AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

Pathaan Movie Song: ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ‘ಬೇಷರಂ ರಂಗ್​..’ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ಜನರಿಂದ ಈ ಗೀತೆಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​
ದೀಪಿಕಾ ಪಡುಕೋಣೆ
Follow us
TV9 Web
| Updated By: ಮದನ್​ ಕುಮಾರ್​

Updated on:Dec 12, 2022 | 1:10 PM

ನಟ ಶಾರುಖ್​ ಖಾನ್​ (Shah Rukh Khan) ಅವರು ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡುವುದು ಖಚಿತವಾಗಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಅವರು ಒಂದಷ್ಟು ವರ್ಷಗಳ ಬ್ರೇಕ್​ ಪಡೆದುಕೊಂಡಿದ್ದರು. ಈಗ ‘ಪಠಾಣ್​’ ಸಿನಿಮಾ (Pathaan Movie) ಮೂಲಕ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುವ ಸೂಚನೆ ನೀಡಿದ್ದಾರೆ. ಈ ಚಿತ್ರದ ಬಗ್ಗೆ ಅವರ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಹೆಚ್ಚು ಮಾಡುವ ರೀತಿಯಲ್ಲಿ ‘ಬೇಷರಂ ರಂಗ್​..’ ಹಾಡು ರಿಲೀಸ್​ ಆಗಿದೆ. ಯೂಟ್ಯೂಬ್​ನಲ್ಲಿ ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ 10 ಲಕ್ಷಕ್ಕಿಂತಲೂ ಅಧಿಕ ವೀವ್ಸ್​ ಪಡೆದುಕೊಂಡಿರುವುದು ಈ ಹಾಡಿನ ಹೆಚ್ಚುಗಾರಿಕೆ. ನಟಿ ದೀಪಿಕಾ ಪಡುಕೋಣೆ (Deepika Padukone) ಮತ್ತು ಶಾರುಖ್​ ಖಾನ್​ ಅವರ ಕೆಮಿಸ್ಟ್ರಿ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ.

‘ಪಠಾಣ್’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. 2023ರ ಜನವರಿ 25ಕ್ಕೆ ಈ ಚಿತ್ರ ರಿಲೀಸ್​ ಆಗಲಿದೆ. ಈ ಮೊದಲು ಅನಾವರಣ ಆಗಿರುವ ಟೀಸರ್​ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ಈಗ ಹಾಡಿನ ಮೂಲಕ ‘ಪಠಾಣ್​’ ತಂಡ ಸದ್ದು ಮಾಡುತ್ತಿದೆ. ವಿಶಾಲ್​-ಶೇಖರ್​ ಸಂಗೀತ ನಿರ್ದೇಶನ ಮಾಡಿರುವ ‘ಬೇಷರಂ ರಂಗ್​..’ ಗೀತೆಯನ್ನು ತುಂಬ ಗ್ಲಾಮರಸ್​ ಆಗಿ ಚಿತ್ರೀಕರಿಸಲಾಗಿದೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಇದನ್ನೂ ಓದಿ: ​Aryan Khan: ಚಿತ್ರರಂಗಕ್ಕೆ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಎಂಟ್ರಿ; ಬ್ರೇಕಿಂಗ್​ ನ್ಯೂಸ್​ ನೀಡಿದ ಸ್ಟಾರ್​ ಕಿಡ್​

ಹಿಂದಿ, ತೆಲುಗು ಹಾಗೂ ತಮಿಳಿನಲ್ಲಿ ‘ಪಠಾಣ್​’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾ ಮೂಲಕ ದೊಡ್ಡ ಗೆಲುವು ಪಡೆಯಲೇಬೇಕಾದ ಅನಿವಾರ್ಯತೆ ಶಾರುಖ್​ ಖಾನ್​ ಅವರಿಗೆ ಇದೆ. ಹಾಗಾಗಿ ಈ ಚಿತ್ರಕ್ಕಾಗಿ ಅವರು ತುಂಬ ಶ್ರಮಪಟ್ಟಿದ್ದಾರೆ. ದೇಹ ಹುರಿಗೊಳಿಸಿಕೊಂಡು 6 ಪ್ಯಾಕ್​​ ಬಾಡಿ ಮೂಲಕ ಅಭಿಮಾನಿಗಳನ್ನು ಸೆಳೆಯಲು ಪ್ರಯತ್ನಿಸಿದ್ದಾರೆ. ‘ಬೇಷರಂ ರಂಗ್​..’ ಹಾಡಿನಲ್ಲಿ ಅದರ ಝಲಕ್​ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ದೊಡ್ಡ ಪರದೆಯಲ್ಲಿ ಶಾರುಖ್​ ಅವರನ್ನು ನೋಡಲು ಫ್ಯಾನ್ಸ್​ ಕಾಡಿದ್ದಾರೆ.

ಇದನ್ನೂ ಓದಿ: Mannat: ಶಾರುಖ್​ ಖಾನ್​ ಮನೆಯ ಗೇಟಿಗೆ ವಜ್ರದ ಅಲಂಕಾರ; ಹೇಗಿದೆ ನೋಡಿ ‘ಮನ್ನತ್​’ ವೈಭೋಗ

ದೀಪಿಕಾ ಪಡುಕೋಣೆ ಅವರು ‘ಭೇಷರಂ ರಂಗ್​..’ ಹಾಡಿನಲ್ಲಿ ಹೆಚ್ಚು ಹೈಲೈಟ್​ ಆಗಿದ್ದಾರೆ. ಸಖತ್​ ಹಾಟ್​ ಅವತಾರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅವರು ಡ್ಯಾನ್ಸ್​ ಮಾಡಿರುವ ಪರಿ ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್​ಪ್ರೆಸ್​’ ಮತ್ತು ‘ಹ್ಯಾಪಿ ನ್ಯೂ ಇಯರ್​’ ಬಳಿಕ ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಅವರು ನಾಲ್ಕನೇ ಬಾರಿಗೆ ಒಂದಾಗಿರುವುದರಿಂದ ‘ಪಠಾಣ್​’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

‘ಬೇಷರಂ ರಂಗ್​..’ ಹಾಡಿಗೆ ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಚಿತ್ರತಂಡಕ್ಕೆ ಖುಷಿ ಆಗಿದೆ. ಇದೇ ರೀತಿ ಸಿನಿಮಾ ಕೂಡ ಸೂಪರ್​ ಹಿಟ್​ ಆಗಲಿದೆ ಎಂಬ ಭರವಸೆ ಮೂಡುವಂತಾಗಿದೆ. ಶಾರುಖ್​ ಖಾನ್​, ದೀಪಿಕಾ ಪಡುಕೋಣೆ ಜೊತೆ ಜಾನ್​ ಅಬ್ರಾಹಂ ಕೂಡ ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:10 pm, Mon, 12 December 22

ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ