AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಕಾ ಪ್ರಚಾರ, ಶಾರುಖ್, ಟೈಗರ್ ಶ್ರಾಫ್, ಅಜಯ್ ದೇವಗನ್​ಗೆ ನೊಟೀಸು

Shah Rukh Khan: ಗುಟ್ಕಾ ಪ್ರಚಾರ ಮಾಡುವ ನಟರ ಮೇಲೆ ಹಲವು ಬಾರಿ ನ್ಯಾಯಾಲಯದಲ್ಲಿ ಅರ್ಜಿಗಳನ್ನು ಹಾಕಲಾಗಿದೆ ಆದರೆ ಈ ವರೆಗೆ ಯಾವುದೇ ಉಪಯೋಗ ಆಗಿಲ್ಲ. ಆದರೆ ಇದೀಗ ಗ್ರಾಹಕರ ವೇದಿಕೆಯು ಗುಟ್ಕಾ, ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸುವ ಪ್ರಮುಖ ನಟರಿಗೆ ನೊಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಪ್ರಕರಣ ಏನು?

ಗುಟ್ಕಾ ಪ್ರಚಾರ, ಶಾರುಖ್, ಟೈಗರ್ ಶ್ರಾಫ್, ಅಜಯ್ ದೇವಗನ್​ಗೆ ನೊಟೀಸು
Vimal Gutka
ಮಂಜುನಾಥ ಸಿ.
|

Updated on: Mar 09, 2025 | 9:07 AM

Share

ಸಿನಿಮಾ ನಟರು ಗುಟ್ಕಾ, ತಂಬಾಕು, ಜೂಜು, ಮದ್ಯಗಳನ್ನು ಪ್ರಚಾರ ಮಾಡುವ ಬಗ್ಗೆ ತಕರಾರು ಮೊದಲಿನಿಂದಲೂ ಇದೆ. ಈ ಗುಟ್ಕಾ, ತಂಬಾಕು ಸಂಸ್ಥೆಗಳು ತಮ್ಮ ಬ್ರ್ಯಾಂಡ್​ನ ಪ್ರಚಾರಕ್ಕೆ ಭಾರಿ ಸಂಭಾವನೆ ಕೊಟ್ಟು ದೇಶದ ಸ್ಟಾರ್ ನಟರನ್ನು ಕರೆತರುತ್ತವೆ. ಗುಟ್ಕಾ ಪ್ರಚಾರ ಮಾಡುವ ನಟರ ಮೇಲೆ ಹಲವು ಬಾರಿ ನ್ಯಾಯಾಲಯದಲ್ಲಿ ಅರ್ಜಿಗಳನ್ನು ಹಾಕಲಾಗಿದೆ ಆದರೆ ಈ ವರೆಗೆ ಯಾವುದೇ ಉಪಯೋಗ ಆಗಿಲ್ಲ. ಆದರೆ ಇದೀಗ ಗ್ರಾಹಕರ ವೇದಿಕೆಯು ಗುಟ್ಕಾ, ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸುವ ಪ್ರಮುಖ ನಟರಿಗೆ ನೊಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಜೈಪುರದ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಲ್ ಗುಟ್ಕಾ ಜಾಹೀರಾತಿನಲ್ಲಿ ನಟಿಸುವ ಅಜಯ್ ದೇವಗನ್, ಶಾರುಖ್ ಖಾನ್ ಮತ್ತು ಟೈಗರ್ ಶ್ರಾಫ್ ಅವರುಗಳಿಗೆ ನೊಟೀಸ್ ನೀಡಿದೆ. ನಟರಿಗೆ ನೋಟೀಸ್ ನೀಡಿದಂತೆ ವಿಮಲ್ ಗುಟ್ಕಾದ ಮಾಲೀಕರಾದ ವಿಮಲ್ ಕುಮಾರ್ ಅವರಿಗೂ ನೊಟೀಸ್ ನೀಡಿದ್ದು, ಮಾರ್ಚ್ 19ರ ಒಳಗಾಗಿ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ. ಮಾತ್ರವಲ್ಲದೆ ಇನ್ನು 30 ದಿನಗಳಲ್ಲಿ ನೊಟೀಸ್ ಬಗ್ಗೆ ಅಭಿಪ್ರಾಯವನ್ನು ಸಲ್ಲಿಸಬೇಕು ಎಂದು ಹೇಳಿದೆ.

ಜೈಪುರದ ವಕೀಲ ಯೋಗೇಂದ್ರ ಸಿಂಗ್ ಬುಧಿಯಾಲ್ ಎಂಬುವರು ದಾಖಲಿಸಿರುವ ದೂರಿದ ಆಧಾರದಲ್ಲಿ ಗ್ರಾಹಕರ ವೇದಿಕೆಯು ನಟರಿಗೆ ಮತ್ತು ಪಾನ್ ಮಸಾಲ ಸಂಸ್ಥೆಗೆ ನೊಟೀಸ್ ವಿತರಣೆ ಮಾಡಿದೆ. ‘ವಿಮಲ್ ಜಾಹೀರಾತಿನಲ್ಲಿ ಧಾನೆ, ಧಾನೆಯಲ್ಲೂ ಕೇಸರಿ (ಕಣ ಕಣದಲ್ಲೂ ಕೇಸರಿ) ಇದೆ ಎಂದು ತೋರಿಸಲಾಗಿದೆ. ಆದರೆ ಆ ಉತ್ಪನ್ನದಲ್ಲಿ ಕೇಸರಿ ಇಲ್ಲ. ಗ್ರಾಹಕರಿಗೆ ಸುಳ್ಳು ಹೇಳಿ ಉತ್ಪವನ್ನು ಮಾರಾಟ ಮಾಡಲಾಗುತ್ತಿದೆ. ಹೀಗೆ ಸುಳ್ಳು ಹೇಳಿ ಕೋಟ್ಯಂತರ ರೂಪಾಯಿ ಆದಾಯವನ್ನು ಸಂಸ್ಥೆ ಗಳಿಸುತ್ತಿದೆ’ ಎಂದು ವಕೀಲ ಯೋಗೇಂದ್ರ ಸಿಂಗ್ ಬುಧಿಯಾಲ್ ಆರೋಪ ಮಾಡಿದ್ದರು. ಇದೇ ಕಾರಣಕ್ಕೆ ಇದೀಗ ಜಾಹೀರಾತಿನಲ್ಲಿ ನಟಿಸಿರುವ ನಟರು ಮತ್ತು ಸಂಸ್ಥೆಯ ಮಾಲೀಕರಿಗೆ ನೊಟೀಸ್ ನೀಡಲಾಗಿದೆ.

ಇದನ್ನೂ ಓದಿ:ಶಾರುಖ್ ಖಾನ್ ಪುತ್ರಿಯ ಹೊಸ ಸಿನಿಮಾ, ನಿರ್ಮಾಣ ಅಪ್ಪನ ಗೆಳೆಯನದ್ದೇ

ಸಿನಿಮಾ ನಟರು ಪಾನ್ ಮಸಾಲ ಜಾಹೀರಾತುಗಳಲ್ಲಿ ನಟಿಸುವ ಬಗ್ಗೆ ಈ ಹಿಂದೆ ಹಲವಾರು ಬಾರಿ ಆಕ್ರೋಶ ವ್ಯಕ್ತವಾಗಿದೆ. ವಿಮಲ್ ಜಾಹೀರಾತಿನಲ್ಲಿ ನಟ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದರು. ಅದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೊನೆಗೆ ಅಕ್ಷಯ್ ಕುಮಾರ್, ತಾವು ಇನ್ನು ಮುಂದೆ ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದಿದ್ದರು. ನಟ ಅಮಿತಾಬ್ ಬಚ್ಚನ್ ಸಹ ರಜನೀಗಂಧ ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಈ ಬಗ್ಗೆಯೂ ಸಹ ಸಾಕಷ್ಟು ನಿಂದನೆ, ಟೀಕೆಗಳು ವ್ಯಕ್ತವಾಗಿದ್ದವು. ನಟರಾದ ಹೃತಿಕ್ ರೋಷನ್, ರಣ್ವೀರ್ ಸಿಂಗ್ ಇನ್ನೂ ಹಲವಾರು ಖ್ಯಾತನಾಮ ನಟರು ಗುಟ್ಕಾ ಜಾಹೀರಾತುಗಳಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!