AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್​​-ಗೌರಿ ಖಾನ್ ಹನಿಮೂನ್​ ಫೋಟೋ ವೈರಲ್​; ಅಂದಿನ ಕಹಾನಿ ವಿವರಿಸಿದ ಸ್ನೇಹಿತ

Shah Rukh Khan Family: ಶಾರುಖ್​ ಖಾನ್​ ಅವರು 1991ರಲ್ಲಿ ಮದುವೆ ಮುಗಿಸಿಕೊಂಡು ಪತ್ನಿ ಗೌರಿ ಖಾನ್​ ಜೊತೆ ಸಿನಿಮಾದ ಚಿತ್ರೀಕರಣಕ್ಕೆ ತೆರಳಿದ್ದರು. ಆಗ ತೆಗೆದ ಫೋಟೋ ಈಗ ವೈರಲ್​ ಆಗಿದೆ.

Shah Rukh Khan: ಶಾರುಖ್​​-ಗೌರಿ ಖಾನ್ ಹನಿಮೂನ್​ ಫೋಟೋ ವೈರಲ್​; ಅಂದಿನ ಕಹಾನಿ ವಿವರಿಸಿದ ಸ್ನೇಹಿತ
ಶಾರುಖ್ ಖಾನ್, ಗೌರಿ ಖಾನ್
ಮದನ್​ ಕುಮಾರ್​
|

Updated on: Apr 29, 2023 | 7:00 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಅಪ್ಪಟ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳು ಇಲ್ಲದಿರುವಾಗ ಅವರು ಕುಟುಂಬದ ಜೊತೆ ಕಾಲ ಕಳೆಯಲು ಬಯಸುತ್ತಾರೆ. 1991ರಲ್ಲಿ ಗೌರಿ ಖಾನ್​ (Gauri Khan) ಜೊತೆ ಶಾರುಖ್​ ಖಾನ್​ ಮದುವೆ ನೆರವೇರಿತು. ಅಂದಿನಿಂದ ಇಂದಿನ ತನಕ ಇವರಿಬ್ಬರು ಅನ್ಯೋನ್ಯವಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿಗೆ ಮೂವರು ಮಕ್ಕಳು. ಮದುವೆ ಆಗಿ 32 ವರ್ಷಗಳು ಕಳೆದ ಬಳಿಕ ಶಾರುಖ್​ ಮತ್ತು ಗೌರಿ ಖಾನ್​ ಅವರ ಒಂದು ಫೋಟೋ (Shah Rukh Khan Photo) ವೈರಲ್​ ಆಗಿದೆ. ಇದು ಅವರ ಹನಿಮೂನ್​ ವೇಳೆ ಕ್ಲಿಕ್ಕಿಸಿದ ಫೋಟೋ ಎಂಬುದು ವಿಶೇಷ. ಈ ಕ್ಯೂಟ್​ ಫೋಟೋ ಕಂಡು ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಅಂದಹಾಗೆ, ಈ ಅಪರೂಪದ ಫೋಟೋವನ್ನು ಹಂಚಿಕೊಂಡಿದ್ದು ಶಾರುಖ್​ ಖಾನ್ ಅವರ ಸ್ನೇಹಿತ ವಿವೇಕ್ ವಸ್ವಾನಿ. ಗೌರಿ ಖಾನ್​ ಮತ್ತು ಶಾರುಖ್​ ಖಾನ್ ಅವರು ಮದುವೆಯ ನಂತರದ ದಿನಗಳು ಹೇಗಿತ್ತು ಎಂಬುದನ್ನು ವಿವೇಕ್​ ವಿವರಿಸಿದ್ದಾರೆ.

1991 ಎಂದರೆ ಅದು ಶಾರುಖ್​ ಖಾನ್​ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡಿದ ಸಂದರ್ಭ. ಆಗ ‘ರಾಜು ಬನ್​ಗಯಾ ಜಂಟಲ್​ಮ್ಯಾನ್​’ ಸಿನಿಮಾದ ಶೂಟಿಂಗ್​ ನಡೆಯುತ್ತಿತ್ತು. ಮದುವೆ ಬಳಿಕ ಹನಿಮೂನ್​ಗೆ ತೆರಳಲು ಶಾರುಖ್​ ಖಾನ್​ ಅವರಿಗೆ ಸಮಯ ಇರಲಿಲ್ಲ. ಮದುವೆ ಮುಗಿಸಿಕೊಂಡು ಪತ್ನಿ ಸಮೇತರಾಗಿ ಅವರು ‘ರಾಜು ಬನ್​ಗಯಾ ಜಂಟಲ್​ಮ್ಯಾನ್​’ ಸಿನಿಮಾದ ಚಿತ್ರೀಕರಣಕ್ಕೆ ತೆರಳಿದ್ದರು. ಆಗ ತೆಗೆದ ಫೋಟೋ ಈಗ ವೈರಲ್​ ಆಗಿದೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

‘ದೆಹಲಿಗೆ ಹೋದೆವು. ಅಲ್ಲಿ ಅವರ ಮದುವೆ ಆಯಿತು. ಅಲ್ಲಿಂದ ನಾವು ಮಧುಮಗಳ ಜೊತೆ ನೇರವಾಗಿ ಡಾರ್ಜಲಿಂಗ್​ಗೆ ಬಂದೆವು. ರಾಜು ಬನ್​ಗಯಾ ಜಂಟಲ್​ಮ್ಯಾನ್​ ಚಿತ್ರದ ಮೊದಲ ಹಾಡಿನ ಶೂಟಿಂಗ್​ ನಡೆಯುತ್ತಿರುವಾಗಲೇ ಹನಿಮೂನ್​’ ಎಂದು ವಿವೇಕ್ ವಸ್ವಾನಿ ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ.

ಇದನ್ನೂ ಓದಿ: Gauri Khan: ಆಸ್ತಿ ವಿಚಾರದಲ್ಲಿ ಮೋಸ ಮಾಡಿದ ಆರೋಪ; ಶಾರುಖ್ ಪತ್ನಿ ಗೌರಿ ಖಾನ್​ ಮೇಲೆ ಎಫ್​ಐಆರ್​ ದಾಖಲು

ಶಾರುಖ್​ ಮೊದಲ ಮನೆ ಖರೀದಿಸಿದಾಗ:

ಶಾರುಖ್​ ಖಾನ್​ ಇಂದು ಬಹುಕೋಟಿ ರೂಪಾಯಿ ಒಡೆಯನಾಗಿದ್ದಾರೆ. ಹಲವಾರು ಕಡೆಗಳಲ್ಲಿ ಅವರು ಆಸ್ತಿ ಹೊಂದಿದ್ದಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಸಿನಿಮಾಗಳಿಂದ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ ಆರಂಭದ ದಿನಗಳಲ್ಲಿ ಪರಿಸ್ಥಿತಿ ಹೀಗಿರಲಿಲ್ಲ. ಆರ್ಯನ್​ ಖಾನ್​ ಜನಿಸುವುದಕ್ಕೂ ಮುನ್ನ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ದಂಪತಿ ಹೊಸ ಮನೆ ಖರೀದಿಸಿದ್ದರು. ಆಗ ಇಂಟೀರಿಯರ್​ ಡಿಸೈನ್​ ಮಾಡಿಸಲು ಅವರ ಬಳಿ ಹಣ ಇರಲಿಲ್ಲ. ಹಾಗಾಗಿ ಸ್ವತಃ ಗೌರಿ ಖಾನ್​ ಅವರೇ ಒಳಾಂಗಣ ವಿನ್ಯಾಸ ಮಾಡಿದ್ದರು. ನಂತರ ಅದನ್ನೇ ಅವರು ಉದ್ಯೋಗವಾಗಿ ಮಾಡಿಕೊಂಡರು. ಆ ಹಳೇ ದಿನಗಳನ್ನು ಶಾರುಖ್​ ಅವರು ಇತ್ತೀಚೆಗೆ ನೆನಪಿಸಿಕೊಂಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ