AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಜತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ವೀಕ್ಷಿಸಲು ಬಂದಿದ್ದ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರ ಈ ಫೋಟೋ ವೈರಲ್​ ಆಗಿದ್ದು, ಫ್ಯಾನ್ಸ್​ ಖುಷಿಯಾಗಿದ್ದಾರೆ.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್
ಶಾರುಖ್​ ಖಾನ್​, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 09, 2024 | 11:33 PM

Share

ಬಾಲಿವುಡ್​ ನಟರಾದ ಶಾರುಖ್​ ಖಾನ್​ ಹಾಗೂ ಅಕ್ಷಯ್​ ಕುಮಾರ್ (Akshay Kumar)​ ಅವರ ಒಂದು ಫೋಟೋ ಸಖತ್​ ವೈರಲ್​ ಆಗಿದೆ. ಈ ಫೋಟೋ ಕ್ಲಿಕ್ಕಿಸಿರುವುದು ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ. ಭಾನುವಾರ (ಜೂನ್​ 9) ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭಕ್ಕೆ ಕೆಲವು ಬಾಲಿವುಡ್​ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ (Shah Rukh Khan) ಅವರು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದನ್ನು ನೋಡಲು ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ವಿವಿಧ ದೇಶಗಳ ಪ್ರಮುಖರು ಬಂದು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಚಿತ್ರರಂಗದ ಸೆಲೆಬ್ರಿಟಿಗಳಾದ ಅಕ್ಷಯ್​ ಕುಮಾರ್​, ಶಾರುಖ್​ ಖಾನ್​, ಅನುಪಮ್​ ಖೇರ್​, ರಾಜ್​ಕುಮಾರ್​ ಹಿರಾನಿ, ವಿಕ್ರಾಂತ್​ ಮಾಸಿ, ರಜನಿಕಾಂತ್​ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು ಬಂದಿದ್ದ ಅಕ್ಷಯ್​ ಕುಮಾರ್​ ಹಾಗೂ ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರು ತಬ್ಬಿಕೊಂಡ ಕ್ಷಣವನ್ನು ಅತ್ಯುತ್ತಮ ಕ್ಷಣ ಎಂದು ಅಭಿಮಾನಿಗಳು ಬಣ್ಣಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಶಾರುಖ್​ ಖಾನ್​ ನಟನೆಯ ‘ಕಿಂಗ್​’ ಸಿನಿಮಾ ಬಗ್ಗೆ ಸುಳ್ಳು ಸುದ್ದಿ ಹಬ್ಬಲು ಕಾರಣವಾಯ್ತು ಈ ಫೋಟೋ

ಈ ವಿಶೇಷ ಸಂದರ್ಭದಲ್ಲಿ ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಒಂದೇ ಫ್ರೇಮ್​ನಲ್ಲಿ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಮೋದಿ ಒಂದಾಗಿಸಿದರು’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಇದು ವರ್ಷದ ಅತ್ಯುತ್ತಮ ಅಪ್ಪುಗೆ’ ಎಂದು ಮತ್ತೋರ್ವ ಅಭಿಮಾನಿ ಹೇಳಿದ್ದಾರೆ. ‘ಬಾಲಿವುಡ್​ನ ಕಿಂಗ್ ಮತ್ತು ಕಿಲಾಡಿ ಒಂದಾಗಿದ್ದಾರೆ’ ಎಂಬ ಕಮೆಂಟ್​ ಕೂಡ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ