AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​-ಕಾಜೋಲ್​ ಮತ್ತೆ ಜೋಡಿ; ಈ ಬಾರಿ ಕೂಡ ಕರಣ್​ ಜೋಹರ್ ರೂವಾರಿ

ಕರಣ್​ ಜೋಹರ್​ ಅವರಿಗೆ ಶಾರುಖ್​ ಖಾನ್​ ಮತ್ತು ಕಾಜೋಲ್​ ಜೊತೆ ಉತ್ತಮ ಗೆಳೆತನ ಇದೆ. ಅನೇಕ ವರ್ಷಗಳಿಂದಲೂ ಈ ಮೂವರು ಸ್ನೇಹಿತರು.

ಶಾರುಖ್​ ಖಾನ್​-ಕಾಜೋಲ್​ ಮತ್ತೆ ಜೋಡಿ; ಈ ಬಾರಿ ಕೂಡ ಕರಣ್​ ಜೋಹರ್ ರೂವಾರಿ
ಕಾಜೋಲ್​, ಶಾರುಖ್​ ಖಾನ್​, ಕರಣ್​ ಜೋಹರ್​,
TV9 Web
| Edited By: |

Updated on: May 02, 2022 | 11:34 AM

Share

​ಹಲವು ಸಿನಿಮಾಗಳಲ್ಲಿ ಶಾರುಖ್​ ಖಾನ್​ (Shah Rukh Khan) ಮತ್ತು ಕಾಜೋಲ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಬಾಲಿವುಡ್​ನಲ್ಲಿ ಅವರಿಬ್ಬರ ಕೆಮಿಸ್ಟ್ರಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ‘ದಿಲ್​ವಾಲೆ ದುಲ್ಹನಿಯಾ ಲೇ ಜಾಯೇಂಗೆ’ ಸಿನಿಮಾದಿಂದಲೂ ಅವರಿಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದಷ್ಟು ಕ್ರೇಜ್​ ಇದೆ. ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’, ‘ಬಾಜಿಗರ್​’, ‘ದಿಲ್​ವಾಲೆ’, ‘ಮೈ ನೇಮ್​ ಈಸ್​ ಖಾನ್​’ ಮುಂತಾದ ಸಿನಿಮಾಗಳಲ್ಲಿ ಅವರಿಬ್ಬರ ನಟನೆಯನ್ನು ಕಂಡು ಫ್ಯಾನ್ಸ್​ ಇಷ್ಟಪಟ್ಟಿದ್ದಾರೆ. ಈಗ ಈ ಜೋಡಿಯನ್ನು ಮತ್ತೆ ಒಂದಾಗಿಸಲು ಬಿ-ಟೌನ್​ ಅಂಗಳಲ್ಲಿ ಪ್ಲ್ಯಾನ್​ ಸಿದ್ಧವಾಗುತ್ತಿದೆ. ನಿರ್ಮಾಪಕ/ನಿರ್ದೇಶಕ ಕರಣ್​ ಜೋಹರ್​ (Karan Johar) ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಮುಖ್ಯ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ಕಾಜೋಲ್​ (Kajol) ಅವರಿಗೆ ವಿಶೇಷ ಪಾತ್ರಗಳನ್ನು ನೀಡಲು ಕರಣ್​ ಜೋಹರ್​ ಪ್ಲ್ಯಾನ್​ ಮಾಡಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈ ವಿಷಯ ಹೇಳಿದ ಬಳಿಕ ಅಭಿಮಾನಿಗಳು ಖುಷಿ ಆಗಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಕರಣ್​ ಜೋಹರ್​ ಅವರಿಗೆ ಶಾರುಖ್​ ಖಾನ್​ ಮತ್ತು ಕಾಜೋಲ್​ ಜೊತೆ ಉತ್ತಮ ಗೆಳೆತನ ಇದೆ. ಅನೇಕ ವರ್ಷಗಳಿಂದಲೂ ಈ ಮೂವರು ಸ್ನೇಹಿತರು. ಕಾಜೋಲ್​-ಶಾರುಖ್​ ಖಾನ್​ ಜೋಡಿಯ ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’ ಸಿನಿಮಾಗಳಿಗೆ ಕರಣ್​ ಜೋಹರ್​ ಅವರೇ ನಿರ್ದೇಶನ ಮಾಡಿದ್ದರು. ಇನ್ನು, ಅವರ ನಿರ್ದೇಶನದ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳು ಇದ್ದೇ ಇರುತ್ತವೆ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿಯೂ ಅದು ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.

ಹಲವು ಕಾರಣಗಳಿಂದಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಈ ಹಿಂದೆ ಆಲಿಯಾ ಭಟ್​ ರಣವೀರ್​ ಸಿಂಗ್​ ಅವರು ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ನಟಿಸಿದ್ದರು. ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದೇ ಜೋಡಿ ಈಗ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಮತ್ತೆ ಒಂದಾಗಿದೆ. ಅವರ ಜೊತೆಗೆ ಕಾಜೋಲ್​ ಮತ್ತು ಶಾರುಖ್​ ಖಾನ್​ ಕೂಡ ಸೇರಿಕೊಂಡರೆ ಸಿನಿಮಾದ ತಾರಾ ಮೆರುಗು ಹೆಚ್ಚಲಿದೆ. ಈ ಎಲ್ಲ ವಿವರಗಳ ಬಗ್ಗೆ ಕರಣ್​ ಜೋಹರ್​ ಕಡೆಯಿಂದಲೇ ಹೆಚ್ಚಿನ ಮಾಹಿತಿ ಹೊರಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ರಾಜ್​ಕುಮಾರ್​ ಹಿರಾನಿ ಜೊತೆ ಶಾರುಖ್​ ಹೊಸ ಸಿನಿಮಾ:

‘ಜೀರೋ’ ಚಿತ್ರದ ಬಳಿಕ ಶಾರುಖ್​ ಖಾನ್​ ಅವರ ಬೇರಾವುದೇ ಚಿತ್ರ ತೆರೆಕಂಡಿಲ್ಲ. ಸತತ ಸೋಲಿನಿಂದ ಕಂಗೆಟ್ಟಿದ್ದ ಅವರು ಈಗ ಹೇಗಾದರೂ ಮಾಡಿ ಗೆಲ್ಲಬೇಕು ಎಂಬ ಹಠದಲ್ಲಿದ್ದಾರೆ. ಒಂದೆಡೆ ಅವರ ‘ಪಠಾಣ್​’ ಸಿನಿಮಾದ ಕೆಲಸಗಳು ಜಾಲ್ತಿಯಲ್ಲಿವೆ. ಇನ್ನೊಂದೆಡೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ಅವರು ಕೈ ಜೋಡಿಸಿದ್ದಾರೆ. ಆ ಚಿತ್ರಕ್ಕೆ ‘ಡಂಕಿ’ ಎಂದು ಹೆಸರು ಇಡಲಾಗಿದೆ. ಇತ್ತೀಚೆಗಷ್ಟೇ ಅದರ ಟೈಟಲ್​ ಟೀಸರ್​ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಹುಟ್ಟುಹಾಕಿದೆ. ಬಾಲಿವುಡ್​ನಲ್ಲಿ ರಾಜ್​ಕುಮಾರ್​ ಹಿರಾನಿ ಅವರು ಸೋಲಿಲ್ಲದ ಸರದಾರನಾಗಿ ಮಿಂಚುತ್ತಿದ್ದಾರೆ. ಅವರ ಜೊತೆ ಶಾರುಖ್​ ಸಿನಿಮಾ ಮಾಡಲಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

ದೀಪಿಕಾ ಪಡುಕೋಣೆ ಬಿಕಿನಿ ಫೋಟೋಗಳು ಲೀಕ್​; ಶಾರುಖ್​ ಕೂಡ ಇದ್ದಾರೆ ಅಂತ ಪತ್ತೆಹಚ್ಚಿದ ಫ್ಯಾನ್ಸ್​

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​