AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಜತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ವೀಕ್ಷಿಸಲು ಬಂದಿದ್ದ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರ ಈ ಫೋಟೋ ವೈರಲ್​ ಆಗಿದ್ದು, ಫ್ಯಾನ್ಸ್​ ಖುಷಿಯಾಗಿದ್ದಾರೆ.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್
ಶಾರುಖ್​ ಖಾನ್​, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 09, 2024 | 11:33 PM

Share

ಬಾಲಿವುಡ್​ ನಟರಾದ ಶಾರುಖ್​ ಖಾನ್​ ಹಾಗೂ ಅಕ್ಷಯ್​ ಕುಮಾರ್ (Akshay Kumar)​ ಅವರ ಒಂದು ಫೋಟೋ ಸಖತ್​ ವೈರಲ್​ ಆಗಿದೆ. ಈ ಫೋಟೋ ಕ್ಲಿಕ್ಕಿಸಿರುವುದು ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ. ಭಾನುವಾರ (ಜೂನ್​ 9) ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭಕ್ಕೆ ಕೆಲವು ಬಾಲಿವುಡ್​ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ (Shah Rukh Khan) ಅವರು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದನ್ನು ನೋಡಲು ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ವಿವಿಧ ದೇಶಗಳ ಪ್ರಮುಖರು ಬಂದು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಚಿತ್ರರಂಗದ ಸೆಲೆಬ್ರಿಟಿಗಳಾದ ಅಕ್ಷಯ್​ ಕುಮಾರ್​, ಶಾರುಖ್​ ಖಾನ್​, ಅನುಪಮ್​ ಖೇರ್​, ರಾಜ್​ಕುಮಾರ್​ ಹಿರಾನಿ, ವಿಕ್ರಾಂತ್​ ಮಾಸಿ, ರಜನಿಕಾಂತ್​ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು ಬಂದಿದ್ದ ಅಕ್ಷಯ್​ ಕುಮಾರ್​ ಹಾಗೂ ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರು ತಬ್ಬಿಕೊಂಡ ಕ್ಷಣವನ್ನು ಅತ್ಯುತ್ತಮ ಕ್ಷಣ ಎಂದು ಅಭಿಮಾನಿಗಳು ಬಣ್ಣಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಶಾರುಖ್​ ಖಾನ್​ ನಟನೆಯ ‘ಕಿಂಗ್​’ ಸಿನಿಮಾ ಬಗ್ಗೆ ಸುಳ್ಳು ಸುದ್ದಿ ಹಬ್ಬಲು ಕಾರಣವಾಯ್ತು ಈ ಫೋಟೋ

ಈ ವಿಶೇಷ ಸಂದರ್ಭದಲ್ಲಿ ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಒಂದೇ ಫ್ರೇಮ್​ನಲ್ಲಿ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಮೋದಿ ಒಂದಾಗಿಸಿದರು’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಇದು ವರ್ಷದ ಅತ್ಯುತ್ತಮ ಅಪ್ಪುಗೆ’ ಎಂದು ಮತ್ತೋರ್ವ ಅಭಿಮಾನಿ ಹೇಳಿದ್ದಾರೆ. ‘ಬಾಲಿವುಡ್​ನ ಕಿಂಗ್ ಮತ್ತು ಕಿಲಾಡಿ ಒಂದಾಗಿದ್ದಾರೆ’ ಎಂಬ ಕಮೆಂಟ್​ ಕೂಡ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ