AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಜನಿ’ ಚಿತ್ರಕ್ಕೆ ಬರ್ತಿದೆ ಸೀಕ್ವೆಲ್? ಆಮಿರ್ ಖಾನ್ ಚಿತ್ರ ನಿರ್ಮಾಣ ಮಾಡಲಿದೆ ದಕ್ಷಿಣ ಭಾರತದ ಸಂಸ್ಥೆ

ತಮಿಳಿನ ‘ಗಜನಿ’ ಚಿತ್ರವನ್ನು ನಿರ್ಮಾಣ ಮಾಡಿದ್ದು ಸೇಲಮ್ ಚಂದ್ರಶೇಖರನ್. ಅವರು ಈಗ ನಮ್ಮೊಂದಿಗೆ ಇಲ್ಲ. 2021ರಲ್ಲಿ ಅವರು ತೀರಿಕೊಂಡರು. ಈ ಚಿತ್ರಕ್ಕೆ ಸೀಕ್ವೆಲ್ ಮಾಡಲು ಅಲ್ಲು ಅರವಿಂದ್ ಆಸಕ್ತಿ ತೋರಿಸಿದ್ದಾರೆ.

‘ಗಜನಿ’ ಚಿತ್ರಕ್ಕೆ ಬರ್ತಿದೆ ಸೀಕ್ವೆಲ್? ಆಮಿರ್ ಖಾನ್ ಚಿತ್ರ ನಿರ್ಮಾಣ ಮಾಡಲಿದೆ ದಕ್ಷಿಣ ಭಾರತದ ಸಂಸ್ಥೆ
ಆಮಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on:May 05, 2023 | 8:51 AM

Share

ಆಮಿರ್ ಖಾನ್ (Aamir Khan) ನಟನೆಯ ‘ಗಜನಿ’ ಸಿನಿಮಾ ಸೂಪರ್ ಹಿಟ್ ಆಯಿತು. 2005ರಲ್ಲಿ ಬಂದ ತಮಿಳಿನ ‘ಗಜನಿ’ (Ghajini Movie) ಚಿತ್ರವನ್ನು ಅದೇ ಹೆಸರಲ್ಲಿ ಹಿಂದಿಗೆ ರಿಮೇಕ್ ಮಾಡಲಾಯಿತು. ತಮಿಳಿನಲ್ಲಿ ಸೂರ್ಯ ಮಾಡಿದ್ದ ಪಾತ್ರವನ್ನು ಹಿಂದಿಯಲ್ಲಿ ಆಮಿರ್ ಖಾನ್ ಮಾಡಿದರು. ಈ ಚಿತ್ರಕ್ಕೆ ಈಗ ಸೀಕ್ವೆಲ್ ತರಲು ಸಿದ್ಧತೆ ನಡೆದಿದೆ. ಆಮಿರ್ ಖಾನ್​ ಅವರು ಸೀಕ್ವೆಲ್​ನಲ್ಲಿ ನಟಿಸುತ್ತಿದ್ದು, ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿದೆ.

ತಮಿಳಿನ ‘ಗಜನಿ’ ಚಿತ್ರವನ್ನು ನಿರ್ಮಾಣ ಮಾಡಿದ್ದು ಸೇಲಮ್ ಚಂದ್ರಶೇಖರನ್. ಅವರು ಈಗ ನಮ್ಮೊಂದಿಗೆ ಇಲ್ಲ. 2021ರಲ್ಲಿ ಅವರು ತೀರಿಕೊಂಡರು. ಈ ಚಿತ್ರಕ್ಕೆ ಸೀಕ್ವೆಲ್ ಮಾಡಲು ಅಲ್ಲು ಅರವಿಂದ್ ಆಸಕ್ತಿ ತೋರಿಸಿದ್ದಾರೆ. ಈ ಕಾರಣಕ್ಕೆ ಆಮಿರ್ ಖಾನ್ ಅವರು ಪದೇಪದೇ ಹೈದರಾಬಾದ್​ಗೆ ಆಗಮಿಸುತ್ತಿದ್ದಾರೆ. ಕಥೆಯ ಬಗ್ಗೆ ಅಲ್ಲು ಅರವಿಂದ್ ಹಾಗೂ ಆಮಿರ್ ಖಾನ್ ಅವರು ಚರ್ಚೆ ಮಾಡುತ್ತಿದ್ದಾರೆ.

ಹಿಂದಿಯ ‘ಗಜನಿ’ ಸಿನಿಮಾದಲ್ಲಿ ಆಮಿರ್ ಖಾನ್ ಅವರು ಸಂಜಯ್ ಸಿಂಘಾನಿಯಾ ಆಗಿ ಕಾಣಿಸಿಕೊಂಡಿದ್ದರು. ಈಗ ಚಿತ್ರದ ಕಥೆ ಮುಂದುವರಿಯಲಿದೆ. ಈ ರೀತಿಯಲ್ಲಿ ಕಥೆ ಸಿದ್ಧಪಡಿಸಲಾಗಿದೆ ಎನ್ನಲಾಗುತ್ತಿದೆ. ಇದು ಸದ್ಯದಮಟ್ಟಿಗೆ ಅಂತ-ಕಂತೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಅಲ್ಲು ಅರವಿಂದ್ ಅವರು ಟಾಲಿವುಡ್​ನ ಖ್ಯಾತ ನಿರ್ಮಾಪಕರಲ್ಲಿ ಒಬ್ಬರು. ಗೀತಾ ಆರ್ಟ್ಸ್​ ಮೂಲಕ ಹಲವು ಸಿನಿಮಾಗಳನ್ನು ಅವರು ನಿರ್ಮಾಣ ಮಾಡಿದ್ದಾರೆ. ಈಗ ಅವರು ‘ಗಜನಿ 2’ ಚಿತ್ರವನ್ನು ನಿರ್ಮಿಸಲು ಹೊರಟಿದ್ದಾರೆ ಎನ್ನಲಾಗುತ್ತಿದೆ. ಆಮಿರ್ ಅವರಿಗೆ ಕಥೆ ಸಾಕಷ್ಟು ಇಷ್ಟ ಆಗಿದೆಯಂತೆ. ಹೀಗಾಗಿ ಅವರು ನಟಿಸಲು ಒಪ್ಪಿದ್ದಾರೆ.

ಇದನ್ನೂ ಓದಿ: ಈದ್​ಗೆ ಸಲ್ಮಾನ್ ಖಾನ್​-ಆಮಿರ್ ಖಾನ್ ಭೇಟಿ; ಈ ಫೋಟೋದಲ್ಲಿ ಮಿಸ್ಸಿಂಗ್ ಆಗಿದ್ದು ಯಾರು?

ಆಮಿರ್ ಖಾನ್​ಗೆ ಸಾಲು ಸಾಲು ಸೋಲುಗಳು ಉಂಟಾಗಿವೆ. ‘ಲಾಲ್ ಸಿಂಗ್ ಚಡ್ಡಾ’ ಚಿತ್ರವೂ ಹೀನಾಯವಾಗಿ ಸೋತಿತು. ಇದು ಆಮಿರ್ ಖಾನ್ ಚಿಂತೆಗೆ ಕಾರಣವಾಗಿತ್ತು. ತರಾತುರಿಯಲ್ಲಿ ಮತ್ತೊಂದು ಸಿನಿಮಾ ಒಪ್ಪಿಕೊಳ್ಳುವ ಬದಲು ಬ್ರೇಕ್ ತೆಗೆದುಕೊಳ್ಳುವುದು ಉತ್ತಮ ಅನ್ನೋದು ಆಮಿರ್ ಖಾನ್ ನಿರ್ಧಾರ ಆಗಿತ್ತು. ಹೀಗಾಗಿ ಅವರು ಬ್ರೇಕ್ ಪಡೆದಿದ್ದರು. ಈಗ ಒಂದೊಳ್ಳೆಯ ಕಥೆ ಸಿಕ್ಕಿರುವುದರಿಂದ ಅವರು ಕಂಬ್ಯಾಕ್ ಆಲೋಚನೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:50 am, Fri, 5 May 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ