AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್

ನಟ ಶಾರುಖ್ ಖಾನ್ ಅವರು ಈ ಕಾರನ್ನು ವಿದೇಶದಿಂದ ತರಿಸಿಕೊಂಡಿದ್ದಾರೆ. ಇದರ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈಗಾಗಲೇ ಅವರ ಬಳಿಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಹಲವು ಕಾರುಗಳು ಇವೆ. ಅವರು ಖರೀದಿಸಿರುವ ಹೊಸ ಕಾರಿನ ಬಗ್ಗೆ ಇಲ್ಲಿದೆ ಮಾಹಿತಿ..

ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್
Cadillac Escalade, Shah Rukh Khan
ಮದನ್​ ಕುಮಾರ್​
|

Updated on: May 15, 2026 | 2:59 PM

Share

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ತಮ್ಮ ಐಷಾರಾಮಿ ಜೀವನಶೈಲಿ ಮತ್ತು ದುಬಾರಿ ಕಾರುಗಳ ಕಲೆಕ್ಷನ್‌ಗೆ ಹೆಸರುವಾಸಿಯಾಗಿದ್ದಾರೆ. ಈಗ ಅವರ ಶ್ರೀಮಂತ ಗ್ಯಾರೇಜ್‌ಗೆ ಮತ್ತೊಂದು ಅತ್ಯಂತ ದುಬಾರಿ ಐಷಾರಾಮಿ ಎಸ್‌ಯುವಿ (SUV) ಕಾರು ಸೇರ್ಪಡೆಯಾಗಿದೆ. ಹೌದು, ಕಿಂಗ್ ಖಾನ್ ಇತ್ತೀಚೆಗೆ ಬ್ರ್ಯಾಂಡ್ ನ್ಯೂ ಕ್ಯಾಡಿಲಾಕ್ ಎಸ್ಕಲೇಡ್ (Cadillac Escalade) ಕಾರನ್ನು ಖರೀದಿಸಿದ್ದಾರೆ. ಇತ್ತೀಚೆಗೆ ಮುಂಬೈನ ರಸ್ತೆಗಳಲ್ಲಿ ಶಾರುಖ್ ಖಾನ್ ಅವರು ತಮ್ಮ ಹೊಸ ಕಡುಗಪ್ಪಿನ ಎಸ್‌ಯುವಿ ಕಾರಿನಲ್ಲಿ ಸವಾರಿ ಮಾಡುತ್ತಿರುವ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿವೆ.

ಅಮೆರಿಕದ ಪ್ರಸಿದ್ಧ ಆಟೋಮೊಬೈಲ್ ಬ್ರ್ಯಾಂಡ್ ಆದ ‘ಕ್ಯಾಡಿಲಾಕ್’ ಭಾರತದಲ್ಲಿ ಅಧಿಕೃತವಾಗಿ ತನ್ನ ಕಾರುಗಳನ್ನು ಮಾರಾಟ ಮಾಡುವುದಿಲ್ಲ. ಹೀಗಾಗಿ ಶಾರುಖ್ ಖಾನ್ ಈ ಕಾರನ್ನು ವಿದೇಶದಿಂದ ಖಾಸಗಿಯಾಗಿ ಆಮದು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಭಾರಿ ಆಮದು ಸುಂಕ ಮತ್ತು ಹೆಚ್ಚುವರಿ ತೆರಿಗೆಗಳ ಕಾರಣದಿಂದಾಗಿ, ಭಾರತದಲ್ಲಿ ಈ ಐಷಾರಾಮಿ ಕ್ಯಾಡಿಲಾಕ್ ಎಸ್ಕಲೇಡ್ ಕಾರಿನ ಆನ್-ರೋಡ್ ಬೆಲೆ ಸುಮಾರು 4 ಕೋಟಿಯಿಂದ 5 ಕೋಟಿ ರೂಪಾಯಿ ಇರಬಹುದು ಎಂದು ಅಂದಾಜಿಸಲಾಗಿದೆ.

ವಿಶ್ವದ ಅತ್ಯಂತ ಐಷಾರಾಮಿ ಎಸ್‌ಯುವಿಗಳಲ್ಲಿ ಒಂದಾದ ಕ್ಯಾಡಿಲಾಕ್ ಎಸ್ಕಲೇಡ್ ಕೇವಲ ಪವರ್​ಫುಲ್ ಮಾತ್ರವಲ್ಲ, ರಾಯಲ್ ಸೌಕರ್ಯಗಳನ್ನು ಹೊಂದಿದೆ. ಈ ಕಾರು 6.2-ಲೀಟರ್ V8 ಪ್ರಬಲ ಎಂಜಿನ್ ಹೊಂದಿದ್ದು, ಅತ್ಯಂತ ವೇಗವಾಗಿ ಚಲಿಸುವ ಸಾಮರ್ಥ್ಯ ಹೊಂದಿದೆ. ಕಾರಿನ ಒಳಭಾಗದಲ್ಲಿ ಆಕರ್ಷಕವಾದ 38 ಇಂಚಿನ ಕರ್ವ್ಡ್ OLED ಡಿಸ್ಪ್ಲೇ ಸ್ಕ್ರೀನ್ ಇದೆ. ಹೀಟೆಡ್ ಸೀಟುಗಳು, ಸಣ್ಣ ರೆಫ್ರಿಜರೇಟರ್ (ಫ್ರೀಜರ್ ಮೋಡ್ ಸಹಿತ) ಇದರಲ್ಲಿದೆ. ಹೆಡ್‌ರೆಸ್ಟ್ ಸ್ಪೀಕರ್‌ಗಳನ್ನು ಒಳಗೊಂಡ ಅತ್ಯಾಧುನಿಕ AKG ಸ್ಟುಡಿಯೋ ರೆಫರೆನ್ಸ್ 42-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್ ಅಳವಡಿಸಲಾಗಿದೆ.

ಕಿಂಗ್ ಖಾನ್ ಬಳಿ ಈಗಾಗಲೇ ವಿಶ್ವದ ಅತ್ಯಂತ ದುಬಾರಿಯಾದ ಹಲವು ಕಾರುಗಳಿವೆ. ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್, ರೋಲ್ಸ್ ರಾಯ್ಸ್ ಫ್ಯಾಂಟಮ್ ಡ್ರಾಪ್‌ಹೆಡ್ ಕ್ಯೂಪೆ, ಲ್ಯಾಂಡ್ ರೋವರ್ ರೇಂಜ್ ರೋವರ್ ಸ್ಪೋರ್ಟ್, ಬಿಎಂಡಬ್ಲ್ಯೂ ಐ8, ಮರ್ಸಿಡಿಸ್ ಬೆಂಜ್ ಎಸ್-ಕ್ಲಾಸ್ ಗಾರ್ಡ್ ಸೇರಿದಂತೆ ಹಲವು ಕಾರುಗಳಿಗೆ ಶಾರುಖ್ ಖಾನ್ ಒಡೆಯನಾಗಿದ್ದಾರೆ.

ಇದನ್ನೂ ಓದಿ: ‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್

ಶಾರುಖ್ ಖಾನ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಆ್ಯಕ್ಷನ್-ಥ್ರಿಲ್ಲರ್ ಚಿತ್ರ ‘ಕಿಂಗ್’ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ಅವರ ಪುತ್ರಿ ಸುಹಾನಾ ಖಾನ್, ದೀಪಿಕಾ ಪಡುಕೋಣೆ ಮತ್ತು ಅಭಿಷೇಕ್ ಬಚ್ಚನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಡಿಸೆಂಬರ್ 24ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್