AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್’ ಚಿತ್ರದ ಬಳಿಕ ಶಾರುಖ್​ಗೆ ಬಂದ ಜಾಹೀರಾತುಗಳೆಷ್ಟು? ಇದರಿಂದ ಆದ ಲಾಭ ಅಷ್ಟಿಷ್ಟಲ್ಲ..

‘ಪಠಾಣ್’,​ ‘ಜವಾನ್’ ಹಾಗೂ ‘ಡಂಕಿ’ ಚಿತ್ರಗಳು ಹಿಟ್ ಆದವು. ಈ ಮೂರು ಸಿನಿಮಾಗಳಿಂದ ಒಟ್ಟಾರೆ ಬಿಸ್ನೆಸ್ ಆಗಿದ್ದು ಬರೋಬ್ಬರಿ 2600 ಕೋಟಿ ರೂಪಾಯಿ. ಶಾರುಖ್ ಖಾನ್ ಅವರಿಂದ ಚಿತ್ರರಂಗಕ್ಕೆ ದೊಡ್ಡ ಬೂಮ್ ಸಿಕ್ಕಿದೆ.

‘ಪಠಾಣ್’ ಚಿತ್ರದ ಬಳಿಕ ಶಾರುಖ್​ಗೆ ಬಂದ ಜಾಹೀರಾತುಗಳೆಷ್ಟು? ಇದರಿಂದ ಆದ ಲಾಭ ಅಷ್ಟಿಷ್ಟಲ್ಲ..
ಶಾರುಖ್ ಖಾನ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 18, 2024 | 12:22 PM

Share

ಪ್ರತಿ ಬ್ರ್ಯಾಂಡ್​ಗಳು ಪ್ರಚಾರಕ್ಕೆ ಖ್ಯಾತ ನಟರನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ತೋರಿಸುತ್ತವೆ. ಒಂದೊಮ್ಮೆ ಸ್ಟಾರ್​​ಗಳ ಜನಪ್ರಿಯತೆ ಕಡಿಮೆ ಆದರೆ ಅವರ ಮೇಲೆ ಹೆಚ್ಚು ಹೂಡಿಕೆ ಮಾಡುವುದಿಲ್ಲ. ಸಿನಿಮಾ ಬ್ಯಾಕ್ ಟು ಬ್ಯಾಕ್ ಹಿಟ್ ಆಗುತ್ತಿದ್ದರೆ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳೋಕೆ ಹೆಚ್ಚು ಅವಕಾಶ ಸಿಗುತ್ತದೆ. ಶಾರುಖ್ ಖಾನ್ ಅವರಿಗೂ ಹಾಗೆಯೇ ಆಗಿದೆ. ಸಿನಿಮಾ ಸೋಲುತ್ತಿದ್ದಾಗ ಅವರು ಕಾಣಿಸಿಕೊಳ್ಳುತ್ತಿದ್ದ ಜಾಹೀರಾತು ಸಂಖ್ಯೆಗೂ, ಸಿನಿಮಾ ಗೆಲ್ಲುತ್ತಿರುವಾಗ ಅವರು ಕಾಣಿಸಿಕೊಳ್ಳುತ್ತಿರುವ ಜಾಹೀರಾತು ಸಂಖ್ಯೆಗೂ ಸಾಕಷ್ಟು ವ್ಯತ್ಯಾಸ ಇದೆ. ‘ಪಠಾಣ್’ ಸಿನಿಮಾ (Pathaan Movie) ಹಿಟ್ ಆದ ಬಳಿಕ ಅವರ ಅದೃಷ್ಟ ಬದಲಾಗಿದೆ. ಹಲವು ಬ್ರ್ಯಾಂಡ್​ಗಳು ಶಾರುಖ್ ಖಾನ್ ಅವರನ್ನು ಹುಡುಕಿ ಬಂದಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಶಾರುಖ್ ಖಾನ್ ಅವರು 2018ರಲ್ಲಿ ನಟಿಸಿದ ‘ಜಿರೋ’ ಸಿನಿಮಾ ಹೀನಾಯವಾಗಿ ಸೋತಿತು. ಇದಕ್ಕೂ ಮೊದಲು ಅವರು ನಟಿಸಿದ ಅನೇಕ ಚಿತ್ರಗಳು ಸಾಲು ಸಾಲು ಫ್ಲಾಪ್ ಆಗಿದ್ದವು. ಈ ಕಾರಣಕ್ಕೆ ಶಾರುಖ್ ಖಾನ್ ಅವರು ಒಂದು ದೊಡ್ಡ ಬ್ರೇಕ್ ಪಡೆದರು. ಆ ಬಳಿಕ ಅವರು ‘ಪಠಾಣ್’ ಚಿತ್ರದಿಂದ ಕಂಬ್ಯಾಕ್ ಮಾಡಿದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ‘ಜವಾನ್’ ಹಾಗೂ ‘ಡಂಕಿ’ ಚಿತ್ರಗಳು ಹಿಟ್ ಆದವು. ಈ ಮೂರು ಸಿನಿಮಾಗಳಿಂದ ಒಟ್ಟಾರೆ ಆದ ಬಿಸ್ನೆಸ್ ಬರೋಬ್ಬರಿ 2600 ಕೋಟಿ ರೂಪಾಯಿ. ಶಾರುಖ್ ಖಾನ್ ಅವರಿಂದ ಚಿತ್ರರಂಗಕ್ಕೆ ದೊಡ್ಡ ಬೂಮ್ ಸಿಕ್ಕಿದೆ.

ಶಾರುಖ್ ಖಾನ್ ಖ್ಯಾತಿ ಹೆಚ್ಚುತ್ತಿದ್ದಂತೆ ಹಲವು ಬ್ರ್ಯಾಂಡ್​ಗಳು ಅವರ ಬಳಿ ಬಂದಿವೆ. 2023ರ ಜನವರಿಯಿಂದ ಇಲ್ಲಿಯವರೆಗೆ ಶಾರುಖ್ ಖಾನ್ ಅವರು 10ಕ್ಕೂ ಅಧಿಕ ಬ್ರ್ಯಾಂಡ್​ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಪೈಕಿ, ಆನ್​ಲೈನ್ ಶಾಪಿಂಗ್ ತಾಣ ಮಿಂತ್ರಾ, ಮೊಬೈಲ್ ಸಂಸ್ಥೆ ರಿಯಲ್​ಮಿ, ಸನ್​ಫೀಸ್ಟ್ ಡಾರ್ಕ್​ ಫ್ಯಾಂಟಸಿ ಬಿಸ್ಕತ್ ಮೊದಲಾದವು ಪ್ರಮುಖವಾದವು. ಈ ಪೈಕಿ ಬಹುತೇಕ ಬ್ರ್ಯಾಂಡ್​ಗಳು ಶಾರುಖ್​ಗೆ ದೊಡ್ಡ ಮೊತ್ತ ನೀಡಿವೆ.

2023ರ ಜನವರಿಯಿಂದ ಜುಲೈವರೆಗೆ ಶಾರುಖ್ ಖಾನ್ ಅವರು ಬರೋಬ್ಬರಿ 21 ಬ್ರ್ಯಾಂಡ್​ಗಳ ಪ್ರಚಾರ ಮಾಡಿದ್ದಾರೆ. 2022ರಲ್ಲಿ ಈ ಸಂಖ್ಯೆ 11 ಇತ್ತು ಎನ್ನಲಾಗಿದೆ. ಇನ್ನು ಶಾರುಖ್ ಖಾನ್ ಅವರು ಬ್ರ್ಯಾಂಡ್ ಪ್ರಚಾರಕ್ಕೆ ಪಡೆಯುವ ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ.

ಇದನ್ನೂ ಓದಿ: ಯಾರಿಗೂ ಗೊತ್ತಾಗದಂತೆ ಕ್ಲಿನಿಕ್​ ಒಳಗೆ ಹೋದ ಶಾರುಖ್ ಖಾನ್; ಬರುವಾಗ ಆಗಿದ್ದೇನು?

ಶಾರುಖ್ ಖಾನ್ ಅವರು ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಮೂಲಕ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ಈ ವರ್ಷವೂ ಅವರು ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾ ಘೋಷಣೆ ಮಾಡುವ ಪ್ಲ್ಯಾನ್​ನಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಸದ್ಯ ಇವುಗಳು ಮಾತುಕತೆ ಹಂತದಲ್ಲಿದೆ. ಎಲ್ಲವೂ ಫೈನಲ್ ಆದ ಬಳಿಕ ಶಾರುಖ್ ಖಾನ್ ಅವರು ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಇದಕ್ಕಾಗಿ ಅವರ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು