AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಜನಪ್ರಿಯ ನಟಿ ಸುಲೋಚನಾ ನಿಧನ

Sulochana Latkar: ಹಿಂದಿ ಹಾಗೂ ಮರಾಠಿ ಚಿತ್ರರಂಗದ ಬಹು ಹಿರಿಯ ನಟಿ, ಹಲವು ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಂಡಿರುವ ಪದ್ಮಶ್ರೀ ಸುಲೋಚನಾ ಲಾಟ್ಕರ್ ನಿಧನ ಹೊಂದಿದ್ದಾರೆ.

ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಜನಪ್ರಿಯ ನಟಿ ಸುಲೋಚನಾ ನಿಧನ
ಸುಲೋಚನಾ ಲಾಟ್ಕರ್
ಮಂಜುನಾಥ ಸಿ.
|

Updated on: Jun 04, 2023 | 10:06 PM

Share

ಹಿಂದಿ ಚಿತ್ರರಂಗ (Bollywood) ಹಾಗೂ ಮರಾಠಿ ಚಿತ್ರರಂಗದಲ್ಲಿ (Marathi Industry) ಬಹು ವರ್ಷಗಳ ಕಾಲ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಸುಲೋಚನಾ ಲಾಟ್ಕರ್ (Sulochana Latkar) ಇಂದು (ಜೂನ್ 04) ರಂದು ನಿಧನ ಹೊಂದಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಹಿಂದಿಯ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುಲೋಚನಾ, ಮರಾಠಿಯಲ್ಲಿಯೂ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟಿಯ ಸಾಧನೆ ಗುರುತಿಸಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸುಲೋಚನಾ ಅವರ ಸಹೋದರ, ಸುಲೋಚನಾ ನಿಧನದ ಬಗ್ಗೆ ಮಾಹಿತಿ ನೀಡಿದ್ದು, ಸುಲೋಚನಾ ಅವರಿಗೆ ವಯೋಸಹಜ ಆರೋಗ್ಯ ಸಮಸ್ಯೆಗಳಿದ್ದವು. ಅವರಿಗೆ ಉಸಿರಾಟದ ಸಮಸ್ಯೆ ತೀವ್ರವಾಗಿತ್ತು. ಅವರು ಇಂದು (ಜೂನ್ 04) ಸಂಜೆ ಆರು ಗಂಟೆಗೆ ನಿಧನರಾದರು ಎಂದಿದ್ದಾರೆ. ನಟಿ ಸುಲೋಚನಾ ಅವರ ಅಂತಿಮ ದರ್ಶನವನ್ನು ಸೋಮವಾರದಂದು ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸುಲೋಚಾ ಅವರು ತಾಯಿಯ ಪಾತ್ರಗಳಿಂದ ಜನಪ್ರಿಯರಾಗಿದ್ದರು. ಅಮಿತಾಬ್ ಬಚ್ಚನ್, ದೇವ್ ಆನಂದ್, ಮನೋಜ್ ಕುಮಾರ್ ಸೇರಿದಂತೆ ಹಿಂದಿಯ ಹಲವು ಸ್ಟಾರ್ ನಟರ ತಾಯಿಯ ಪಾತ್ರದಲ್ಲಿ ಮಿಂಚಿದ್ದಾರೆ. ಸುಲೋಚನಾ ಅವರು 85ನೇ ಹುಟ್ಟುಹಬ್ಬಕ್ಕೆ ಅತಿಥಿಯಾಗಿ ಆಗಮಿಸಿದ್ದ ನಟ ಅಮಿತಾಬ್ ಬಚ್ಚನ್, ”ಸುಲೋಚನಾ ಅವರಿಗೆ 86 ನೇ ಹುಟ್ಟುಹಬ್ಬದ ಶುಭಾಶಯಗಳು. ಹಲವಾರು ಸಿನಿಮಾಗಳಲ್ಲಿ ನನ್ನ ತಾಯಿಯ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ. ಅವರೆ ಮನೆಗೆ ಹೋಗಿ ನಮಸ್ಕರಿಸಿದೆನು. ಸುಲೋಚನಾ ಜೀ, ಚಲನಚಿತ್ರಗಳಲ್ಲಿ ಅನೇಕ ನಾಯಕ ನಟರಿಗೆ ತಾಯಿ ಆಗಿದ್ದಾರೆ. ಅವರದ್ದು ಮೃದುವಾದ ಸೌಮ್ಯ ಮತ್ತು ಪ್ರೀತಿಯ ವ್ಯಕ್ತಿತ್ವ. ಅವರಿಗೆ 86 ನೇ ಹುಟ್ಟುಹಬ್ಬ” ಎಂದು ಬರೆದುಕೊಂಡಿದ್ದರು.

ಬಾಲಿವುಡ್ ಹಾಗೂ ಮರಾಠಿ ಎರಡೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ, ನಿರ್ಮಾಪಕ ರಿತೇಶ್ ದೇಶ್​ಮುಖ್ ಸಹ ಸುಲೋಚನಾ ಅವರ ಸಾವಿನ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ”ಸುಲೋಚನಾ ದೀದಿಯವರ ಸಾವಿನ ಸುದ್ದಿ ಬಹಳ ಬೇಸರ ತರಿಸಿದೆ. ಮರಾಠಿ ಹಾಗೂ ಹಿಂದಿ ಸಿನಿಮಾ ಪ್ರೇಮಿಗಳ ಹೃದಯಗಳನ್ನು ಆಳಿದ ಅದ್ಭುತ ನಟಿಗೆ ಹೃದಯಾಂತರಾಳದಿಂದ ವಂದನೆಗಳು” ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ