AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್​​-ಗೌರಿ ಖಾನ್ ಹನಿಮೂನ್​ ಫೋಟೋ ವೈರಲ್​; ಅಂದಿನ ಕಹಾನಿ ವಿವರಿಸಿದ ಸ್ನೇಹಿತ

Shah Rukh Khan Family: ಶಾರುಖ್​ ಖಾನ್​ ಅವರು 1991ರಲ್ಲಿ ಮದುವೆ ಮುಗಿಸಿಕೊಂಡು ಪತ್ನಿ ಗೌರಿ ಖಾನ್​ ಜೊತೆ ಸಿನಿಮಾದ ಚಿತ್ರೀಕರಣಕ್ಕೆ ತೆರಳಿದ್ದರು. ಆಗ ತೆಗೆದ ಫೋಟೋ ಈಗ ವೈರಲ್​ ಆಗಿದೆ.

Shah Rukh Khan: ಶಾರುಖ್​​-ಗೌರಿ ಖಾನ್ ಹನಿಮೂನ್​ ಫೋಟೋ ವೈರಲ್​; ಅಂದಿನ ಕಹಾನಿ ವಿವರಿಸಿದ ಸ್ನೇಹಿತ
ಶಾರುಖ್ ಖಾನ್, ಗೌರಿ ಖಾನ್
ಮದನ್​ ಕುಮಾರ್​
|

Updated on: Apr 29, 2023 | 7:00 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಅಪ್ಪಟ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳು ಇಲ್ಲದಿರುವಾಗ ಅವರು ಕುಟುಂಬದ ಜೊತೆ ಕಾಲ ಕಳೆಯಲು ಬಯಸುತ್ತಾರೆ. 1991ರಲ್ಲಿ ಗೌರಿ ಖಾನ್​ (Gauri Khan) ಜೊತೆ ಶಾರುಖ್​ ಖಾನ್​ ಮದುವೆ ನೆರವೇರಿತು. ಅಂದಿನಿಂದ ಇಂದಿನ ತನಕ ಇವರಿಬ್ಬರು ಅನ್ಯೋನ್ಯವಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿಗೆ ಮೂವರು ಮಕ್ಕಳು. ಮದುವೆ ಆಗಿ 32 ವರ್ಷಗಳು ಕಳೆದ ಬಳಿಕ ಶಾರುಖ್​ ಮತ್ತು ಗೌರಿ ಖಾನ್​ ಅವರ ಒಂದು ಫೋಟೋ (Shah Rukh Khan Photo) ವೈರಲ್​ ಆಗಿದೆ. ಇದು ಅವರ ಹನಿಮೂನ್​ ವೇಳೆ ಕ್ಲಿಕ್ಕಿಸಿದ ಫೋಟೋ ಎಂಬುದು ವಿಶೇಷ. ಈ ಕ್ಯೂಟ್​ ಫೋಟೋ ಕಂಡು ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಅಂದಹಾಗೆ, ಈ ಅಪರೂಪದ ಫೋಟೋವನ್ನು ಹಂಚಿಕೊಂಡಿದ್ದು ಶಾರುಖ್​ ಖಾನ್ ಅವರ ಸ್ನೇಹಿತ ವಿವೇಕ್ ವಸ್ವಾನಿ. ಗೌರಿ ಖಾನ್​ ಮತ್ತು ಶಾರುಖ್​ ಖಾನ್ ಅವರು ಮದುವೆಯ ನಂತರದ ದಿನಗಳು ಹೇಗಿತ್ತು ಎಂಬುದನ್ನು ವಿವೇಕ್​ ವಿವರಿಸಿದ್ದಾರೆ.

1991 ಎಂದರೆ ಅದು ಶಾರುಖ್​ ಖಾನ್​ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಿದ ಸಂದರ್ಭ. ಆಗ ‘ರಾಜು ಬನ್​ಗಯಾ ಜಂಟಲ್​ಮ್ಯಾನ್​’ ಸಿನಿಮಾದ ಶೂಟಿಂಗ್​ ನಡೆಯುತ್ತಿತ್ತು. ಮದುವೆ ಬಳಿಕ ಹನಿಮೂನ್​ಗೆ ತೆರಳಲು ಶಾರುಖ್​ ಖಾನ್​ ಅವರಿಗೆ ಸಮಯ ಇರಲಿಲ್ಲ. ಮದುವೆ ಮುಗಿಸಿಕೊಂಡು ಪತ್ನಿ ಸಮೇತರಾಗಿ ಅವರು ‘ರಾಜು ಬನ್​ಗಯಾ ಜಂಟಲ್​ಮ್ಯಾನ್​’ ಸಿನಿಮಾದ ಚಿತ್ರೀಕರಣಕ್ಕೆ ತೆರಳಿದ್ದರು. ಆಗ ತೆಗೆದ ಫೋಟೋ ಈಗ ವೈರಲ್​ ಆಗಿದೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

‘ದೆಹಲಿಗೆ ಹೋದೆವು. ಅಲ್ಲಿ ಅವರ ಮದುವೆ ಆಯಿತು. ಅಲ್ಲಿಂದ ನಾವು ಮಧುಮಗಳ ಜೊತೆ ನೇರವಾಗಿ ಡಾರ್ಜಲಿಂಗ್​ಗೆ ಬಂದೆವು. ರಾಜು ಬನ್​ಗಯಾ ಜಂಟಲ್​ಮ್ಯಾನ್​ ಚಿತ್ರದ ಮೊದಲ ಹಾಡಿನ ಶೂಟಿಂಗ್​ ನಡೆಯುತ್ತಿರುವಾಗಲೇ ಹನಿಮೂನ್​’ ಎಂದು ವಿವೇಕ್ ವಸ್ವಾನಿ ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ.

ಇದನ್ನೂ ಓದಿ: Gauri Khan: ಆಸ್ತಿ ವಿಚಾರದಲ್ಲಿ ಮೋಸ ಮಾಡಿದ ಆರೋಪ; ಶಾರುಖ್ ಪತ್ನಿ ಗೌರಿ ಖಾನ್​ ಮೇಲೆ ಎಫ್​ಐಆರ್​ ದಾಖಲು

ಶಾರುಖ್​ ಮೊದಲ ಮನೆ ಖರೀದಿಸಿದಾಗ:

ಶಾರುಖ್​ ಖಾನ್​ ಇಂದು ಬಹುಕೋಟಿ ರೂಪಾಯಿ ಒಡೆಯನಾಗಿದ್ದಾರೆ. ಹಲವಾರು ಕಡೆಗಳಲ್ಲಿ ಅವರು ಆಸ್ತಿ ಹೊಂದಿದ್ದಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಸಿನಿಮಾಗಳಿಂದ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ ಆರಂಭದ ದಿನಗಳಲ್ಲಿ ಪರಿಸ್ಥಿತಿ ಹೀಗಿರಲಿಲ್ಲ. ಆರ್ಯನ್​ ಖಾನ್​ ಜನಿಸುವುದಕ್ಕೂ ಮುನ್ನ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ದಂಪತಿ ಹೊಸ ಮನೆ ಖರೀದಿಸಿದ್ದರು. ಆಗ ಇಂಟೀರಿಯರ್​ ಡಿಸೈನ್​ ಮಾಡಿಸಲು ಅವರ ಬಳಿ ಹಣ ಇರಲಿಲ್ಲ. ಹಾಗಾಗಿ ಸ್ವತಃ ಗೌರಿ ಖಾನ್​ ಅವರೇ ಒಳಾಂಗಣ ವಿನ್ಯಾಸ ಮಾಡಿದ್ದರು. ನಂತರ ಅದನ್ನೇ ಅವರು ಉದ್ಯೋಗವಾಗಿ ಮಾಡಿಕೊಂಡರು. ಆ ಹಳೇ ದಿನಗಳನ್ನು ಶಾರುಖ್​ ಅವರು ಇತ್ತೀಚೆಗೆ ನೆನಪಿಸಿಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು