿನ್ನೇನೋ ತೋರಿಸಿದರೆ ಅದು ಜನರಿಗೆ ಮೋಸ ಮಾಡಿದಂತೆ ಆಗುತ್ತದೆ. ಸಿನಿಮಾದಲ್ಲಿ ಆ ಸಾಂಗ್​ ಇಲ್ಲ ಎಂದಮೇಲೆ ಅದರನ್ನು ಪ್ರಚಾರಕ್ಕಾಗಿ ಯಾಕೆ ಬಳಸಿಕೊಳ್ಳಬೇಕು? ಇಂಥ ಸಂಗತಿಗಳು ನಿಲ್ಲಬೇಕು’ ಎಂದು ಹೇಳಿರುವ ಕೋರ್ಟ್​​, ಆ ಅಭಿಮಾನಿಗೆ 15 ಸಾವಿರ ರೂ. ಪರಿಹಾರ ನೀಡುವಂತೆ ‘ಫ್ಯಾನ್​’ ಚಿತ್ರದ ನಿರ್ಮಾಪಕರಿಗೆ ಆದೇಶಿಸಿದೆ.

ಭಾರಿ ನಿರೀಕ್ಷೆಯೊಂದಿಗೆ ಬಿಡುಗಡೆ ಆಗಿದ್ದ ‘ಫ್ಯಾನ್​’ ಚಿತ್ರ ಬಾಕ್ಸ್​ಆಫೀಸ್​ನಲ್ಲಿ ಹೀನಾಯವಾಗಿ ಸೋತಿತ್ತು. ಈಗ ಸುಪ್ರೀಂ ಕೋರ್ಟ್​​ನಿಂದ ದಂಡ ಹಾಕಿಸಿಕೊಂಡು ಮತ್ತೆ ನಷ್ಟ ಅನುಭವಿಸುವಂತಾಗಿದೆ. ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಗೆ 15 ಸಾವಿರ ರೂ. ದಂಡ ದೊಡ್ಡ ಮೊತ್ತವೇನಲ್ಲ. ಆದರೆ ರಾಷ್ಟ್ರಮಟ್ಟದಲ್ಲಿ ಮುಖಭಂಗ ಆಗಿರುವುದು ಆ ಸಂಸ್ಥೆಯ ಪ್ರತಿಷ್ಠೆಗೆ ಪೆಟ್ಟು ಬಿದ್ದಂತೆಯೇ ಸರಿ.

ಇದನ್ನೂ ಓದಿ:

‘ಶಾರುಖ್​ ಖಾನ್​ರದ್ದು ಅತಿ ಕೆಟ್ಟ ಮತ್ತು ಸಹಿಸಲಾಗದ ನಟನೆ’; ಪತ್ನಿ ಗೌರಿ ಹೀಗೆ ಹೇಳಿದ್ದು ಯಾಕೆ?

ಸೋತು ಸುಣ್ಣವಾದ ಶಾರುಖ್​ಗೆ ಈಗ ಓಟಿಟಿ ಅನಿವಾರ್ಯ; ಸತ್ಯ ಒಪ್ಪಿಕೊಂಡು ವಿಡಿಯೋ ಶೇರ್​ ಮಾಡಿದ ನಟ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?