AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖತ್ ಅದ್ದೂರಿಯಾಗಿರಲಿದೆ ಶಾರುಖ್ ಖಾನ್ ಬರ್ತ್​ಡೇ ಪಾರ್ಟಿ; ಯಾರಿಗೆಲ್ಲ ಆಹ್ವಾನ?

ಬಾಲಿವುಡ್​ನಲ್ಲಿ ಸ್ಟಾರ್​​ಗಳು ಬರ್ತ್​ಡೇ ದಿನ ಪಾರ್ಟಿ ಆಯೋಜಿಸಿ ಇತರ ಸೆಲೆಬ್ರಿಟಿಗಳನ್ನು ಆಹ್ವಾನ ಮಾಡುವ ಟ್ರೆಂಡ್ ಮೊದಲಿನಿಂದಲೂ ನಡೆದು ಬಂದಿದೆ. ಈಗ ನವೆಂಬರ್ 2ರಂದು ಶಾರುಖ್ ಖಾನ್ ಅವರು ಬರ್ತ್​ಡೇ ಪಾರ್ಟಿ ಆಯೋಜಿಸಿದ್ದಾರೆ.

ಸಖತ್ ಅದ್ದೂರಿಯಾಗಿರಲಿದೆ ಶಾರುಖ್ ಖಾನ್ ಬರ್ತ್​ಡೇ ಪಾರ್ಟಿ; ಯಾರಿಗೆಲ್ಲ ಆಹ್ವಾನ?
ಶಾರುಖ್ ಖಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 31, 2023 | 1:58 PM

Share

ಶಾರುಖ್ ಖಾನ್ (Shah Rukh Khan) ಅವರು ನವೆಂಬರ್ 2ರಂದು ಬರ್ತ್​​​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ನಟನೆಯಿಂದ ಅವರು ದೂರ ಇದ್ದರು. ಇದರ ಜೊತೆಗೆ ಮಗ ಆರ್ಯನ್ ಖಾನ್ ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಹೀಗಾಗಿ, ಅವರಿಗೆ ಹುಟ್ಟಹಬ್ಬ ಆಚರಣೆ ಬಗ್ಗೆ ಅಷ್ಟಾಗಿ ಆಸಕ್ತಿ ಇರಲಿಲ್ಲ. ಈ ವರ್ಷ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಿಕೊಳ್ಳಲು ಅವರ ಬಳಿ ಹಲವು ಕಾರಣಗಳು ಇವೆ. ಈ ಕಾರಣದಿಂದ ಈ ವರ್ಷದ ಅವರ ಬರ್ತ್​​ಡೇ ಜೋರಾಗಿರಲಿದೆ. ಬಾಲಿವುಡ್​ ಮಂದಿಗಾಗಿ ಅವರು ಅದ್ದೂರಿ ಪಾರ್ಟಿ ಆಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಬಾಲಿವುಡ್​ನಲ್ಲಿ ಸ್ಟಾರ್​​ಗಳು ಬರ್ತ್​ಡೇ ದಿನ ಪಾರ್ಟಿ ಆಯೋಜಿಸಿ ಇತರ ಸೆಲೆಬ್ರಿಟಿಗಳನ್ನು ಆಹ್ವಾನ ಮಾಡುವ ಟ್ರೆಂಡ್ ಮೊದಲಿನಿಂದಲೂ ನಡೆದು ಬಂದಿದೆ. ನಿರ್ಮಾಪಕ ಕರಣ್ ಜೋಹರ್ ಸೇರಿದಂತೆ ಅನೇಕರು ಈ ರೀತಿಯ ಪಾರ್ಟಿ ಮಾಡಿದ್ದರು. ಈಗ ನವೆಂಬರ್ 2ರಂದು ಶಾರುಖ್ ಖಾನ್ ಅವರು ಬರ್ತ್​ಡೇ ಪಾರ್ಟಿ ಆಯೋಜಿಸಿದ್ದಾರೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಈ ವರ್ಷ ಜನವರಿ ತಿಂಗಳಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಶಾರುಖ್ ಖಾನ್ ಅವರು ಮಾಸ್ ಅವತಾರದಲ್ಲಿ ಮಿಂಚಿದರು. ಸಿದ್ದಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್​ ಅಬ್ರಹಾಂ ಮೊದಲಾದವರು ನಟಿಸಿದ್ದರು. ಇತ್ತೀಚೆಗೆ ರಿಲೀಸ್ ಆದ ‘ಜವಾನ್’ ಸಿನಿಮಾ ಕೂಡ ಗೆದ್ದು ಬೀಗಿದೆ. ಈ ಚಿತ್ರಕ್ಕೆ ತಮಿಳಿನ ಅಟ್ಲಿ ನಿರ್ದೇಶನ ಮಾಡಿದ್ದಾರೆ. ವಿಜಯ್ ಸೇತುಪತಿ, ನಯನತಾರಾ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ‘ಪಠಾಣ್’ ರೀತಿಯೇ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದೆ. ಶಾರುಖ್ ಮಗ್ ಆರ್ಯನ್ ಖಾನ್ ಅವರು ನಿರ್ದೇಶನಕ್ಕೆ ಕಾಲಿಡುತ್ತಿದ್ದಾರೆ. ಅವರು ಪ್ರಾರಂಭಿಸಿರುವ ಬಟ್ಟೆ ಬ್ರ್ಯಾಂಡ್ ಯಶಸ್ಸು ಕಂಡಿದೆ. ಈ ಕಾರಣದಿಂದಲೇ ಶಾರುಖ್ ಬರ್ತ್​ಡೇ ಅದ್ದೂರಿಯಾಗಿ ಇರಲಿದೆ.

ಮುಂಬೈನಲ್ಲೇ ಈ ಪಾರ್ಟಿ ಆಯೋಜನೆ ಮಾಡಲಾಗಿದೆ. ಸಲ್ಮಾನ್ ಖಾನ್, ಕರಣ್ ಜೋಹರ್, ಕಾಜೋಲ್​, ದೀಪಿಕಾ ಪಡುಕೋಣೆ, ಅಟ್ಲಿ, ರಾಜ್​ಕುಮಾರ್ ಹಿರಾನಿ, ಸಿದ್ದಾರ್ಥ್ ಆನಂದ್ ಮೊದಲಾದವರಿಗೆ ಆಹ್ವಾನ ಹೋಗಿದೆ. ಯಾರೆಲ್ಲ ಮದುವೆಯಲ್ಲಿ ಹಾಜರಿ ಹಾಕುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಸಿನಿಮಾ ಕೆಲಸದ ಬಗ್ಗೆ ಶಾರುಖ್ ಖಾನ್ ಗಮನ ಹರಿಸುತ್ತಿದ್ದಾರೆ. ಈ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ರಾಜ್​ಕುಮಾರ್ ಹಿರಾನಿ ನಿರ್ದೇಶನ ಚಿತ್ರಕ್ಕೆ ಇದೆ. ತಾಪ್ಸಿ ಪನ್ನು ಈ ಚಿತ್ರದಲ್ಲಿ ನಟಿಸಿದ್ದಾರೆ. ನವೆಂಬರ್ 2ರಂದು ಈ ಚಿತ್ರದ ಟೀಸರ್ ರಿಲೀಸ್ ಆಗುವ ಸಾಧ್ಯತೆ ಇದೆ. ಇದರ ಜೊತೆ ಶಾರುಖ್ ಹೊಸ ಸಿನಿಮಾ ಘೋಷಣೆ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು