ಶಾರುಖ್​ ಖಾನ್​-ಅಟ್ಲೀ ಹೊಸ ಸಿನಿಮಾ ಅನೌನ್ಸ್​; ಟೈಟಲ್ ಘೋಷಣೆ ಮಾಡಿದ ಕಿಂಗ್ ಖಾನ್

ಅಟ್ಲೀ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ವಿಜಯ್ ಜತೆ ಮೂರು ಚಿತ್ರಗಳನ್ನು ಮಾಡಿ ಗೆದ್ದಿದ್ದಾರೆ. ಈಗ ‘ಜವಾನ್​’ ಸಿನಿಮಾ ಮೂಲಕ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ.

ಶಾರುಖ್​ ಖಾನ್​-ಅಟ್ಲೀ ಹೊಸ ಸಿನಿಮಾ ಅನೌನ್ಸ್​; ಟೈಟಲ್ ಘೋಷಣೆ ಮಾಡಿದ ಕಿಂಗ್ ಖಾನ್
ಶಾರುಖ್ ಖಾನ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 03, 2022 | 3:12 PM

ನಟ ಶಾರುಖ್ ಖಾನ್ (Shah Rukh Khan) ಹಾಗೂ ದಕ್ಷಿಣ ಭಾರತದ ಸ್ಟಾರ್ ನಿರ್ದೇಶಕ ಅಟ್ಲೀ (Atlee) ಒಟ್ಟಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಈ ಮೊದಲೇ ಹಬ್ಬಿತ್ತು. ಶೂಟಿಂಗ್ ಸಂದರ್ಭದ ಫೋಟೋ ಕೂಡ ವೈರಲ್ ಆಗಿತ್ತು. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಸಿನಿಮಾಗೆ ‘ಜವಾನ್​’ (Jawan Movie)ಎನ್ನುವ ಟೈಟಲ್ ಇಡಲಾಗಿದೆ. ಚಿತ್ರದ ಟೈಟಲ್​ ಹೇಳುವಂತೆ ಈ ಸಿನಿಮಾ ಸೈನಿಕನ ಕುರಿತ ಸಿನಿಮಾ. ಶಾರುಖ್ ಖಾನ್​ ಸೈನಿಕನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್ ಬಿಡುಗಡೆ ಆಗಿದೆ.

ಅಟ್ಲೀ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ವಿಜಯ್ ಜತೆ ಮೂರು ಚಿತ್ರಗಳನ್ನು ಮಾಡಿ ಗೆದ್ದಿದ್ದಾರೆ. ಈಗ ‘ಜವಾನ್​’ ಸಿನಿಮಾ ಮೂಲಕ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ರಿಲೀಸ್ ಆಗಿರುವ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ
Image
‘ಡಂಕಿ’ ಸಿನಿಮಾದ ಫೋಟೋ ಲೀಕ್; 40ರ ಹರೆಯದವರಂತೆ ಕಂಡ ಶಾರುಖ್ ಖಾನ್
Image
‘ಆಚಾರ್ಯ’ ಸಿನಿಮಾದಿಂದ ವಿತರಕರಿಗೆ ನಷ್ಟ; ಮಹತ್ವದ ನಿರ್ಧಾರ ತೆಗೆದುಕೊಂಡ ಚಿರು
Image
ಮುಂಬೈ: ಶಾರುಖ್ ಖಾನ್ ಬಂಗಲೆ ಮನ್ನತ್ ಸಮೀಪದ ಕಟ್ಟಡದಲ್ಲಿ ಬೆಂಕಿ; ಯಾವುದೇ ಅಪಾಯ ಇಲ್ಲ
Image
ನಿರ್ದೇಶಕನ ಎದುರು ತಮ್ಮ ಹೊಸ ಸಿನಿಮಾ ಟೈಟಲ್ ತಪ್ಪಾಗಿ ಓದಿದ ಶಾರುಖ್; ಮುಂದೇನಾಯ್ತು ನೋಡಿ

ಅದು ಕತ್ತಲ ಕೋಣೆ. ಅಲ್ಲಿಗೆ ಶಾರುಖ್ ಎಂಟ್ರಿ ಆಗುತ್ತದೆ. ಚೀಲದ ತುಂಡನ್ನು ತಲೆಗೆ ಸುತ್ತಿಕೊಳ್ಳುತ್ತಾರೆ ಶಾರುಖ್. ಅಲ್ಲಿಯೇ ಇರುವ ಗನ್ ಒಂದನ್ನು ಹಿಡಿದು ಅವರು ಕೂರುತ್ತಾರೆ. ಅವರ ಗೆಟಪ್​ ನೋಡಿ ಪ್ರೇಕ್ಷಕರು ನಿಜಕ್ಕೂ ಅಚ್ಚರಿ ಹೊರ ಹಾಕಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಹಿಂದಿ, ಕನ್ನಡ, ತಮಿಳು ಹಾಗೂ ಮಲಯಾಳಂನಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. 2023ರ ಜೂನ್​ 2ರಂದು ಸಿನಿಮಾ ರಿಲೀಸ್ ಆಗಲಿದೆ.

View this post on Instagram

A post shared by Taran Adarsh (@taranadarsh)

ಈ ಚಿತ್ರದಲ್ಲಿ ನಯನತಾರಾ ನಟಿಸಲಿದ್ದಾರೆ ಎನ್ನುವ ಸುದ್ದಿ ಈ ಮೊದಲೇ ಹಬ್ಬಿತ್ತು. ಅವರು ಶೀಘ್ರವೇ ಮದುವೆ ಆಗುತ್ತಿದ್ದಾರೆ. ಹೀಗಾಗಿ ಅವರು ಚಿತ್ರದಿಂದ ಹೊರ ನಡೆದಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

2018ರಲ್ಲಿ ತೆರೆಗೆ ಬಂದ ‘ಝೀರೋ’ ಚಿತ್ರದ ಸೋಲಿನಿಂದ ಶಾರುಖ್ ಬೇಸರಗೊಂಡರು. ಆ ಬಳಿಕ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದುಕೊಂಡರು. ಈಗ ‘ಪಠಾಣ್​’, ‘ಡಂಕಿ’ ಹಾಗೂ ‘ಜವಾನ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮೂರು ಚಿತ್ರಗಳು ದೊಡ್ಡ ಬಜೆಟ್​ನ ಸಿನಿಮಾಗಳಾದ್ದರಿಂದ ಸಾಕಷ್ಟು ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:10 pm, Fri, 3 June 22

ತಾಜಾ ಸುದ್ದಿ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ