AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan: ತಡವಾಗುತ್ತಾ ‘ಜವಾನ್​’ ಬಿಡುಗಡೆ? ಶಾರುಖ್​ ಖಾನ್ ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಹಬ್ಬಿದೆ ಗಾಸಿಪ್​

Jawan Movie Release Date: ಅಂದುಕೊಂಡ ರೀತಿಯೇ ‘ಜವಾನ್​’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ಆದರೂ ಕೂಡ ಜೂನ್​ 2ರಂದು ಚಿತ್ರವನ್ನು ಬಿಡುಗಡೆ ಮಾಡೋದು ಅನುಮಾನ ಎನ್ನಲಾಗುತ್ತಿದೆ.

Jawan: ತಡವಾಗುತ್ತಾ ‘ಜವಾನ್​’ ಬಿಡುಗಡೆ? ಶಾರುಖ್​ ಖಾನ್ ಚಿತ್ರದ ರಿಲೀಸ್​ ದಿನಾಂಕದ ಬಗ್ಗೆ ಹಬ್ಬಿದೆ ಗಾಸಿಪ್​
ಶಾರುಖ್ ಖಾನ್
ಮದನ್​ ಕುಮಾರ್​
|

Updated on:Mar 15, 2023 | 5:34 PM

Share

ಬಾಲಿವುಡ್ ನಟ ಶಾರುಖ್​ ಖಾನ್​ (Shah Rukh Khan) ಅವರು ಮೈಕೊಡವಿ ನಿಂತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸತತ ಸೋಲು ಅನುಭವಿಸಿದ್ದ ಅವರು ಈಗ ಭರ್ಜರಿ ಗೆಲುವು ಕಂಡಿದ್ದಾರೆ. ‘ಪಠಾಣ್​’ ಚಿತ್ರದಿಂದ ಅವರು ಅದ್ದೂರಿಯಾಗಿ ಕಮ್​ಬ್ಯಾಕ್​ ಮಾಡಿದ್ದಾರೆ. ಈ ಸಿನಿಮಾ ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಆ ಮೂಲಕ ಶಾರುಖ್​ ಖಾನ್​ ಅವರು ಬಾಕ್ಸ್​ ಆಫೀಸ್​ ಸುಲ್ತಾನ ಎಂಬುದು ಸಾಬೀತಾಗಿದೆ. ಈ ಸಿನಿಮಾದ ಗ್ರ್ಯಾಂಡ್​ ಸಕ್ಸಸ್​ ನಂತರ ಶಾರುಖ್​ ಖಾನ್​ ಅವರ ಚಾರ್ಮ್​ ಹೆಚ್ಚಾಗಿದೆ. ಅವರ ಮುಂಬರುವ ಸಿನಿಮಾಗಳ ಮೇಲೆ ನಿರೀಕ್ಷೆ ಹೆಚ್ಚಿದೆ. ಕಾಲಿವುಡ್ ನಿರ್ದೇಶಕ ಅಟ್ಲಿ ಕುಮಾರ್ (Atlee Kumar)​ ಜೊತೆ ಶಾರುಖ್​ ಖಾನ್​ ಮಾಡುತ್ತಿರುವ ‘ಜವಾನ್​’ (Jawan Movie) ಚಿತ್ರಕ್ಕೆ ಫ್ಯಾನ್ಸ್​ ಕಾಯುತ್ತಿದ್ದಾರೆ. ಆದರೆ ಈ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ದಟ್ಟವಾಗಿದೆ.

ತಮಿಳಿನಲ್ಲಿ ಅಟ್ಲಿ ಕುಮಾರ್ ಅವರು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ಶಾರುಖ್​ ಖಾನ್​ ಜೊತೆ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ಹೈಪ್​ ಹೆಚ್ಚಾಗಿದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ನೋಡಿ ಫ್ಯಾನ್ಸ್​ ವಾವ್​ ಎಂದಿದ್ದಾರೆ. ಜೂನ್​ 2ರಂದು ‘ಜವಾನ್​’ ಸಿನಿಮಾವನ್ನು ತೆರೆ ಕಾಣಿಸಬೇಕು ಎಂದು ತೀರ್ಮಾನಿಸಲಾಗಿದೆ. ಆದರೆ ಈಗ ಕೇಳಿಬರುತ್ತಿರುವ ಲೇಟೆಸ್ಟ್​ ಗಾಸಿಪ್​ ಏನೆಂದರೆ, ಜೂನ್​ 2ರಂದು ‘ಜವಾನ್​’ ಬಿಡುಗಡೆ ಆಗೋದು ಅನುಮಾನವಂತೆ.

ಇದನ್ನೂ ಓದಿ: ಶಾರುಖ್​ ಖಾನ್​ ಮನೆಗೆ ಶೂಟಿಂಗ್​ ಮಾಡಲು ಹೋದಾಗ ಆದ ಅನುಭವ ವಿವರಿಸಿದ ನಿರ್ದೇಶಕಿ

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಅಂದುಕೊಂಡ ರೀತಿಯೇ ‘ಜವಾನ್​’ ಸಿನಿಮಾದ ಶೂಟಿಂಗ್​ ನಡೆಯುತ್ತಿದೆ. ನಿಗದಿತ ಸಮಯಕ್ಕೆ ಚಿತ್ರೀಕರಣ ಮುಗಿಸಲು ಅಟ್ಲಿ ಕುಮಾರ್​ ಪ್ರಯತ್ನಿಸುತ್ತಿದ್ದಾರೆ. ಆದರೆ ಎಡಿಟಿಂಗ್​ ಸಂದರ್ಭದಲ್ಲಿ ಎಷ್ಟು ಸಮಯ ಹಿಡಿಯಲಿದೆ ಅಂತ ಊಹಿಸೋದು ಕಷ್ಟ. ಒಂದು ವೇಳೆ ಜೂನ್​ 2ಕ್ಕೆ ಸಿನಿಮಾ ರಿಲೀಸ್​ ಮಾಡಲು ಸಾಧ್ಯವಾಗದಿದ್ದರೆ ಅಕ್ಟೋಬರ್​ಗೆ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

‘ಜವಾನ್​’ ಸಿನಿಮಾದ ರಿಲೀಸ್​ ಡೇಟ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಅಟ್ಲಿ ಕುಮಾರ್​ ಮತ್ತು ಶಾರುಖ್​ ಖಾನ್​ ಅವರು ಮೀಟಿಂ​ಗ್​ ಮಾಡಲಿದ್ದಾರೆ. ಆ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಯಾರೂ ಕೂಡ ಅಧಿಕೃತ ಹೇಳಿಕೆ ನೀಡಿಲ್ಲ. ‘ಜವಾನ್’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ ಮುಂತಾದವರು ನಟಿಸುತ್ತಿದ್ದಾರೆ.

ರಾಜ್​ಕುಮಾರ್​ ಹಿರಾನಿ ನಿರ್ದೇಶನದ ‘ಡಂಕಿ’ ಸಿನಿಮಾದಲ್ಲೂ ಶಾರುಖ್​ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರ ಕೂಡ ದೊಡ್ಡ ಮಟ್ಟದಲ್ಲಿ ಕ್ರೇಜ್​ ಸೃಷ್ಟಿಸಿದೆ. ಪ್ರತಿ ಸಿನಿಮಾದಲ್ಲೂ ವಿಶೇಷವಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುವ ಹಿರಾನಿ ಅವರು ‘ಡಂಕಿ’ ಚಿತ್ರದಲ್ಲಿ ಯಾವ ಕಥೆ ಹೇಳಲಿದ್ದಾರೆ ಎಂಬ ಕೌತುಕ ಅಭಿಮಾನಿಗಳಿಗಿದೆ.​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:25 pm, Wed, 15 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು