AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selfiee Collection: ಕಷ್ಟದಲ್ಲಿದೆ ಅಕ್ಷಯ್​ ಕುಮಾರ್​ ಭವಿಷ್ಯ; ‘ಸೆಲ್ಫೀ’ ಬಗ್ಗೆ ನಿರಾಸಕ್ತಿ ತೋರಿಸುತ್ತಿರುವ ಸಿನಿಪ್ರಿಯರು

Selfiee First Day Collection: ಅಕ್ಷಯ್​ ಕುಮಾರ್​ ನಟನೆಯ ‘ಸೆಲ್ಫೀ’ ಚಿತ್ರಕ್ಕೆ ಜನರಿಂದ ನೀರಸ ಪ್ರತಿಕ್ರಿಯೆ ಸಿಗಲು ಕಾರಣ ಏನು? ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

Selfiee Collection: ಕಷ್ಟದಲ್ಲಿದೆ ಅಕ್ಷಯ್​ ಕುಮಾರ್​ ಭವಿಷ್ಯ; ‘ಸೆಲ್ಫೀ’ ಬಗ್ಗೆ ನಿರಾಸಕ್ತಿ ತೋರಿಸುತ್ತಿರುವ ಸಿನಿಪ್ರಿಯರು
ಅಕ್ಷಯ್ ಕುಮಾರ್
Follow us
ಮದನ್​ ಕುಮಾರ್​
|

Updated on:Feb 24, 2023 | 6:30 PM

ಪ್ರೇಕ್ಷಕರು ಯಾವ ಚಿತ್ರವನ್ನು ಮೆಚ್ಚಿಕೊಳ್ಳುತ್ತಾರೆ? ಯಾವ ಚಿತ್ರವನ್ನು ತೆಗಳುತ್ತಾರೆ ಅಂತ ಊಹಿಸೋದು ಕಷ್ಟ. ಎಷ್ಟೋ ವರ್ಷಗಳಿಂದ ಚಿತ್ರರಂಗದಲ್ಲಿ ಪಳಗಿದವರಿಗೂ ಇದರ ಜಡ್ಜ್​ಮೆಂಟ್​ ಸರಿಯಾಗಿ ಸಿಗಲ್ಲ. ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಈ ವರ್ಷ ‘ಸೆಲ್ಫೀ’ ಸಿನಿಮಾ ಮೂಲಕ ತಮ್ಮ ಖಾತೆ ತೆರೆದಿದ್ದಾರೆ. ಫೆಬ್ರವರಿ 24ರಂದು ಈ ಚಿತ್ರ ರಿಲೀಸ್​ ಆಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಆಗುತ್ತಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ದೊಡ್ಡ ಓಪನಿಂಗ್​ ಪಡೆಯುವಲ್ಲಿ ‘ಸೆಲ್ಫೀ’ ಸಿನಿಮಾ (Selfiee Movie) ವಿಫಲವಾಗಿದೆ. ಈ ಸಿನಿಮಾದಲ್ಲಿ ಇಮ್ರಾನ್​ ಹಶ್ಮಿ ಕೂಡ ನಟಿಸಿದ್ದಾರೆ. ಇಬ್ಬರು ಸ್ಟಾರ್​ ನಟರು ಇದ್ದರೂ ಸಹ ಗಲ್ಲಾಪೆಟ್ಟಿಗೆಯಲ್ಲಿ ಆಶಾದಾಯಕ ವಾತಾವರಣ ಕಾಣುತ್ತಿಲ್ಲ. ಮೊದಲ ದಿನದ ಬಾಕ್ಸ್​ ಆಫೀಸ್​ ಕಲೆಕ್ಷನ್​ (Selfiee Box Office Collection) ರಿಪೋರ್ಟ್​ಗಾಗಿ ಕಾಯಲಾಗುತ್ತಿದೆ.

2022ರಲ್ಲಿ ಅಕ್ಷಯ್​ ಕುಮಾರ್ ನಟಿಸಿದ್ದ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಸೋತಿದ್ದವು. ‘ಸಾಮ್ರಾಟ್​ ಪೃಥ್ವಿರಾಜ್​’, ‘ರಕ್ಷಾ ಬಂಧನ್​’, ‘ರಾಮ್​ ಸೇತು’ ಸಿನಿಮಾಗಳು ಕೈ ಹಿಡಿಯಲಿಲ್ಲ. 2023ರಲ್ಲಾದರೂ ಅವರು ಗೆಲುವಿನ ನಗೆ ಬೀರಲಿ ಎಂಬುದು ಫ್ಯಾನ್ಸ್​ ಬಯಕೆ. ಆದರೆ ಪ್ರೇಕ್ಷಕರು ‘ಸೆಲ್ಫೀ’ ಚಿತ್ರದ ಕೈ ಹಿಡಿಯುವ ಲಕ್ಷಣ ಕಾಣುತ್ತಿಲ್ಲ.

ಇದನ್ನೂ ಓದಿ: Akshay Kumar: ಭಾರತದ ಭೂಪಟ ತುಳಿದ ಅಕ್ಷಯ್​ ಕುಮಾರ್​; ವೈರಲ್​ ವಿಡಿಯೋ ನೋಡಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಇದನ್ನೂ ಓದಿ
Image
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Image
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

ಮೊದಲ ದಿನದ ಅಡ್ವಾನ್ಸ್​ ಬುಕಿಂಗ್​ ಗಮನಿಸಿದರೆ ಚಿತ್ರತಂಡಕ್ಕೆ ನಿರಾಸೆ ಆಗುವಂತಿದೆ. ಹಾಗಾಗಿ ಅಕ್ಷಯ್​ ಕುಮಾರ್ ಅವರ ಇತ್ತೀಚಿನ ಸಿನಿಮಾಗಳ ಪೈಕಿ ಮೊದಲ ದಿನ ಅತಿ ಕಡಿಮೆ ಕಲೆಕ್ಷನ್​ ಮಾಡಿದ ಚಿತ್ರ ಎಂಬ ಅಪಖ್ಯಾತಿಯೂ ‘ಸೆಲ್ಫೀ’ ಪಾಲಾಗಬಹುದು. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಲಿವುಡ್​ ಪ್ರೇಕ್ಷಕರಿಗೆ ಈ ಸಿನಿಮಾದ ಕಥೆ ಇಷ್ಟ ಆದಂತಿಲ್ಲ. ಹೆಚ್ಚೆಂದರೆ 4 ಕೋಟಿ ರೂಪಾಯಿ ಕಲೆಕ್ಷನ್​ ಆಗಬಹುದು ಅಷ್ಟೇ ಎಂದು ಅಂದಾಜಿಸಲಾಗುತ್ತಿದೆ.

ಇದನ್ನೂ ಓದಿ: Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ

‘ಸೆಲ್ಫೀ’ ಚಿತ್ರಕ್ಕೆ ಜನರಿಂದ ನೀರಸ ಪ್ರತಿಕ್ರಿಯೆ ಸಿಗಲು ಕಾರಣ ಏನು? ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಇದು ಮಲಯಾಳಂನ ‘ಡ್ರೈವಿಂಗ್​ ಲೈಸೆನ್ಸ್​’ ಚಿತ್ರದ ಹಿಂದಿ ರಿಮೇಕ್​. ಒಟಿಟಿಯಲ್ಲಿ ಮೂಲ ಸಿನಿಮಾವನ್ನು ಜನರು ಈಗಾಗಲೇ ನೋಡಿರುವುದರಿಂದ ರಿಮೇಕ್​ಗೆ ಕಲೆಕ್ಷನ್​ ಡಲ್​ ಆಗಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ರಿಲೀಸ್​ ಆದ ‘ಶೆಹಜಾದ್​’ ಚಿತ್ರಕ್ಕೂ ಇದೇ ಗತಿ ಬಂದಿತ್ತು. ಅದು ತೆಲುಗಿನ ‘ಅಲಾ ವೈಕುಂಠಪುರಮುಲೋ’ ಸಿನಿಮಾದ ರಿಮೇಕ್​ ಆಗಿತ್ತು.

‘ಸೆಲ್ಫೀ’ ಚಿತ್ರಕ್ಕೆ ಶನಿವಾರದ (ಫೆ.25) ಅಡ್ವಾನ್ಸ್​ ಬುಕಿಂಗ್​ ಕೂಡ ಆಶಾದಾಯಕವಾಗಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಅಕ್ಷಯ್​ ಕುಮಾರ್​ ಅವರ ಭವಿಷ್ಯ ಕಷ್ಟವಾಗಲಿದೆ. ಅವರು ಸ್ಕ್ರಿಪ್ಟ್​ ಆಯ್ಕೆಯಲ್ಲಿ ಹೊಸ ಪ್ರಯೋಗ ಮಾಡಬೇಕಾಗುತ್ತದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:30 pm, Fri, 24 February 23

ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್