AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಜೋಹರ್ ಪಾರ್ಟಿ ಎಫೆಕ್ಟ್​; ಶಾರುಖ್​, ಕತ್ರಿನಾಗೆ ಕೊರೊನಾ ಪಾಸಿಟಿವ್

ಪಾರ್ಟಿಗೆ ಬಂದ ಸೆಲೆಬ್ರಿಟಿಗಳು ಒಟ್ಟಾಗಿ ಕುಣಿದು ಕುಪ್ಪಳಿಸಿದ್ದರು. ಶಾರುಖ್ ಖಾನ್ ಹಾಗೂ ಗೌರಿ ಖಾನ್ ಒಟ್ಟಾಗಿ ಕಾಣಿಸಿಕೊಂಡರೆ, ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಈ ಪಾರ್ಟಿಯಲ್ಲಿ ಮಿಂಚಿದ್ದರು.

ಕರಣ್ ಜೋಹರ್ ಪಾರ್ಟಿ ಎಫೆಕ್ಟ್​; ಶಾರುಖ್​, ಕತ್ರಿನಾಗೆ ಕೊರೊನಾ ಪಾಸಿಟಿವ್
ಶಾರುಖ್​-ಕತ್ರಿನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 05, 2022 | 9:37 PM

ಕರಣ್ ಜೋಹರ್​ ಅವರು (Karan Johar) ಕಳೆದ ತಿಂಗಳು ಗ್ರ್ಯಾಂಡ್ ಆಗಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಗೆ ಬಾಲಿವುಡ್​ ಸೆಲೆಬ್ರಿಟಿಗಳ ದಂಡೇ ನೆರೆದಿತ್ತು. ಈ ಪೈಕಿ 55 ಸೆಲೆಬ್ರಿಟಿಗಳಿಗೆ ಕೊವಿಡ್ ಪಾಸಿಟಿವ್ ಆಗಿದೆ ಎಂದು ವರದಿ ಆಗಿದೆ. ಈ ಮೂಲಕ ಕರಣ್​ ಜೋಹರ್ ಏರ್ಪಡಿಸಿದ್ದ ಪಾರ್ಟಿ ಕೊರೊನಾದ ಹಾಟ್​ಸ್ಪಾಟ್ ಆಗಿದೆ. ಕೆಲ ವರದಿಗಳ ಪ್ರಕಾರ ಶಾರುಖ್ ಖಾನ್ (Shah Rukh Khan) ಹಾಗೂ ಕತ್ರಿನಾ ಕೈಫ್​ಗೆ ಕೊವಿಡ್ ಪಾಸಿಟಿವ್ ಆಗಿದೆ. ಇವರಿಬ್ಬರೂ ಬರ್ತ್​ಡೇ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು.

ಕರಣ್ ಜೋಹರ್ ಅವರು ಯಶ್​ ರಾಜ್ ಫಿಲ್ಮ್​ ಸ್ಟುಡಿಯೋದಲ್ಲಿ ಬರ್ತ್​ಡೇ ಪಾರ್ಟಿ ಆಯೋಜನೆ ಮಾಡಿದ್ದರು. ಇದು ಅವರ 50ನೇ ವರ್ಷದ ಬರ್ತ್​ಡೇ ಆಗಿತ್ತು. ಹೀಗಾಗಿ, ಅದ್ದೂರಿತನ ಕೊಂಚ ಹೆಚ್ಚೇ ಇತ್ತು. ಪಾರ್ಟಿಗೆ ಬಂದ ಸೆಲೆಬ್ರಿಟಿಗಳು ಒಟ್ಟಾಗಿ ಕುಣಿದು ಕುಪ್ಪಳಿಸಿದ್ದರು. ಶಾರುಖ್ ಖಾನ್ ಹಾಗೂ ಗೌರಿ ಖಾನ್ ಒಟ್ಟಾಗಿ ಕಾಣಿಸಿಕೊಂಡರೆ, ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಈ ಪಾರ್ಟಿಯಲ್ಲಿ ಮಿಂಚಿದ್ದರು.

ಇದನ್ನೂ ಓದಿ
Image
ಕರಣ್​ ಜೋಹರ್​ ಬರ್ತ್​ಡೇ ಪಾರ್ಟಿಗೆ ಬಂದ 55 ಮಂದಿಗೆ ಕೊರೊನಾ ಪಾಸಿಟಿವ್​? ಶಾಕಿಂಗ್​ ಸುದ್ದಿ ವೈರಲ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​
Image
ಕರಣ್​ ಜೋಹರ್​ ಅದ್ದೂರಿ ಬರ್ತ್​ಡೇ ಪಾರ್ಟಿಗೆ ಕನ್ನಡದ ಸೆಲೆಬ್ರಿಟಿಗಳಿಗೂ ಆಹ್ವಾನ; ಬದಲಾಯ್ತು ಕಾಲ

ಕತ್ರಿನಾ ಕೈಫ್ ಅವರಿಗೆ ಏಪ್ರಿಲ್​ 2021ರಲ್ಲಿ ಕೊವಿಡ್ ಸೋಂಕು ಅಂಟಿತ್ತು​ . ಈಗ ಮತ್ತೊಮ್ಮೆ ಅವರಿಗೆ ಕೊವಿಡ್ ಅಂಟಿದೆ. ಕತ್ರಿನಾ ಹಾಗೂ ಶಾರುಖ್ ಖಾನ್ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಪಾರ್ಟಿ ಬಳಿಕ ಚಿತ್ರದ ಸೆಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದ ಸಿನಿಮಾದ ತಾಂತ್ರಿಕ ವರ್ಗದವರಿಗೆ ಕೊವಿಡ್ ಅಂಟಿರುವ ಭಯ ಕಾಡುತ್ತಿದೆ.

‘ನಮ್ಮ ಬ್ರಾಂಡ್ ಅಂಬಾಸಿಡರ್ ಶಾರುಖ್ ಖಾನ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂಬುದು ತಿಳಿಯಿತು. ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ. ಶಾರುಖ್ ಅವರೇ ಗುಣಮುಖರಾಗಿ. ಆದಷ್ಟು ಬೇಗ ಹಿಂತಿರುಗಿ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. 2020ರಲ್ಲಿ ಶಾರುಖ್ ಖಾನ್ ಅವರನ್ನು ರಾಜ್ಯದ ರಾಯಭಾರಿಯಾಗಿ ಮಮತಾ ಬ್ಯಾನರ್ಜಿ ನೇಮಕ ಮಾಡಿದ್ದರು.

ಇದನ್ನೂ ಓದಿ: ಶಾರುಖ್ ಖಾನ್​ಗೆ ಇದೆ ವಿಚಿತ್ರ ಹವ್ಯಾಸ; ಇದಕ್ಕಾಗಿ ಅವರು ಖರ್ಚು ಮಾಡಿದ್ದು 40 ಲಕ್ಷ ರೂಪಾಯಿ

ಶಾರುಖ್ ಖಾನ್ ಅವರು ನಿರ್ದೇಶಕ ಅಟ್ಲೀ ಜತೆ ಕೈ ಜೋಡಿಸಿರುವ ವಿಚಾರವನ್ನು ಇತ್ತೀಚೆಗೆ ಖಚಿತಪಡಿಸಿದ್ದರು. ಈ ಚಿತ್ರಕ್ಕೆ ‘ಜವಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು