ಶಾರುಖ್ ಖಾನ್, ಅಜಯ್, ಅಕ್ಷಯ್​ ಕುಮಾರ್​ಗೆ ನೊಟೀಸ್

Bollywood Stars: ಬಾಲಿವುಡ್ ಸ್ಟಾರ್​ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ ಅವರುಗಳಿಗೆ ಅಲಹಾಬಾದ್ ಹೈಕೋರ್ಟ್ ನೊಟೀಸ್ ನೀಡಿದೆ.

ಶಾರುಖ್ ಖಾನ್, ಅಜಯ್, ಅಕ್ಷಯ್​ ಕುಮಾರ್​ಗೆ ನೊಟೀಸ್
ಎಸ್​ಆರ್​ಕೆ-ಅಜಯ್
Follow us
|

Updated on: Dec 10, 2023 | 6:50 PM

ಬಾಲಿವುಡ್ (Bollywood) ಸ್ಟಾರ್ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ ಹಾಗೂ ಅಕ್ಷಯ್ ಕುಮಾರ್ ಅವರುಗಳಿಗೆ ಅಲಹಾಬಾದ್ ಹೈಕೋರ್ಟ್ ನೊಟೀಸ್ ನೀಡಿದೆ. ಈ ಮೂವರು ಸ್ಟಾರ್ ನಟರು ತಂಬಾಕು ಜಾಹೀರಾತಿನಲ್ಲಿ ನಟಿಸಿರುವ ಕಾರಣ ನ್ಯಾಯಾಲಯವು ನೊಟೀಸ್ ನೀಡಿದ್ದು, ಹಾಜರಾಗುವಂತೆ ಸೂಚಿಸಿದೆ. ಮೋತಿಲಾಲ್ ಯಾದವ್ ಎಂಬುವರು ಈ ನಟರ ವಿರುದ್ಧ ಸಲ್ಲಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಶಾರುಖ್ ಖಾನ್, ಅಜಯ್ ದೇವಗನ್, ಅಕ್ಷಯ್​ ಕುಮಾರ್​ ಅವರಿಗೆ ನೊಟೀಸ್ ನೀಡಲಾಗಿದೆ.

‘ಪದ್ಮ ಪ್ರಶಸ್ತಿಯಂಥಹಾ ಗೌರವಾನ್ವಿತ ಪ್ರಶಸ್ತಿ ಪಡೆದಿರುವ ವ್ಯಕ್ತಿಗಳು ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಹಾಗೂ ಅವರಿಗೆ ನೀಡಲಾಗಿರುವ ಪದ್ಮ ಪ್ರಶಸ್ತಿಗೂ ಅಗೌರವ ತಂದಿದ್ದಾರೆ. ಅವರು ನಟಿಸಿರುವ ಜಾಹೀರಾತಿನ ಪ್ರಸಾರಕ್ಕೆ ತಡೆ ನೀಡಬೇಕು. ಗೌರವಾನ್ವಿತ ಪ್ರಶಸ್ತಿಗೆ ಭಾಜನವಾಗಿಯೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಾಹೀರಾತಿನಲ್ಲಿ ನಟಿಸಿರುವ ನಟರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದುರು.

ಇದನ್ನೂ ಓದಿ:‘ಡಂಕಿ’ ಕ್ರೇಜ್: ಶಾರುಖ್ ಖಾನ್ ಸಿನಿಮಾ ನೋಡಲು ವಿದೇಶದಿಂದ ಬರುತ್ತಿದ್ದಾರೆ ಅಭಿಮಾನಿಗಳು

ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೆಕರೇಟರಿಗೆ ಹಾಗೂ ಇನ್ನೂ ಕೆಲವರಿಗೆ ಸೇರಿದಂತೆ ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್ ಅವರಿಗೆ ನೊಟೀಸ್ ನೀಡಲಾಗಿದೆ. ಈ ಹಿಂದೆ ಅಮಿತಾಬ್ ಬಚ್ಚನ್ ಸಹ ತಂಬಾಕು ಸಂಸ್ಥೆಗೆ ನೊಟೀಸ್ ನೀಡಿದ್ದರು, ಒಪ್ಪಂದದ ಅವಧಿ ಮುಗಿದಿದ್ದರೂ ತಾವು ನಟಿಸಿರುವ ಜಾಹೀರಾತು ಪ್ರಸಾರ ಮಾಡುತ್ತಿರುವ ಬಗ್ಗೆ ದೂರು ನೀಡಿದ್ದರು. ಅಕ್ಷಯ್ ಕುಮಾರ್ ಸಹ, ತಾವು ತಂಬಾಕು ಜಾಹೀರಾತಿನಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದರು.

ವಿಮಲ್ ನ ತಂಬಾಕು ಜಾಹೀರಾತಿನಲ್ಲಿ ಬಾಲಿವುಡ್​ನ ಹಲವು ದೊಡ್ಡ ನಟರು ನಟಿಸಿದ್ದಾರೆ. ಅಮಿತಾಬ್ ಬಚ್ಚನ್, ರಣ್ವೀರ್ ಸಿಂಗ್, ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್ ಇನ್ನೂ ಕೆಲವು ದೊಡ್ಡ ನಟರು ತಂಬಾಕು ಜಾಹೀರಾತಿನಲ್ಲಿ ನಟಿಸಿದ್ದಾರೆ. ಬಾಲಿವುಡ್ ನಟರುಗಳು ತಂಬಾಕು ಜಾಹೀರಾತಿನಲ್ಲಿ ನಟಿಸುತ್ತಿರುವುದಕ್ಕೆ ನೆಟ್ಟಿಗರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದರು. ವಿರೋಧ ವ್ಯಕ್ತವಾದ ಬಳಿಕ ನಟ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಅವರುಗಳು ತಾವು ತಂಬಾಕು ಜಾಹೀರಾತಿನಲ್ಲಿ ನಟಿಸುವುದಿಲ್ಲವೆಂಬ ನಿರ್ಣಯ ತೆಗೆದುಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ