AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DDLJ: ‘ಪಠಾಣ್​’ ಗೆದ್ದ ಬೆನ್ನಲ್ಲೇ ‘ಡಿಡಿಎಲ್​ಜೆ’ ರೀ-ರಿಲೀಸ್; ಷರತ್ತುಗಳು ಅನ್ವಯ

ಡಿಡಿಎಲ್​ಜೆ’ ರಿಲೀಸ್ ಆಗಿದ್ದು 1995ರಲ್ಲಿ. ಶಾರುಖ್ ಖಾನ್ ಹಾಗೂ ಕಾಜೋಲ್ ಕೆಮಿಸ್ಟ್ರಿ ಇಲ್ಲಿ ಕೆಲಸ ಮಾಡಿತ್ತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಮುಂಬೈನ ಮರಾಠ ಮಂದಿರ್ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿದೆ.

DDLJ: ‘ಪಠಾಣ್​’ ಗೆದ್ದ ಬೆನ್ನಲ್ಲೇ ‘ಡಿಡಿಎಲ್​ಜೆ’ ರೀ-ರಿಲೀಸ್; ಷರತ್ತುಗಳು ಅನ್ವಯ
ಕಾಜೋಲ್​-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 10, 2023 | 7:16 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ಯಶಸ್ಸಿನ ಕಿರೀಟ ತೊಟ್ಟಿದೆ. ಈ ಚಿತ್ರದಿಂದ ಶಾರುಖ್ ಖಾನ್​ಗೆ ಇದ್ದ ಸ್ಟಾರ್​ಡಂ ಹಿರಿದಾಗಿದೆ. ಶಾರುಖ್ ಖಾನ್ ಅಭಿಮಾನಿ ಬಳಗ ದೊಡ್ಡದಾಗಿದೆ. ಈಗ ಶಾರುಖ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ದಿಲ್​ವಾಲೆ ದುಲ್ಹನಿಯಾ ಲೇ ಜಾಯೆಂಗೆ’ (DDLJ) ಸಿನಿಮಾ ಇಂದು (ಫೆಬ್ರವರಿ 10) ರೀ-ರಿಲೀಸ್ ಆಗಿದೆ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಬಂದ ಈ ಸಿನಿಮಾ ಭಾರತದ ಇತಿಹಾಸದಲ್ಲೇ ಅತಿ ದೀರ್ಘಕಾಲ ಪ್ರದರ್ಶನ ಕಂಡ ಸಿನಿಮಾ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ಈ ಸಿನಿಮಾ ಈಗ ಪ್ರೇಮಿಗಳ ದಿನದ ಪ್ರಯುಕ್ತ ರೀ-ರಿಲೀಸ್ ಆಗಿದೆ.

28 ವರ್ಷ ಪ್ರದರ್ಶನ

‘ಡಿಡಿಎಲ್​ಜೆ’ ರಿಲೀಸ್ ಆಗಿದ್ದು 1995ರಲ್ಲಿ. ಶಾರುಖ್ ಖಾನ್ ಹಾಗೂ ಕಾಜೋಲ್ ಕೆಮಿಸ್ಟ್ರಿ ಇಲ್ಲಿ ಕೆಲಸ ಮಾಡಿತ್ತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಮುಂಬೈನ ಮರಾಠ ಮಂದಿರ್ ಚಿತ್ರಮಂದಿರದಲ್ಲಿ ಈಗಲೂ ಪ್ರದರ್ಶನ ಕಾಣುತ್ತಿದೆ. ನಿತ್ಯ ಒಂದು ಶೋ ಈ ಚಿತ್ರಕ್ಕಾಗಿ ಕಾಯ್ದಿರಿಸಲಾಗುತ್ತದೆ. ಈಗ ಈ ಚಿತ್ರವನ್ನು ಭಾರತದ ಪ್ರಮುಖ ನಗರಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ.

ರೀ-ರಿಲೀಸ್ ಏಕೆ?

‘ಡಿಡಿಎಲ್​ಜೆ’ ಸಿನಿಮಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಚಿತ್ರವನ್ನು ಮರಳಿ ಮರಳಿ ವೀಕ್ಷಿಸುವವರ ಸಂಖ್ಯೆ ದೊಡ್ಡದಿದೆ. ‘ಡಿಡಿಎಲ್​ಜೆ’ನ ಥಿಯೇಟರ್​ನಲ್ಲಿ ಮತ್ತೆ ಬಿಡುಗಡೆ ಮಾಡಿ ಎನ್ನುವ ಒತ್ತಾಯ ಅಭಿಮಾನಿಗಳ ಕಡೆಯಿಂದ ಕೇಳಿ ಬಂದಿತ್ತು. ಹೀಗಾಗಿ ಆದಿತ್ಯ ಚೋಪ್ರಾ ಅವರು ಈ ಚಿತ್ರವನ್ನು ರೀ-ರಿಲೀಸ್ ಮಾಡಿದ್ದಾರೆ. ಇದು ರೊಮ್ಯಾಂಟಿಕ್ ಸಿನಿಮಾ ಆಗಿರುವುದರಿಂದ ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಷರತ್ತುಗಳು ಏನು?

ಈ ಚಿತ್ರ ರೀ-ರಿಲೀಸ್ ಆಗುತ್ತಿದೆ ಎಂದ ಮಾತ್ರಕ್ಕೆ ತಿಂಗಳಾನುಗಟ್ಟಲೆ ಪ್ರದರ್ಶನ ಕಾಣುವುದಿಲ್ಲ. ಒಂದು ವಾರ ಮಾತ್ರ ಸಿನಿಮಾ ಪ್ರದರ್ಶನ ಕಾಣಲಿದೆ. ಭಾರತಾದ್ಯಂತ ಸಿನಿಮಾ ರಿಲೀಸ್ ಆದರೂ ಈ ಚಿತ್ರ ಬೆಂಗಳೂರು, ಮುಂಬೈ, ಪುಣೆ, ದೆಹಲಿ, ಕೋಲ್ಕತ್ತಾ, ಹೈದರಾಬಾದ್​, ಚೆನ್ನೈ ಸೇರಿ ಪ್ರಮುಖ 37 ನಗರಗಳಲ್ಲಿ ಮಾತ್ರ ಪ್ರದರ್ಶನ ಕಾಣಲಿದೆ. ಸಿನಿಮಾ ಹೆಚ್ಚಾಗಿ ಮಲ್ಟಿಪ್ಲೆಕ್ಸ್​​ಗಳಲ್ಲಿ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ