AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DDLJ: ‘ಪಠಾಣ್​’ ಗೆದ್ದ ಬೆನ್ನಲ್ಲೇ ‘ಡಿಡಿಎಲ್​ಜೆ’ ರೀ-ರಿಲೀಸ್; ಷರತ್ತುಗಳು ಅನ್ವಯ

ಡಿಡಿಎಲ್​ಜೆ’ ರಿಲೀಸ್ ಆಗಿದ್ದು 1995ರಲ್ಲಿ. ಶಾರುಖ್ ಖಾನ್ ಹಾಗೂ ಕಾಜೋಲ್ ಕೆಮಿಸ್ಟ್ರಿ ಇಲ್ಲಿ ಕೆಲಸ ಮಾಡಿತ್ತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಮುಂಬೈನ ಮರಾಠ ಮಂದಿರ್ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿದೆ.

DDLJ: ‘ಪಠಾಣ್​’ ಗೆದ್ದ ಬೆನ್ನಲ್ಲೇ ‘ಡಿಡಿಎಲ್​ಜೆ’ ರೀ-ರಿಲೀಸ್; ಷರತ್ತುಗಳು ಅನ್ವಯ
ಕಾಜೋಲ್​-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 10, 2023 | 7:16 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ಯಶಸ್ಸಿನ ಕಿರೀಟ ತೊಟ್ಟಿದೆ. ಈ ಚಿತ್ರದಿಂದ ಶಾರುಖ್ ಖಾನ್​ಗೆ ಇದ್ದ ಸ್ಟಾರ್​ಡಂ ಹಿರಿದಾಗಿದೆ. ಶಾರುಖ್ ಖಾನ್ ಅಭಿಮಾನಿ ಬಳಗ ದೊಡ್ಡದಾಗಿದೆ. ಈಗ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ದಿಲ್​ವಾಲೆ ದುಲ್ಹನಿಯಾ ಲೇ ಜಾಯೆಂಗೆ’ (DDLJ) ಸಿನಿಮಾ ಇಂದು (ಫೆಬ್ರವರಿ 10) ರೀ-ರಿಲೀಸ್ ಆಗಿದೆ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಬಂದ ಈ ಸಿನಿಮಾ ಭಾರತದ ಇತಿಹಾಸದಲ್ಲೇ ಅತಿ ದೀರ್ಘಕಾಲ ಪ್ರದರ್ಶನ ಕಂಡ ಸಿನಿಮಾ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ಈ ಸಿನಿಮಾ ಈಗ ಪ್ರೇಮಿಗಳ ದಿನದ ಪ್ರಯುಕ್ತ ರೀ-ರಿಲೀಸ್ ಆಗಿದೆ.

28 ವರ್ಷ ಪ್ರದರ್ಶನ

‘ಡಿಡಿಎಲ್​ಜೆ’ ರಿಲೀಸ್ ಆಗಿದ್ದು 1995ರಲ್ಲಿ. ಶಾರುಖ್ ಖಾನ್ ಹಾಗೂ ಕಾಜೋಲ್ ಕೆಮಿಸ್ಟ್ರಿ ಇಲ್ಲಿ ಕೆಲಸ ಮಾಡಿತ್ತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಮುಂಬೈನ ಮರಾಠ ಮಂದಿರ್ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿದೆ. ನಿತ್ಯ ಒಂದು ಶೋ ಈ ಚಿತ್ರಕ್ಕಾಗಿ ಕಾಯ್ದಿರಿಸಲಾಗುತ್ತದೆ. ಈಗ ಈ ಚಿತ್ರವನ್ನು ಭಾರತದ ಪ್ರಮುಖ ನಗರಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ.

ರೀ-ರಿಲೀಸ್ ಏಕೆ?

‘ಡಿಡಿಎಲ್​ಜೆ’ ಸಿನಿಮಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಚಿತ್ರವನ್ನು ಮರಳಿ ಮರಳಿ ವೀಕ್ಷಿಸುವವರ ಸಂಖ್ಯೆ ದೊಡ್ಡದಿದೆ. ‘ಡಿಡಿಎಲ್​ಜೆ’ನ ಥಿಯೇಟರ್​ನಲ್ಲಿ ಮತ್ತೆ ಬಿಡುಗಡೆ ಮಾಡಿ ಎನ್ನುವ ಒತ್ತಾಯ ಅಭಿಮಾನಿಗಳ ಕಡೆಯಿಂದ ಕೇಳಿ ಬಂದಿತ್ತು. ಹೀಗಾಗಿ ಆದಿತ್ಯ ಚೋಪ್ರಾ ಅವರು ಈ ಚಿತ್ರವನ್ನು ರೀ-ರಿಲೀಸ್ ಮಾಡಿದ್ದಾರೆ. ಇದು ರೊಮ್ಯಾಂಟಿಕ್ ಸಿನಿಮಾ ಆಗಿರುವುದರಿಂದ ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಷರತ್ತುಗಳು ಏನು?

ಈ ಚಿತ್ರ ರೀ-ರಿಲೀಸ್ ಆಗುತ್ತಿದೆ ಎಂದ ಮಾತ್ರಕ್ಕೆ ತಿಂಗಳಾನುಗಟ್ಟಲೆ ಪ್ರದರ್ಶನ ಕಾಣುವುದಿಲ್ಲ. ಒಂದು ವಾರ ಮಾತ್ರ ಸಿನಿಮಾ ಪ್ರದರ್ಶನ ಕಾಣಲಿದೆ. ಭಾರತಾದ್ಯಂತ ಸಿನಿಮಾ ರಿಲೀಸ್ ಆದರೂ ಈ ಚಿತ್ರ ಬೆಂಗಳೂರು, ಮುಂಬೈ, ಪುಣೆ, ದೆಹಲಿ, ಕೋಲ್ಕತ್ತಾ, ಹೈದರಾಬಾದ್​, ಚೆನ್ನೈ ಸೇರಿ ಪ್ರಮುಖ 37 ನಗರಗಳಲ್ಲಿ ಮಾತ್ರ ಪ್ರದರ್ಶನ ಕಾಣಲಿದೆ. ಸಿನಿಮಾ ಹೆಚ್ಚಾಗಿ ಮಲ್ಟಿಪ್ಲೆಕ್ಸ್​​ಗಳಲ್ಲಿ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?