Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಹಾಗೂ ಅಜಯ್​ ದೇವಗನ್ ಪತ್ನಿ ಕಾಜೋಲ್ ಬಗ್ಗೆ ಹಬ್ಬಿತು ವದಂತಿ; ಇದು ಯಾರ ಕಿತಾಪತಿ?

ಹಲವು ಕಾರಣಗಳಿಂದಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಆಲಿಯಾ ಭಟ್​ ರಣವೀರ್​ ಸಿಂಗ್​ ಅವರು ಈ ಸಿನಿಮಾದಲ್ಲಿ ಮತ್ತೆ ಒಂದಾಗಿದೆ.

ಶಾರುಖ್ ಖಾನ್ ಹಾಗೂ ಅಜಯ್​ ದೇವಗನ್ ಪತ್ನಿ ಕಾಜೋಲ್ ಬಗ್ಗೆ ಹಬ್ಬಿತು ವದಂತಿ; ಇದು ಯಾರ ಕಿತಾಪತಿ?
ಕಾಜೋಲ್-ಶಾರುಖ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 02, 2022 | 6:17 PM

ಸ್ಟಾರ್​ ನಟ ನಟಿಯರ ಬಗ್ಗೆ ನಿತ್ಯ ಒಂದಷ್ಟು ಸುದ್ದಿಗಳು ಹುಟ್ಟಿಕೊಳ್ಳುತ್ತವೆ. ಇದರಲ್ಲಿ ಕೆಲವು ನಿಜವಾದರೆ, ಇನ್ನೂ ಕೆಲವು ವದಂತಿಗಳು. ಇದಕ್ಕೆಲ್ಲ ಸ್ಟಾರ್ ನಟರು ತಲೆಕೆಡಿಸಿಕೊಳ್ಳುವುದಿಲ್ಲ. ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ಹೊಸಹೊಸ ಸುದ್ದಿಗಳು ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಸಿನಿಮಾ ರಂಗದಲ್ಲಿ ಆ ಹೀರೋ ಈ ನಿರ್ದೇಶಕನ ಜತೆ ನಟಿಸುತ್ತಾರೆ, ಆ ಸ್ಟಾರ್ ಜೋಡಿ ಮತ್ತೆ ಒಂದಾಗುತ್ತಿದೆ ಎಂಬಿತ್ಯಾದಿ ವದಂತಿಗಳಿಗೆ ಇಲ್ಲಿ ಬರವಿಲ್ಲ. ಶಾರುಖ್ ಖಾನ್ (Shah Rukh Khan) ಹಾಗೂ ಅಜಯ್​ ದೇವಗನ್ (Ajay Devgn) ಪತ್ನಿ ಕಾಜೋಲ್ (Kajol) ಅವರ ಬಗ್ಗೆಯೂ ಇದೇ ಮಾದರಿಯ ವದಂತಿ ಹುಟ್ಟಿಕೊಂಡಿತ್ತು. ಇದರಲ್ಲಿ ನಿಜಾಂಶವಿಲ್ಲ ಎಂಬುದು ಪಕ್ಕಾ ಆಗಿದೆ.

ಎಸ್​ಆರ್​ಕೆ ಹಾಗೂ ಕಾಜೋಲ್ ಅವರದ್ದು ಬಾಲಿವುಡ್​ನಲ್ಲಿ ಹಿಟ್ ಜೋಡಿ. ಕಾಜೋಲ್​-ಶಾರುಖ್​ ಖಾನ್​ ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’, ‘ಮೈ ನೇಮ್ ಈಸ್ ಖಾನ್​’, ‘ಡಿಡಿಎಲ್​ಜೆ’ ಸೇರಿ ಹಲವು ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರಿಬ್ಬರೂ ಕರಣ್ ಜೋಹರ್ ನಿರ್ದೇಶನ ಮಾಡುತ್ತಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಬಾಲಿವುಡ್ ಮಂದಿ ಈ ವದಂತಿ ಹಬ್ಬಿಸಿದ್ದಾರೆ ಎನ್ನಲಾಗುತ್ತಿದೆ.

ಕರಣ್​ ಜೋಹರ್​ ಅವರಿಗೆ ಶಾರುಖ್​ ಖಾನ್​ ಮತ್ತು ಕಾಜೋಲ್​ ಜೊತೆ ಉತ್ತಮ ಗೆಳೆತನ ಇದೆ. ಅನೇಕ ವರ್ಷಗಳಿಂದಲೂ ಈ ಮೂವರು ಸ್ನೇಹಿತರು. ಕಾಜೋಲ್​-ಶಾರುಖ್​ ಖಾನ್​ ಜೋಡಿಯ ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’ ಸಿನಿಮಾಗಳಿಗೆ ಕರಣ್​ ಜೋಹರ್​ ಅವರೇ ನಿರ್ದೇಶನ ಮಾಡಿದ್ದರು. ಕರಣ್ ನಿರ್ದೇಶನದ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳು ಇದ್ದೇ ಇರುತ್ತವೆ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿಯೂ ಅದು ಮುಂದುವರಿಯಲಿದೆ ಎಂದು ಹೇಳಲಾಗಿತ್ತು. ಆದರೆ, ಇದು ವದಂತಿ ಎಂಬುದನ್ನು ಮೂಲಗಳು ಖಚಿತಪಡಿಸಿರುವುದಾಗಿ ಬಾಲಿವುಡ್ ಹಂಗಾಮ ವರದಿ ಮಾಡಿದೆ.

ಹಲವು ಕಾರಣಗಳಿಂದಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಈ ಹಿಂದೆ ಆಲಿಯಾ ಭಟ್​ ರಣವೀರ್​ ಸಿಂಗ್​ ಅವರು ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ನಟಿಸಿದ್ದರು. ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ಅದೇ ಜೋಡಿ ಈಗ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಮತ್ತೆ ಒಂದಾಗಿದೆ. ಅವರ ಜೊತೆಗೆ ಕಾಜೋಲ್​ ಮತ್ತು ಶಾರುಖ್​ ಖಾನ್​ ಕೂಡ ಸೇರಿಕೊಂಡರೆ ಸಿನಿಮಾದ ತಾರಾ ಮೆರುಗು ಹೆಚ್ಚಲಿದೆ. ಈ ಎಲ್ಲ ವಿವರಗಳ ಬಗ್ಗೆ ಕರಣ್​ ಜೋಹರ್​ ಕಡೆಯಿಂದಲೇ ಹೆಚ್ಚಿನ ಮಾಹಿತಿ ಹೊರಬರಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: Ajay Devgan: ಕಿಚ್ಚ ಸುದೀಪ್ ಮಾತಿಗೆ ಪ್ರತಿಕ್ರಿಯಿಸುತ್ತಾ ‘ಹಿಂದಿಯೇ ನಮ್ಮ ರಾಷ್ಟ್ರಭಾಷೆ’ ಎಂದ ಅಜಯ್ ದೇವಗನ್; ನೆಟ್ಟಿಗರಿಂದ ಕ್ಲಾಸ್

ಕರಣ್​ ಜೋಹರ್​ ಜತೆ ರಶ್ಮಿಕಾ ಮಂದಣ್ಣ ಸಿನಿಮಾ?

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ