AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​

‘ಪಠಾಣ್​’ ಸಿನಿಮಾದಿಂದ ಒಂದು ಗೆಲುವು ಕಾಣುವುದು ಶಾರುಖ್​ ಖಾನ್​ ಅವರಿಗೆ ತುಂಬ ಅನಿವಾರ್ಯ ಆಗಿದೆ. ಹಾಗಾಗಿ 8 ಪ್ಯಾಕ್​ ಆ್ಯಬ್ಸ್​ ಮೂಲಕ ಅಭಿಮಾನಿಗಳ ಮುಂದೆ ಬರಲು ಅವರು ತೀರ್ಮಾನಿಸಿದಂತಿದೆ.

ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​
ಶಾರುಖ್​ ಖಾನ್
TV9 Web
| Edited By: |

Updated on: Mar 16, 2022 | 3:21 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಅದ್ದೂರಿ ಕಮ್​ಬ್ಯಾಕ್​ಗಾಗಿ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. 2018ರಲ್ಲಿ ‘ಝೀರೋ’ ಸಿನಿಮಾ ಸೋತ ಬಳಿಕ ಅವರ ಯಾವುದೇ ಹೊಸ ಚಿತ್ರ ತೆರೆಕಂಡಿಲ್ಲ. ಇಷ್ಟು ದೊಡ್ಡ ಗ್ಯಾಪ್​ ಬಳಿಕ ಅವರು ಮತ್ತೆ ಅಭಿಮಾನಿಗಳ ಮುಂದೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಸದ್ಯ ಶಾರುಖ್​ ಖಾನ್​ ಅವರು ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಆ ಪೈಕಿ ‘ಪಠಾಣ್​’ (Pathaan Movie) ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಈಗ ಕೆಲವು ಫೋಟೋಗಳು ಲೀಕ್​ ಆಗಿವೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ಇವರಿಬ್ಬರದ್ದು ಸೂಪರ್​ ಹಿಟ್​ ಕಾಂಬಿನೇಷನ್​ ಆ ಕಾರಣದಿಂದಲೂ ಕೂಡ ‘ಪಠಾಣ್​’ ಚಿತ್ರದ ಬಗ್ಗೆ ಹೈಪ್​ ಸೃಷ್ಟಿ ಆಗಿದೆ. ಈಗ ಶಾರುಖ್​ ಖಾನ್​ ಅವರು ಇದರ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಶೂಟಿಂಗ್​ ಸೆಟ್​ನಿಂದ ಕೆಲವು ಫೋಟೋಗಳು (Shah Rukh Khan Photo) ಲೀಕ್ ಆಗಿದ್ದು, ಅದರಲ್ಲಿ ಶಾರುಖ್​ ಖಾನ್​ 8 ಪ್ಯಾಕ್​ ಆ್ಯಬ್ಸ್​ ಫೋಟೋಗಳು ವೈರಲ್​ ಆಗಿವೆ.

‘ಪಠಾಣ್​’ ಸಿನಿಮಾದಿಂದ ಒಂದು ಗೆಲುವು ಕಾಣುವುದು ಶಾರುಖ್​ ಖಾನ್​ ಅವರಿಗೆ ತುಂಬ ಅನಿವಾರ್ಯ ಆಗಿದೆ. ಹಾಗಾಗಿ ಅವರು ಈ ಚಿತ್ರಕ್ಕಾಗಿ ಎಲ್ಲಿಲ್ಲದಂತೆ ಕಷ್ಟಪಡುತ್ತಿದ್ದಾರೆ ಎನ್ನಲಾಗಿದೆ. 8 ಪ್ಯಾಕ್​ ಆ್ಯಬ್ಸ್​ ಮೂಲಕ ಅಭಿಮಾನಿಗಳ ಮುಂದೆ ಬಂದು ಮನರಂಜನೆ ನೀಡಲು ಅವರು ತೀರ್ಮಾನಿಸಿದಂತಿದೆ. ಅದಕ್ಕಾಗಿ ದೇಹ ದಂಡಿಸಿ ತಯಾರಾಗಿದ್ದಾರೆ. ಆದರೆ ಶೂಟಿಂಗ್​ ಸಂದರ್ಭದಲ್ಲಿಯೇ ಈ ಫೋಟೋಗಳು ಲೀಕ್​ ಆಗಿರುವುದರಿಂದ ಅಭಿಮಾನಿಗಳಿಗೆ ಮತ್ತು ಚಿತ್ರತಂಡಕ್ಕೆ ಬೇಸರ ಮೂಡಿಸಿದೆ.

ಇತ್ತೀಚೆಗಷ್ಟೇ ‘ಪಠಾಣ್’​ ಚಿತ್ರದ ಟೀಸರ್​ ಬಿಡುಗಡೆ ಆಗಿತ್ತು. ಅದರಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಅವರು ಕಾಣಿಸಿಕೊಂಡಿದ್ದರು. ಶಾರುಖ್​ ಖಾನ್​ ಅವರ ಹಿನ್ನೆಲೆ ಧ್ವನಿ ಮಾತ್ರ ಕೇಳಿಸಿತ್ತು. ಆದರೆ ಲುಕ್​ ಬಹಿರಂಗ ಆಗಿರಲಿಲ್ಲ. ಅದ್ದೂರಿಯಾಗಿ ಲುಕ್​ ರಿವೀಲ್​ ಮಾಡಬೇಕು ಎಂಬುದು ಚಿತ್ರತಂಡದ ಪ್ಲ್ಯಾನ್​ ಆಗಿರುತ್ತದೆ. ಆದರೆ ಅದಕ್ಕೂ ಮುನ್ನವೇ ಈ ರೀತಿ ಫೋಟೋ ವೈರಲ್ ಆಗಿದೆ. ಕೆಲವರು ಈ ಲುಕ್ ನೋಡಿ ಖುಷಿಪಟ್ಟಿದ್ದಾರೆ. ಕಮೆಂಟ್​ಗಳ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ತಮ್ಮ ದೇಹವನ್ನು ಹೇಗೆ ಹುರಿಗೊಳಿಸಿಕೊಂಡರು ಎಂಬುದನ್ನು ಕೂಡ ವಿಡಿಯೋ ಮೂಲಕ ದಾಖಲಿಸಲಾಗಿದೆ. ಅದನ್ನು ನಂತರದ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂಬ ಮಾಹಿತಿ ಹರಿದಾಡುತ್ತಿದೆ.

ಇತ್ತೀಚೆಗೆ ಎಸ್​ಆರ್​ಕೆ+ ಲೋಗೋವನ್ನು ಶಾರುಖ್​ ಖಾನ್​ ಶೇರ್​ ಮಾಡಿಕೊಂಡಿದ್ದರು. ‘ಒಟಿಟಿ ಜಗತ್ತಿನಲ್ಲಿ ಏನೇನೋ ಆಗಲಿದೆ’ ಎಂದು ಬರೆದುಕೊಂಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದರು. ನಟ ಸಲ್ಮಾನ್ ಖಾನ್​, ನಿರ್ಮಾಪಕ ಕರಣ್​ ಜೋಹರ್​ ಈ ಬಗ್ಗೆ ತಮ್ಮ ಎಗ್ಸೈಟ್​ಮೆಂಟ್​ ತೋರಿಸಿದ್ದರು. ಆದರೆ, ಈ ವಿಚಾರದ ಅಸಲಿಯತ್ತೇ ಬೇರೆ ಇದೆ ಎನ್ನಲಾಗುತ್ತಿದೆ. ಇಟೈಮ್ಸ್​ ವರದಿ ಮಾಡಿದ ಪ್ರಕಾರ, ಎಸ್​​ಆರ್​ಕೆ+ ಅನ್ನೋದು ಶಾರುಖ್​ ಖಾನ್​ ನೀಡಿದ ಜಾಹೀರಾತು ಎನ್ನಲಾಗಿದೆ. ಡಿಸ್ನಿ+ ಹಾಟ್​ಸ್ಟಾರ್ ಜತೆಗೆ ಶಾರುಖ್​ ಖಾನ್​ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಈ ರೀತಿಯ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಕೆಲ ವರದಿ ಪ್ರಕಾರ, ಶಾರುಖ್​ ಖಾನ್​ ಅವರು ಡಿಸ್ನಿ+ ಹಾಟ್​​ಸ್ಟಾರ್​ ಜತೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಬರಬೇಕಿದೆ.

ಇದನ್ನೂ ಓದಿ:

ಶಾರುಖ್​ ಖಾನ್​ ಹೊಸ ಲುಕ್​ ನೋಡಿ ವಾವ್​ ಎಂದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

ದುಬೈ ಬಗ್ಗೆ ಶಾರುಖ್​ ಪ್ರೀತಿಯ ಮಾತು; ವೈರಲ್​ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದು ಏನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್