ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​

‘ಪಠಾಣ್​’ ಸಿನಿಮಾದಿಂದ ಒಂದು ಗೆಲುವು ಕಾಣುವುದು ಶಾರುಖ್​ ಖಾನ್​ ಅವರಿಗೆ ತುಂಬ ಅನಿವಾರ್ಯ ಆಗಿದೆ. ಹಾಗಾಗಿ 8 ಪ್ಯಾಕ್​ ಆ್ಯಬ್ಸ್​ ಮೂಲಕ ಅಭಿಮಾನಿಗಳ ಮುಂದೆ ಬರಲು ಅವರು ತೀರ್ಮಾನಿಸಿದಂತಿದೆ.

ಶಾರುಖ್​ ಖಾನ್​ 8 ಪ್ಯಾಕ್​ ಬಾಡಿ ಫೋಟೋ ವೈರಲ್​; ‘ಪಠಾಣ್​’ ಚಿತ್ರದಲ್ಲಿ ಹೊಸ ಗೆಟಪ್​
ಶಾರುಖ್​ ಖಾನ್
Follow us
| Updated By: ಮದನ್​ ಕುಮಾರ್​

Updated on: Mar 16, 2022 | 3:21 PM

ನಟ ಶಾರುಖ್​ ಖಾನ್​ (Shah Rukh Khan) ಅವರು ಅದ್ದೂರಿ ಕಮ್​ಬ್ಯಾಕ್​ಗಾಗಿ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. 2018ರಲ್ಲಿ ‘ಝೀರೋ’ ಸಿನಿಮಾ ಸೋತ ಬಳಿಕ ಅವರ ಯಾವುದೇ ಹೊಸ ಚಿತ್ರ ತೆರೆಕಂಡಿಲ್ಲ. ಇಷ್ಟು ದೊಡ್ಡ ಗ್ಯಾಪ್​ ಬಳಿಕ ಅವರು ಮತ್ತೆ ಅಭಿಮಾನಿಗಳ ಮುಂದೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಸದ್ಯ ಶಾರುಖ್​ ಖಾನ್​ ಅವರು ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಆ ಪೈಕಿ ‘ಪಠಾಣ್​’ (Pathaan Movie) ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಈಗ ಕೆಲವು ಫೋಟೋಗಳು ಲೀಕ್​ ಆಗಿವೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ಇವರಿಬ್ಬರದ್ದು ಸೂಪರ್​ ಹಿಟ್​ ಕಾಂಬಿನೇಷನ್​ ಆ ಕಾರಣದಿಂದಲೂ ಕೂಡ ‘ಪಠಾಣ್​’ ಚಿತ್ರದ ಬಗ್ಗೆ ಹೈಪ್​ ಸೃಷ್ಟಿ ಆಗಿದೆ. ಈಗ ಶಾರುಖ್​ ಖಾನ್​ ಅವರು ಇದರ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಶೂಟಿಂಗ್​ ಸೆಟ್​ನಿಂದ ಕೆಲವು ಫೋಟೋಗಳು (Shah Rukh Khan Photo) ಲೀಕ್ ಆಗಿದ್ದು, ಅದರಲ್ಲಿ ಶಾರುಖ್​ ಖಾನ್​ 8 ಪ್ಯಾಕ್​ ಆ್ಯಬ್ಸ್​ ಫೋಟೋಗಳು ವೈರಲ್​ ಆಗಿವೆ.

‘ಪಠಾಣ್​’ ಸಿನಿಮಾದಿಂದ ಒಂದು ಗೆಲುವು ಕಾಣುವುದು ಶಾರುಖ್​ ಖಾನ್​ ಅವರಿಗೆ ತುಂಬ ಅನಿವಾರ್ಯ ಆಗಿದೆ. ಹಾಗಾಗಿ ಅವರು ಈ ಚಿತ್ರಕ್ಕಾಗಿ ಎಲ್ಲಿಲ್ಲದಂತೆ ಕಷ್ಟಪಡುತ್ತಿದ್ದಾರೆ ಎನ್ನಲಾಗಿದೆ. 8 ಪ್ಯಾಕ್​ ಆ್ಯಬ್ಸ್​ ಮೂಲಕ ಅಭಿಮಾನಿಗಳ ಮುಂದೆ ಬಂದು ಮನರಂಜನೆ ನೀಡಲು ಅವರು ತೀರ್ಮಾನಿಸಿದಂತಿದೆ. ಅದಕ್ಕಾಗಿ ದೇಹ ದಂಡಿಸಿ ತಯಾರಾಗಿದ್ದಾರೆ. ಆದರೆ ಶೂಟಿಂಗ್​ ಸಂದರ್ಭದಲ್ಲಿಯೇ ಈ ಫೋಟೋಗಳು ಲೀಕ್​ ಆಗಿರುವುದರಿಂದ ಅಭಿಮಾನಿಗಳಿಗೆ ಮತ್ತು ಚಿತ್ರತಂಡಕ್ಕೆ ಬೇಸರ ಮೂಡಿಸಿದೆ.

ಇತ್ತೀಚೆಗಷ್ಟೇ ‘ಪಠಾಣ್’​ ಚಿತ್ರದ ಟೀಸರ್​ ಬಿಡುಗಡೆ ಆಗಿತ್ತು. ಅದರಲ್ಲಿ ದೀಪಿಕಾ ಪಡುಕೋಣೆ ಮತ್ತು ಜಾನ್​ ಅಬ್ರಾಹಂ ಅವರು ಕಾಣಿಸಿಕೊಂಡಿದ್ದರು. ಶಾರುಖ್​ ಖಾನ್​ ಅವರ ಹಿನ್ನೆಲೆ ಧ್ವನಿ ಮಾತ್ರ ಕೇಳಿಸಿತ್ತು. ಆದರೆ ಲುಕ್​ ಬಹಿರಂಗ ಆಗಿರಲಿಲ್ಲ. ಅದ್ದೂರಿಯಾಗಿ ಲುಕ್​ ರಿವೀಲ್​ ಮಾಡಬೇಕು ಎಂಬುದು ಚಿತ್ರತಂಡದ ಪ್ಲ್ಯಾನ್​ ಆಗಿರುತ್ತದೆ. ಆದರೆ ಅದಕ್ಕೂ ಮುನ್ನವೇ ಈ ರೀತಿ ಫೋಟೋ ವೈರಲ್ ಆಗಿದೆ. ಕೆಲವರು ಈ ಲುಕ್ ನೋಡಿ ಖುಷಿಪಟ್ಟಿದ್ದಾರೆ. ಕಮೆಂಟ್​ಗಳ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅವರು ತಮ್ಮ ದೇಹವನ್ನು ಹೇಗೆ ಹುರಿಗೊಳಿಸಿಕೊಂಡರು ಎಂಬುದನ್ನು ಕೂಡ ವಿಡಿಯೋ ಮೂಲಕ ದಾಖಲಿಸಲಾಗಿದೆ. ಅದನ್ನು ನಂತರದ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂಬ ಮಾಹಿತಿ ಹರಿದಾಡುತ್ತಿದೆ.

ಇತ್ತೀಚೆಗೆ ಎಸ್​ಆರ್​ಕೆ+ ಲೋಗೋವನ್ನು ಶಾರುಖ್​ ಖಾನ್​ ಶೇರ್​ ಮಾಡಿಕೊಂಡಿದ್ದರು. ‘ಒಟಿಟಿ ಜಗತ್ತಿನಲ್ಲಿ ಏನೇನೋ ಆಗಲಿದೆ’ ಎಂದು ಬರೆದುಕೊಂಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದರು. ನಟ ಸಲ್ಮಾನ್ ಖಾನ್​, ನಿರ್ಮಾಪಕ ಕರಣ್​ ಜೋಹರ್​ ಈ ಬಗ್ಗೆ ತಮ್ಮ ಎಗ್ಸೈಟ್​ಮೆಂಟ್​ ತೋರಿಸಿದ್ದರು. ಆದರೆ, ಈ ವಿಚಾರದ ಅಸಲಿಯತ್ತೇ ಬೇರೆ ಇದೆ ಎನ್ನಲಾಗುತ್ತಿದೆ. ಇಟೈಮ್ಸ್​ ವರದಿ ಮಾಡಿದ ಪ್ರಕಾರ, ಎಸ್​​ಆರ್​ಕೆ+ ಅನ್ನೋದು ಶಾರುಖ್​ ಖಾನ್​ ನೀಡಿದ ಜಾಹೀರಾತು ಎನ್ನಲಾಗಿದೆ. ಡಿಸ್ನಿ+ ಹಾಟ್​ಸ್ಟಾರ್ ಜತೆಗೆ ಶಾರುಖ್​ ಖಾನ್​ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಈ ರೀತಿಯ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಕೆಲ ವರದಿ ಪ್ರಕಾರ, ಶಾರುಖ್​ ಖಾನ್​ ಅವರು ಡಿಸ್ನಿ+ ಹಾಟ್​​ಸ್ಟಾರ್​ ಜತೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಬರಬೇಕಿದೆ.

ಇದನ್ನೂ ಓದಿ:

ಶಾರುಖ್​ ಖಾನ್​ ಹೊಸ ಲುಕ್​ ನೋಡಿ ವಾವ್​ ಎಂದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

ದುಬೈ ಬಗ್ಗೆ ಶಾರುಖ್​ ಪ್ರೀತಿಯ ಮಾತು; ವೈರಲ್​ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದು ಏನು?

ತಾಜಾ ಸುದ್ದಿ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ