‘ಗಜನಿ’ ಚಿತ್ರಕ್ಕೆ ಬರ್ತಿದೆ ಸೀಕ್ವೆಲ್? ಆಮಿರ್ ಖಾನ್ ಚಿತ್ರ ನಿರ್ಮಾಣ ಮಾಡಲಿದೆ ದಕ್ಷಿಣ ಭಾರತದ ಸಂಸ್ಥೆ

ತಮಿಳಿನ ‘ಗಜನಿ’ ಚಿತ್ರವನ್ನು ನಿರ್ಮಾಣ ಮಾಡಿದ್ದು ಸೇಲಮ್ ಚಂದ್ರಶೇಖರನ್. ಅವರು ಈಗ ನಮ್ಮೊಂದಿಗೆ ಇಲ್ಲ. 2021ರಲ್ಲಿ ಅವರು ತೀರಿಕೊಂಡರು. ಈ ಚಿತ್ರಕ್ಕೆ ಸೀಕ್ವೆಲ್ ಮಾಡಲು ಅಲ್ಲು ಅರವಿಂದ್ ಆಸಕ್ತಿ ತೋರಿಸಿದ್ದಾರೆ.

‘ಗಜನಿ’ ಚಿತ್ರಕ್ಕೆ ಬರ್ತಿದೆ ಸೀಕ್ವೆಲ್? ಆಮಿರ್ ಖಾನ್ ಚಿತ್ರ ನಿರ್ಮಾಣ ಮಾಡಲಿದೆ ದಕ್ಷಿಣ ಭಾರತದ ಸಂಸ್ಥೆ
ಆಮಿರ್ ಖಾನ್
Follow us
|

Updated on:May 05, 2023 | 8:51 AM

ಆಮಿರ್ ಖಾನ್ (Aamir Khan) ನಟನೆಯ ‘ಗಜನಿ’ ಸಿನಿಮಾ ಸೂಪರ್ ಹಿಟ್ ಆಯಿತು. 2005ರಲ್ಲಿ ಬಂದ ತಮಿಳಿನ ‘ಗಜನಿ’ (Ghajini Movie) ಚಿತ್ರವನ್ನು ಅದೇ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಲಾಯಿತು. ತಮಿಳಿನಲ್ಲಿ ಸೂರ್ಯ ಮಾಡಿದ್ದ ಪಾತ್ರವನ್ನು ಹಿಂದಿಯಲ್ಲಿ ಆಮಿರ್ ಖಾನ್ ಮಾಡಿದರು. ಈ ಚಿತ್ರಕ್ಕೆ ಈಗ ಸೀಕ್ವೆಲ್ ತರಲು ಸಿದ್ಧತೆ ನಡೆದಿದೆ. ಆಮಿರ್ ಖಾನ್​ ಅವರು ಸೀಕ್ವೆಲ್​ನಲ್ಲಿ ನಟಿಸುತ್ತಿದ್ದು, ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ತಮಿಳಿನ ‘ಗಜನಿ’ ಚಿತ್ರವನ್ನು ನಿರ್ಮಾಣ ಮಾಡಿದ್ದು ಸೇಲಮ್ ಚಂದ್ರಶೇಖರನ್. ಅವರು ಈಗ ನಮ್ಮೊಂದಿಗೆ ಇಲ್ಲ. 2021ರಲ್ಲಿ ಅವರು ತೀರಿಕೊಂಡರು. ಈ ಚಿತ್ರಕ್ಕೆ ಸೀಕ್ವೆಲ್ ಮಾಡಲು ಅಲ್ಲು ಅರವಿಂದ್ ಆಸಕ್ತಿ ತೋರಿಸಿದ್ದಾರೆ. ಈ ಕಾರಣಕ್ಕೆ ಆಮಿರ್ ಖಾನ್ ಅವರು ಪದೇಪದೇ ಹೈದರಾಬಾದ್​ಗೆ ಆಗಮಿಸುತ್ತಿದ್ದಾರೆ. ಕಥೆಯ ಬಗ್ಗೆ ಅಲ್ಲು ಅರವಿಂದ್ ಹಾಗೂ ಆಮಿರ್ ಖಾನ್ ಅವರು ಚರ್ಚೆ ಮಾಡುತ್ತಿದ್ದಾರೆ.

ಹಿಂದಿಯ ‘ಗಜನಿ’ ಸಿನಿಮಾದಲ್ಲಿ ಆಮಿರ್ ಖಾನ್ ಅವರು ಸಂಜಯ್ ಸಿಂಘಾನಿಯಾ ಆಗಿ ಕಾಣಿಸಿಕೊಂಡಿದ್ದರು. ಈಗ ಚಿತ್ರದ ಕಥೆ ಮುಂದುವರಿಯಲಿದೆ. ಈ ರೀತಿಯಲ್ಲಿ ಕಥೆ ಸಿದ್ಧಪಡಿಸಲಾಗಿದೆ ಎನ್ನಲಾಗುತ್ತಿದೆ. ಇದು ಸದ್ಯದಮಟ್ಟಿಗೆ ಅಂತ-ಕಂತೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಅಲ್ಲು ಅರವಿಂದ್ ಅವರು ಟಾಲಿವುಡ್​ನ ಖ್ಯಾತ ನಿರ್ಮಾಪಕರಲ್ಲಿ ಒಬ್ಬರು. ಗೀತಾ ಆರ್ಟ್ಸ್​ ಮೂಲಕ ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದಾರೆ. ಈಗ ಅವರು ‘ಗಜನಿ 2’ ಚಿತ್ರವನ್ನು ನಿರ್ಮಿಸಲು ಹೊರಟಿದ್ದಾರೆ ಎನ್ನಲಾಗುತ್ತಿದೆ. ಆಮಿರ್ ಅವರಿಗೆ ಕಥೆ ಸಾಕಷ್ಟು ಇಷ್ಟ ಆಗಿದೆಯಂತೆ. ಹೀಗಾಗಿ ಅವರು ನಟಿಸಲು ಒಪ್ಪಿದ್ದಾರೆ.

ಇದನ್ನೂ ಓದಿ: ಈದ್​ಗೆ ಸಲ್ಮಾನ್ ಖಾನ್​-ಆಮಿರ್ ಖಾನ್ ಭೇಟಿ; ಈ ಫೋಟೋದಲ್ಲಿ ಮಿಸ್ಸಿಂಗ್ ಆಗಿದ್ದು ಯಾರು?

ಆಮಿರ್ ಖಾನ್​ಗೆ ಸಾಲು ಸಾಲು ಸೋಲುಗಳು ಉಂಟಾಗಿವೆ. ‘ಲಾಲ್ ಸಿಂಗ್ ಚಡ್ಡಾ’ ಚಿತ್ರವೂ ಹೀನಾಯವಾಗಿ ಸೋತಿತು. ಇದು ಆಮಿರ್ ಖಾನ್ ಚಿಂತೆಗೆ ಕಾರಣವಾಗಿತ್ತು. ತರಾತುರಿಯಲ್ಲಿ ಮತ್ತೊಂದು ಸಿನಿಮಾ ಒಪ್ಪಿಕೊಳ್ಳುವ ಬದಲು ಬ್ರೇಕ್ ತೆಗೆದುಕೊಳ್ಳುವುದು ಉತ್ತಮ ಅನ್ನೋದು ಆಮಿರ್ ಖಾನ್ ನಿರ್ಧಾರ ಆಗಿತ್ತು. ಹೀಗಾಗಿ ಅವರು ಬ್ರೇಕ್ ಪಡೆದಿದ್ದರು. ಈಗ ಒಂದೊಳ್ಳೆಯ ಕಥೆ ಸಿಕ್ಕಿರುವುದರಿಂದ ಅವರು ಕಂಬ್ಯಾಕ್ ಆಲೋಚನೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:50 am, Fri, 5 May 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ