AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಜತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ವೀಕ್ಷಿಸಲು ಬಂದಿದ್ದ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರ ಈ ಫೋಟೋ ವೈರಲ್​ ಆಗಿದ್ದು, ಫ್ಯಾನ್ಸ್​ ಖುಷಿಯಾಗಿದ್ದಾರೆ.

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರದ ವೇಳೆ ಪರಸ್ಪರ ತಬ್ಬಿಕೊಂಡ ಅಕ್ಷಯ್, ಶಾರುಖ್
ಶಾರುಖ್​ ಖಾನ್​, ಅಕ್ಷಯ್​ ಕುಮಾರ್​
ಮದನ್​ ಕುಮಾರ್​
|

Updated on: Jun 09, 2024 | 11:33 PM

Share

ಬಾಲಿವುಡ್​ ನಟರಾದ ಶಾರುಖ್​ ಖಾನ್​ ಹಾಗೂ ಅಕ್ಷಯ್​ ಕುಮಾರ್ (Akshay Kumar)​ ಅವರ ಒಂದು ಫೋಟೋ ಸಖತ್​ ವೈರಲ್​ ಆಗಿದೆ. ಈ ಫೋಟೋ ಕ್ಲಿಕ್ಕಿಸಿರುವುದು ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ. ಭಾನುವಾರ (ಜೂನ್​ 9) ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಮಾರಂಭಕ್ಕೆ ಕೆಲವು ಬಾಲಿವುಡ್​ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ ಅಕ್ಷಯ್​ ಕುಮಾರ್​ ಮತ್ತು ಶಾರುಖ್​ ಖಾನ್​ (Shah Rukh Khan) ಅವರು ಆತ್ಮೀಯವಾಗಿ ತಬ್ಬಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವುದನ್ನು ನೋಡಲು ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿತ್ತು. ವಿವಿಧ ದೇಶಗಳ ಪ್ರಮುಖರು ಬಂದು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಚಿತ್ರರಂಗದ ಸೆಲೆಬ್ರಿಟಿಗಳಾದ ಅಕ್ಷಯ್​ ಕುಮಾರ್​, ಶಾರುಖ್​ ಖಾನ್​, ಅನುಪಮ್​ ಖೇರ್​, ರಾಜ್​ಕುಮಾರ್​ ಹಿರಾನಿ, ವಿಕ್ರಾಂತ್​ ಮಾಸಿ, ರಜನಿಕಾಂತ್​ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾದರು.

ಶಾರುಖ್​ ಖಾನ್​ ಅವರು ಮುಖೇಶ್​ ಅಂಬಾನಿ ಮತ್ತು ಅನಂತ್​ ಅಂಬಾನಿ ಅವರ ಜೊತೆ ಆಗಮಿಸಿದರು. ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರವನ್ನು ನೋಡಲು ಬಂದಿದ್ದ ಅಕ್ಷಯ್​ ಕುಮಾರ್​ ಹಾಗೂ ಶಾರುಖ್​ ಖಾನ್​ ಅವರು ಪರಸ್ಪರ ಭೇಟಿಯಾದರು. ಅವರಿಬ್ಬರು ತಬ್ಬಿಕೊಂಡ ಕ್ಷಣವನ್ನು ಅತ್ಯುತ್ತಮ ಕ್ಷಣ ಎಂದು ಅಭಿಮಾನಿಗಳು ಬಣ್ಣಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ.

ಇದನ್ನೂ ಓದಿ: ಶಾರುಖ್​ ಖಾನ್​ ನಟನೆಯ ‘ಕಿಂಗ್​’ ಸಿನಿಮಾ ಬಗ್ಗೆ ಸುಳ್ಳು ಸುದ್ದಿ ಹಬ್ಬಲು ಕಾರಣವಾಯ್ತು ಈ ಫೋಟೋ

ಈ ವಿಶೇಷ ಸಂದರ್ಭದಲ್ಲಿ ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಒಂದೇ ಫ್ರೇಮ್​ನಲ್ಲಿ ನೋಡಿದ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಅವರನ್ನು ಮೋದಿ ಒಂದಾಗಿಸಿದರು’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಇದು ವರ್ಷದ ಅತ್ಯುತ್ತಮ ಅಪ್ಪುಗೆ’ ಎಂದು ಮತ್ತೋರ್ವ ಅಭಿಮಾನಿ ಹೇಳಿದ್ದಾರೆ. ‘ಬಾಲಿವುಡ್​ನ ಕಿಂಗ್ ಮತ್ತು ಕಿಲಾಡಿ ಒಂದಾಗಿದ್ದಾರೆ’ ಎಂಬ ಕಮೆಂಟ್​ ಕೂಡ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?