AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಮನೆ ಎದುರು ಅಭಿಮಾನಿಗಳ ಸಂಭ್ರಮಾಚಾರಣೆ; ಅಭಿಮಾನಿಗಳತ್ತ ಕೈಬೀಸಿದ ನಟ

Shah Rukh Khan Birthday: ಶಾರುಖ್ ಖಾನ್ ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ. ಇದಕ್ಕೆ ಮನ್ನತ್ ಎಂದು ಹೆಸರು ಇಟ್ಟಿದ್ದಾರೆ. ಮನ್ನತ್ ಎದುರು ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿಯಿಂದಲೇ ಶಾರುಖ್ ಖಾನ್ ಫ್ಯಾನ್ಸ್ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಶಾರುಖ್ ಖಾನ್ ಮನೆ ಎದುರು ಅಭಿಮಾನಿಗಳ ಸಂಭ್ರಮಾಚಾರಣೆ; ಅಭಿಮಾನಿಗಳತ್ತ ಕೈಬೀಸಿದ ನಟ
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Nov 02, 2023 | 7:18 AM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರಿಗೆ ಇಂದು (ನವೆಂಬರ್ 2) ಜನ್ಮದಿನ. ಅವರು 58ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಈ ವರ್ಷ ಬ್ಯಾಕ್ ಟು ಬ್ಯಾಕ್ ಗೆಲುವು ಸಿಕ್ಕಿರುವುದರಿಂದ ಖುಷಿ ಆಗಿದೆ. ಹೀಗಾಗಿ, ಸೆಲೆಬ್ರಿಟಿಗಳಿಗಾಗಿ ಭರ್ಜರಿ ಪಾರ್ಟಿ ಕೂಡ ಆಯೋಜನೆ ಮಾಡಿದ್ದಾರೆ. ಶಾರುಖ್ ಖಾನ್ ಮನೆ ಮುಂದೆ ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿ ಅವರು ಅಭಿಮಾನಿಗಳಿಗೆ ದರ್ಶನ ಕೊಟ್ಟಿದ್ದಾರೆ . ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಶಾರುಖ್ ಖಾನ್ ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ. ಇದಕ್ಕೆ ಮನ್ನತ್ ಎಂದು ಹೆಸರು ಇಟ್ಟಿದ್ದಾರೆ. ಮನ್ನತ್ ಎದುರು ಅಭಿಮಾನಿಗಳ ದಂಡು ನೆರೆದಿದೆ. ಮಧ್ಯರಾತ್ರಿಯಿಂದಲೇ ಶಾರುಖ್ ಖಾನ್ ಫ್ಯಾನ್ಸ್ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ‘ಹ್ಯಾಪಿ ಬರ್ತ್​ಡೇ ಎಸ್​ಆರ್​ಕೆ’ ಎಂಬಿತ್ಯಾದಿ ಬೋರ್ಡ್​ಗಳನ್ನು ಇಟ್ಟುಕೊಂಡು ಅಭಿಮಾನಿಗಳು ನಿಂತಿದ್ದಾರೆ.

ಶಾರುಖ್ ಖಾನ್ ಮನೆ ಎದುರು ಬಾಲ್ಕನಿ ಇದೆ. ಬರ್ತ್​ಡೇ ದಿನ ಅವರು ಸಾಮಾನ್ಯವಾಗಿ ಇಲ್ಲಿಗೆ ಬಂದು ಅಭಿಮಾನಿಗಳತ್ತ ಕೈ ಬೀಸಿ ಹೋಗುತ್ತಾರೆ. ಈ ಬಾರಿಯೂ ಶಾರುಖ್ ಖಾನ್ ಅವರು ಆಗಮಿಸಿ ಅಭಿಮಾನಿಗಳತ್ತ ಕೈಬೀಸಿದ್ದಾರೆ. ಮಧ್ಯಾಹ್ನದ ವೇಳೆಗೆ ಅವರು ಮತ್ತೊಮ್ಮೆ ಅಭಿಮಾನಿಗಳಿಗೆ ದರ್ಶನ ಕೊಡುವ ಸಾಧ್ಯತೆ ಇದೆ.

ಶಾರುಖ್ ಜನ್ಮದಿನದ ಅಂಗವಾಗಿ ಆಯೋಜಿಸಿರುವ ಬರ್ತ್​ಡೇ ಪಾರ್ಟಿ ಮೇಲೆ ಎಲ್ಲರ ಗಮನ ಇದೆ. ಶಾರುಖ್ ಪಾರ್ಟಿಯಲ್ಲಿ ಸಲ್ಮಾನ್ ಖಾನ್​, ದೀಪಿಕಾ ಪಡುಕೋಣೆ ಸೇರಿ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕುವ ಸಾಧ್ಯತೆ ಇದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಪಾರ್ಟಿ ನಡೆಯುವ ಸ್ಥಳದಲ್ಲಿ ಈಗಾಗಲೇ ಪಾಪರಾಜಿಗಳು ಹಾಜರಿ ಹಾಕಿದ್ದಾರೆ.

ಇದನ್ನೂ ಓದಿ: ಸಖತ್ ಅದ್ದೂರಿಯಾಗಿರಲಿದೆ ಶಾರುಖ್ ಖಾನ್ ಬರ್ತ್​ಡೇ ಪಾರ್ಟಿ; ಯಾರಿಗೆಲ್ಲ ಆಹ್ವಾನ?

ಶಾರುಖ್ ಖಾನ್ ಅವರು ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ ಎಂದು ವರದಿ ಆಗಿದೆ. ಈ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Thu, 2 November 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ