AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಜತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ವೀಕ್ಷಿಸಲು ಬಂದಿದ್ದ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರ ಈ ಫೋಟೋ ವೈರಲ್​ ಆಗಿದ್ದು, ಫ್ಯಾನ್ಸ್​ ಖುಷಿಯಾಗಿದ್ದಾರೆ.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್
ಶಾರುಖ್​ ಖಾನ್​, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 09, 2024 | 11:33 PM

Share

ಬಾಲಿವುಡ್​ ನಟರಾದ ಶಾರುಖ್​ ಖಾನ್​ ಹಾಗೂ ಅಕ್ಷಯ್​ ಕುಮಾರ್ (Akshay Kumar)​ ಅವರ ಒಂದು ಫೋಟೋ ಸಖತ್​ ವೈರಲ್​ ಆಗಿದೆ. ಈ ಫೋಟೋ ಕ್ಲಿಕ್ಕಿಸಿರುವುದು ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ. ಭಾನುವಾರ (ಜೂನ್​ 9) ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭಕ್ಕೆ ಕೆಲವು ಬಾಲಿವುಡ್​ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ (Shah Rukh Khan) ಅವರು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದನ್ನು ನೋಡಲು ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ವಿವಿಧ ದೇಶಗಳ ಪ್ರಮುಖರು ಬಂದು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಚಿತ್ರರಂಗದ ಸೆಲೆಬ್ರಿಟಿಗಳಾದ ಅಕ್ಷಯ್​ ಕುಮಾರ್​, ಶಾರುಖ್​ ಖಾನ್​, ಅನುಪಮ್​ ಖೇರ್​, ರಾಜ್​ಕುಮಾರ್​ ಹಿರಾನಿ, ವಿಕ್ರಾಂತ್​ ಮಾಸಿ, ರಜನಿಕಾಂತ್​ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು ಬಂದಿದ್ದ ಅಕ್ಷಯ್​ ಕುಮಾರ್​ ಹಾಗೂ ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರು ತಬ್ಬಿಕೊಂಡ ಕ್ಷಣವನ್ನು ಅತ್ಯುತ್ತಮ ಕ್ಷಣ ಎಂದು ಅಭಿಮಾನಿಗಳು ಬಣ್ಣಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಶಾರುಖ್​ ಖಾನ್​ ನಟನೆಯ ‘ಕಿಂಗ್​’ ಸಿನಿಮಾ ಬಗ್ಗೆ ಸುಳ್ಳು ಸುದ್ದಿ ಹಬ್ಬಲು ಕಾರಣವಾಯ್ತು ಈ ಫೋಟೋ

ಈ ವಿಶೇಷ ಸಂದರ್ಭದಲ್ಲಿ ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಒಂದೇ ಫ್ರೇಮ್​ನಲ್ಲಿ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಮೋದಿ ಒಂದಾಗಿಸಿದರು’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಇದು ವರ್ಷದ ಅತ್ಯುತ್ತಮ ಅಪ್ಪುಗೆ’ ಎಂದು ಮತ್ತೋರ್ವ ಅಭಿಮಾನಿ ಹೇಳಿದ್ದಾರೆ. ‘ಬಾಲಿವುಡ್​ನ ಕಿಂಗ್ ಮತ್ತು ಕಿಲಾಡಿ ಒಂದಾಗಿದ್ದಾರೆ’ ಎಂಬ ಕಮೆಂಟ್​ ಕೂಡ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ