AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಜೋಹರ್ ಪಾರ್ಟಿ ಎಫೆಕ್ಟ್​; ಶಾರುಖ್​, ಕತ್ರಿನಾಗೆ ಕೊರೊನಾ ಪಾಸಿಟಿವ್

ಪಾರ್ಟಿಗೆ ಬಂದ ಸೆಲೆಬ್ರಿಟಿಗಳು ಒಟ್ಟಾಗಿ ಕುಣಿದು ಕುಪ್ಪಳಿಸಿದ್ದರು. ಶಾರುಖ್ ಖಾನ್ ಹಾಗೂ ಗೌರಿ ಖಾನ್ ಒಟ್ಟಾಗಿ ಕಾಣಿಸಿಕೊಂಡರೆ, ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಈ ಪಾರ್ಟಿಯಲ್ಲಿ ಮಿಂಚಿದ್ದರು.

ಕರಣ್ ಜೋಹರ್ ಪಾರ್ಟಿ ಎಫೆಕ್ಟ್​; ಶಾರುಖ್​, ಕತ್ರಿನಾಗೆ ಕೊರೊನಾ ಪಾಸಿಟಿವ್
ಶಾರುಖ್​-ಕತ್ರಿನಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 05, 2022 | 9:37 PM

Share

ಕರಣ್ ಜೋಹರ್​ ಅವರು (Karan Johar) ಕಳೆದ ತಿಂಗಳು ಗ್ರ್ಯಾಂಡ್ ಆಗಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಗೆ ಬಾಲಿವುಡ್​ ಸೆಲೆಬ್ರಿಟಿಗಳ ದಂಡೇ ನೆರೆದಿತ್ತು. ಈ ಪೈಕಿ 55 ಸೆಲೆಬ್ರಿಟಿಗಳಿಗೆ ಕೊವಿಡ್ ಪಾಸಿಟಿವ್ ಆಗಿದೆ ಎಂದು ವರದಿ ಆಗಿದೆ. ಈ ಮೂಲಕ ಕರಣ್​ ಜೋಹರ್ ಏರ್ಪಡಿಸಿದ್ದ ಪಾರ್ಟಿ ಕೊರೊನಾದ ಹಾಟ್​ಸ್ಪಾಟ್ ಆಗಿದೆ. ಕೆಲ ವರದಿಗಳ ಪ್ರಕಾರ ಶಾರುಖ್ ಖಾನ್ (Shah Rukh Khan) ಹಾಗೂ ಕತ್ರಿನಾ ಕೈಫ್​ಗೆ ಕೊವಿಡ್ ಪಾಸಿಟಿವ್ ಆಗಿದೆ. ಇವರಿಬ್ಬರೂ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು.

ಕರಣ್ ಜೋಹರ್ ಅವರು ಯಶ್​ ರಾಜ್ ಫಿಲ್ಮ್​ ಸ್ಟುಡಿಯೋದಲ್ಲಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಿದ್ದರು. ಇದು ಅವರ 50ನೇ ವರ್ಷದ ಬರ್ತ್​ಡೇ ಆಗಿತ್ತು. ಹೀಗಾಗಿ, ಅದ್ದೂರಿತನ ಕೊಂಚ ಹೆಚ್ಚೇ ಇತ್ತು. ಪಾರ್ಟಿಗೆ ಬಂದ ಸೆಲೆಬ್ರಿಟಿಗಳು ಒಟ್ಟಾಗಿ ಕುಣಿದು ಕುಪ್ಪಳಿಸಿದ್ದರು. ಶಾರುಖ್ ಖಾನ್ ಹಾಗೂ ಗೌರಿ ಖಾನ್ ಒಟ್ಟಾಗಿ ಕಾಣಿಸಿಕೊಂಡರೆ, ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಈ ಪಾರ್ಟಿಯಲ್ಲಿ ಮಿಂಚಿದ್ದರು.

ಇದನ್ನೂ ಓದಿ
Image
ಕರಣ್​ ಜೋಹರ್​ ಬರ್ತ್​ಡೇ ಪಾರ್ಟಿಗೆ ಬಂದ 55 ಮಂದಿಗೆ ಕೊರೊನಾ ಪಾಸಿಟಿವ್​? ಶಾಕಿಂಗ್​ ಸುದ್ದಿ ವೈರಲ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​
Image
ಕರಣ್​ ಜೋಹರ್​ ಅದ್ದೂರಿ ಬರ್ತ್​ಡೇ ಪಾರ್ಟಿಗೆ ಕನ್ನಡದ ಸೆಲೆಬ್ರಿಟಿಗಳಿಗೂ ಆಹ್ವಾನ; ಬದಲಾಯ್ತು ಕಾಲ

ಕತ್ರಿನಾ ಕೈಫ್ ಅವರಿಗೆ ಏಪ್ರಿಲ್​ 2021ರಲ್ಲಿ ಕೊವಿಡ್ ಸೋಂಕು ಅಂಟಿತ್ತು​ . ಈಗ ಮತ್ತೊಮ್ಮೆ ಅವರಿಗೆ ಕೊವಿಡ್ ಅಂಟಿದೆ. ಕತ್ರಿನಾ ಹಾಗೂ ಶಾರುಖ್ ಖಾನ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಪಾರ್ಟಿ ಬಳಿಕ ಚಿತ್ರದ ಸೆಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದ ಸಿನಿಮಾದ ತಾಂತ್ರಿಕ ವರ್ಗದವರಿಗೆ ಕೊವಿಡ್ ಅಂಟಿರುವ ಭಯ ಕಾಡುತ್ತಿದೆ.

‘ನಮ್ಮ ಬ್ರಾಂಡ್ ಅಂಬಾಸಿಡರ್ ಶಾರುಖ್ ಖಾನ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂಬುದು ತಿಳಿಯಿತು. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ. ಶಾರುಖ್ ಅವರೇ ಗುಣಮುಖರಾಗಿ. ಆದಷ್ಟು ಬೇಗ ಹಿಂತಿರುಗಿ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. 2020ರಲ್ಲಿ ಶಾರುಖ್ ಖಾನ್ ಅವರನ್ನು ರಾಜ್ಯದ ರಾಯಭಾರಿಯಾಗಿ ಮಮತಾ ಬ್ಯಾನರ್ಜಿ ನೇಮಕ ಮಾಡಿದ್ದರು.

ಇದನ್ನೂ ಓದಿ: ಶಾರುಖ್ ಖಾನ್​ಗೆ ಇದೆ ವಿಚಿತ್ರ ಹವ್ಯಾಸ; ಇದಕ್ಕಾಗಿ ಅವರು ಖರ್ಚು ಮಾಡಿದ್ದು 40 ಲಕ್ಷ ರೂಪಾಯಿ

ಶಾರುಖ್ ಖಾನ್ ಅವರು ನಿರ್ದೇಶಕ ಅಟ್ಲೀ ಜತೆ ಕೈ ಜೋಡಿಸಿರುವ ವಿಚಾರವನ್ನು ಇತ್ತೀಚೆಗೆ ಖಚಿತಪಡಿಸಿದ್ದರು. ಈ ಚಿತ್ರಕ್ಕೆ ‘ಜವಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ