AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​-ಕಾಜೋಲ್​ ಮತ್ತೆ ಜೋಡಿ; ಈ ಬಾರಿ ಕೂಡ ಕರಣ್​ ಜೋಹರ್ ರೂವಾರಿ

ಕರಣ್​ ಜೋಹರ್​ ಅವರಿಗೆ ಶಾರುಖ್​ ಖಾನ್​ ಮತ್ತು ಕಾಜೋಲ್​ ಜೊತೆ ಉತ್ತಮ ಗೆಳೆತನ ಇದೆ. ಅನೇಕ ವರ್ಷಗಳಿಂದಲೂ ಈ ಮೂವರು ಸ್ನೇಹಿತರು.

ಶಾರುಖ್​ ಖಾನ್​-ಕಾಜೋಲ್​ ಮತ್ತೆ ಜೋಡಿ; ಈ ಬಾರಿ ಕೂಡ ಕರಣ್​ ಜೋಹರ್ ರೂವಾರಿ
ಕಾಜೋಲ್​, ಶಾರುಖ್​ ಖಾನ್​, ಕರಣ್​ ಜೋಹರ್​,
TV9 Web
| Edited By: |

Updated on: May 02, 2022 | 11:34 AM

Share

​ಹಲವು ಸಿನಿಮಾಗಳಲ್ಲಿ ಶಾರುಖ್​ ಖಾನ್​ (Shah Rukh Khan) ಮತ್ತು ಕಾಜೋಲ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಬಾಲಿವುಡ್​ನಲ್ಲಿ ಅವರಿಬ್ಬರ ಕೆಮಿಸ್ಟ್ರಿಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ‘ದಿಲ್​ವಾಲೆ ದುಲ್ಹನಿಯಾ ಲೇ ಜಾಯೇಂಗೆ’ ಸಿನಿಮಾದಿಂದಲೂ ಅವರಿಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದಷ್ಟು ಕ್ರೇಜ್​ ಇದೆ. ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’, ‘ಬಾಜಿಗರ್​’, ‘ದಿಲ್​ವಾಲೆ’, ‘ಮೈ ನೇಮ್​ ಈಸ್​ ಖಾನ್​’ ಮುಂತಾದ ಸಿನಿಮಾಗಳಲ್ಲಿ ಅವರಿಬ್ಬರ ನಟನೆಯನ್ನು ಕಂಡು ಫ್ಯಾನ್ಸ್​ ಇಷ್ಟಪಟ್ಟಿದ್ದಾರೆ. ಈಗ ಈ ಜೋಡಿಯನ್ನು ಮತ್ತೆ ಒಂದಾಗಿಸಲು ಬಿ-ಟೌನ್​ ಅಂಗಳಲ್ಲಿ ಪ್ಲ್ಯಾನ್​ ಸಿದ್ಧವಾಗುತ್ತಿದೆ. ನಿರ್ಮಾಪಕ/ನಿರ್ದೇಶಕ ಕರಣ್​ ಜೋಹರ್​ (Karan Johar) ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಮುಖ್ಯ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ಕಾಜೋಲ್​ (Kajol) ಅವರಿಗೆ ವಿಶೇಷ ಪಾತ್ರಗಳನ್ನು ನೀಡಲು ಕರಣ್​ ಜೋಹರ್​ ಪ್ಲ್ಯಾನ್​ ಮಾಡಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈ ವಿಷಯ ಹೇಳಿದ ಬಳಿಕ ಅಭಿಮಾನಿಗಳು ಖುಷಿ ಆಗಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಕರಣ್​ ಜೋಹರ್​ ಅವರಿಗೆ ಶಾರುಖ್​ ಖಾನ್​ ಮತ್ತು ಕಾಜೋಲ್​ ಜೊತೆ ಉತ್ತಮ ಗೆಳೆತನ ಇದೆ. ಅನೇಕ ವರ್ಷಗಳಿಂದಲೂ ಈ ಮೂವರು ಸ್ನೇಹಿತರು. ಕಾಜೋಲ್​-ಶಾರುಖ್​ ಖಾನ್​ ಜೋಡಿಯ ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’ ಸಿನಿಮಾಗಳಿಗೆ ಕರಣ್​ ಜೋಹರ್​ ಅವರೇ ನಿರ್ದೇಶನ ಮಾಡಿದ್ದರು. ಇನ್ನು, ಅವರ ನಿರ್ದೇಶನದ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳು ಇದ್ದೇ ಇರುತ್ತವೆ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿಯೂ ಅದು ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.

ಹಲವು ಕಾರಣಗಳಿಂದಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಈ ಹಿಂದೆ ಆಲಿಯಾ ಭಟ್​ ರಣವೀರ್​ ಸಿಂಗ್​ ಅವರು ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ನಟಿಸಿದ್ದರು. ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದೇ ಜೋಡಿ ಈಗ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಮತ್ತೆ ಒಂದಾಗಿದೆ. ಅವರ ಜೊತೆಗೆ ಕಾಜೋಲ್​ ಮತ್ತು ಶಾರುಖ್​ ಖಾನ್​ ಕೂಡ ಸೇರಿಕೊಂಡರೆ ಸಿನಿಮಾದ ತಾರಾ ಮೆರುಗು ಹೆಚ್ಚಲಿದೆ. ಈ ಎಲ್ಲ ವಿವರಗಳ ಬಗ್ಗೆ ಕರಣ್​ ಜೋಹರ್​ ಕಡೆಯಿಂದಲೇ ಹೆಚ್ಚಿನ ಮಾಹಿತಿ ಹೊರಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ರಾಜ್​ಕುಮಾರ್​ ಹಿರಾನಿ ಜೊತೆ ಶಾರುಖ್​ ಹೊಸ ಸಿನಿಮಾ:

‘ಜೀರೋ’ ಚಿತ್ರದ ಬಳಿಕ ಶಾರುಖ್​ ಖಾನ್​ ಅವರ ಬೇರಾವುದೇ ಚಿತ್ರ ತೆರೆಕಂಡಿಲ್ಲ. ಸತತ ಸೋಲಿನಿಂದ ಕಂಗೆಟ್ಟಿದ್ದ ಅವರು ಈಗ ಹೇಗಾದರೂ ಮಾಡಿ ಗೆಲ್ಲಬೇಕು ಎಂಬ ಹಠದಲ್ಲಿದ್ದಾರೆ. ಒಂದೆಡೆ ಅವರ ‘ಪಠಾಣ್​’ ಸಿನಿಮಾದ ಕೆಲಸಗಳು ಜಾಲ್ತಿಯಲ್ಲಿವೆ. ಇನ್ನೊಂದೆಡೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ಅವರು ಕೈ ಜೋಡಿಸಿದ್ದಾರೆ. ಆ ಚಿತ್ರಕ್ಕೆ ‘ಡಂಕಿ’ ಎಂದು ಹೆಸರು ಇಡಲಾಗಿದೆ. ಇತ್ತೀಚೆಗಷ್ಟೇ ಅದರ ಟೈಟಲ್​ ಟೀಸರ್​ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಸಖತ್​ ನಿರೀಕ್ಷೆ ಹುಟ್ಟುಹಾಕಿದೆ. ಬಾಲಿವುಡ್​ನಲ್ಲಿ ರಾಜ್​ಕುಮಾರ್​ ಹಿರಾನಿ ಅವರು ಸೋಲಿಲ್ಲದ ಸರದಾರನಾಗಿ ಮಿಂಚುತ್ತಿದ್ದಾರೆ. ಅವರ ಜೊತೆ ಶಾರುಖ್​ ಸಿನಿಮಾ ಮಾಡಲಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

ದೀಪಿಕಾ ಪಡುಕೋಣೆ ಬಿಕಿನಿ ಫೋಟೋಗಳು ಲೀಕ್​; ಶಾರುಖ್​ ಕೂಡ ಇದ್ದಾರೆ ಅಂತ ಪತ್ತೆಹಚ್ಚಿದ ಫ್ಯಾನ್ಸ್​

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ