AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್​ಗೆ ಜನ್ಮದಿನದ ಸಂಭ್ರಮ​; ಮನ್ನತ್​ ಮೇಲೆ ನಿಂತು ಅಭಿಮಾನಿಗಳಿಗೆ ಧನ್ಯವಾದ ಹೇಳಲಿದ್ದಾರೆ ಕಿಂಗ್​ ಖಾನ್?

Shah Rukh Khan Birthday: ಶಾರುಖ್​ ಪತ್ನಿ ಗೌರಿ ಖಾನ್​ ಹಿಂದು ಆಗಿದ್ದರು. ಈ ಕಾರಣಕ್ಕೆ ಶಾರುಖ್​ ತಮ್ಮ ಮನೆಯಲ್ಲಿ ಪ್ರತಿ ವರ್ಷ ದೀಪಾವಳಿ ಆಚರಿಸುತ್ತಾರೆ. ಈ ಬಾರಿಯೂ ಬೆಳಕಿನ ಹಬ್ಬವನ್ನು ಕುಟುಂಬ ಸಮೇತವಾಗಿ ಆಚರಿಸಲು ಯೋಚನೆ ಮಾಡಿದ್ದಾರೆ.

Shah Rukh Khan: ಶಾರುಖ್​ಗೆ ಜನ್ಮದಿನದ ಸಂಭ್ರಮ​; ಮನ್ನತ್​ ಮೇಲೆ ನಿಂತು ಅಭಿಮಾನಿಗಳಿಗೆ ಧನ್ಯವಾದ ಹೇಳಲಿದ್ದಾರೆ ಕಿಂಗ್​ ಖಾನ್?
ಶಾರುಖ್​ ಖಾನ್​
TV9 Web
| Edited By: |

Updated on: Nov 02, 2021 | 8:17 AM

Share

ಶಾರುಖ್​ ಖಾನ್ ಇಂದು (ನವೆಂಬರ್​ 2) ಹುಟ್ಟುಹಬ್ಬದ ಸಂಭ್ರಮದಲಿದ್ದಾರೆ. ಬಾಲಿವುಡ್​​ನ ಈ ದೊಡ್ಡ ಸೆಲೆಬ್ರಿಟಿಗೆ 56ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಡ್ರಗ್​ ಕೇಸ್​ನಲ್ಲಿ ಜೈಲಿಗೆ ತೆರಳಿದ್ದ ಮಗ ಆರ್ಯನ್​ ಖಾನ್​ ರಿಲೀಸ್​ ಆಗಿದ್ದಾರೆ. ಇದು ಶಾರುಖ್​ ಬರ್ತ್​ಡೇ ಸಂಭ್ರಮವನ್ನು ಹೆಚ್ಚಿಸಿದೆ. ಆದಾಗ್ಯೂ, ಸಿಂಪಲ್​ ಆಗಿ ಹುಟ್ಟುಹಬ್ಬ ಆಚರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ. ಈ ಮಧ್ಯೆ, ಕಷ್ಟದ ಸಂದರ್ಭದಲ್ಲಿ ಜೊತೆಗಿದ್ದ ಫ್ಯಾನ್ಸ್​ಗೆ ಅವರು ತಮ್ಮ ನಿವಾಸ ಮನ್ನತ್​ ಮೇಲೆ ನಿಂತು ಧನ್ಯವಾದ ಅರ್ಪಿಸಲಿದ್ದಾರೆ ಎನ್ನಲಾಗುತ್ತಿದೆ.

ಶಾರುಖ್​ ಖಾನ್​ ಅವರಿಗೆ ಈ ತಿಂಗಳು ಬಹಳ ವಿಶೇಷವಾದದ್ದು. ಏಕೆಂದರೆ, ಅವರು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಜತೆಗೆ ಕತ್ತಲಿಂದ ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಾವಳಿ ಹಬ್ಬ ಇದೆ. ನವೆಂಬರ್​ 13ರಂದು ಆರ್ಯನ್​ ಖಾನ್​ ಜನ್ಮದಿನ. ಈ ಎಲ್ಲಾ ಕಾರಣಕ್ಕೆ ಶಾರುಖ್​ ಎಗ್ಸೈಟ್​ ಆಗಿದ್ದಾರೆ. ಮತ್ತೆ ಕುಟುಂಬದಲ್ಲಿ ಸಂತಸ ಮೂಡಿದೆ. ಇಂದು ಕುಟುಂಬದವರ ಜತೆ ಸಿಂಪಲ್​ ಆಗಿ ಶಾರುಖ್​ ಹುಟ್ಟು ಹಬ್ಬ ಆಚರಿಸಿಕೊಳ್ಳಲಿದ್ದಾರೆ. ಪ್ರತಿ ಬಾರಿ ಶಾರುಖ್​ ಜನ್ಮದಿನದಂದು ಅವರ ಮನೆಯ ಎದುರು ಸಾವಿರಾರು ಅಭಿಮಾನಿಗಳು ಬಂದು ನಿಲ್ಲುತ್ತಾರೆ. ಈ ಬಾರಿಯೂ ಅದು ಮುಂದುವರಿಯಲಿದೆ. ಶಾರುಖ್​ ಕುಟುಂಬ ಸಮೇತ ಮನೆಯ ಮೇಲೆ ಬಂದು ಅಭಿಮಾನಿಗಳಿಗೆ ಧನ್ಯವಾದ ಹೇಳಲಿದ್ದಾರೆ ಎನ್ನಲಾಗುತ್ತಿದೆ.

ಶಾರುಖ್​ ಪತ್ನಿ ಗೌರಿ ಖಾನ್​ ಹಿಂದು ಆಗಿದ್ದರು. ಈ ಕಾರಣಕ್ಕೆ ಶಾರುಖ್​ ತಮ್ಮ ಮನೆಯಲ್ಲಿ ಪ್ರತಿ ವರ್ಷ ದೀಪಾವಳಿ ಆಚರಿಸುತ್ತಾರೆ. ಈ ಬಾರಿಯೂ ಬೆಳಕಿನ ಹಬ್ಬವನ್ನು ಕುಟುಂಬ ಸಮೇತವಾಗಿ ಆಚರಿಸಲು ಯೋಚನೆ ಮಾಡಿದ್ದಾರೆ. ಆರ್ಯನ್​ ಖಾನ್​ ಬರ್ತ್​ಡೇ ಕೂಡ ಶಾರುಖ್​ ಮನೆಯಲ್ಲೇ ಸೆಲಬ್ರೇಟ್​ ಮಾಡಲಿದ್ದಾರೆ.

ಆರ್ಯನ್​ ಖಾನ್​ ಡ್ರಗ್​ ಪ್ರಕರಣದಿಂದ ಸಿನಿಮಾ ಕೆಲಸಗಳಿಗೆ ತೆರಳೋಕೆ ಶಾರುಖ್​ಗೆ ಸಾಧ್ಯವಾಗಿಲ್ಲ. ಮಗನ ಚಿಂತೆಯಲ್ಲಿ ಅವರು ಸರಿಯಾಗಿ ವರ್ಕೌಟ್​ ಕೂಡ ಮಾಡಿರಲಿಲ್ಲ. ಮಗನ ಬರ್ತ್​ಡೇ ನಂತರ ಅವರು ಮತ್ತೆ ಸಿನಿಮಾ ಕೆಲಸಗಳಿಗೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು, ಶಾರುಖ್​ ಬರ್ತ್​ಡೇ ಅಂಗವಾಗಿ ಅನೇಕ ಸೆಲೆಬ್ರಟಿಗಳು, ಅಭಿಮಾನಿಗಳು ವಿಶ್​ ಮಾಡುತ್ತಿದ್ದಾರೆ. ಶಾರುಖ್​ ನಟಿಸುತ್ತಿರುವ ಸಿನಿಮಾ ತಂಡದಿಂದ ಏನಾದರೂ ಅಪ್​ಡೇಟ್​ ಸಿಗಲಿದೆಯೇ ಎನ್ನುವ ಕುತೂಹಲವೂ ಅಭಿಮಾನಿಗಳಲ್ಲಿದೆ. ಇದಕ್ಕೆ ಇಂದೇ ಉತ್ತರ ಸಿಗಲಿದೆ.

ಇದನ್ನೂ ಓದಿ: Aryan Khan Jail: ಜೈಲಿನಿಂದ ಹೊರಬಂದ ಆರ್ಯನ್​ ಖಾನ್​; ಶಾರುಖ್​ ನಿವಾಸ ಮನ್ನತ್​ ಎದುರು ಫ್ಯಾನ್ಸ್​ ಸಂಭ್ರಮ

ಶಾರುಖ್​ ಖಾನ್​ ಪುತ್ರನ ಜಾಮೀನಿಗೆ ನಟಿ ಜೂಹಿ ಚಾವ್ಲಾರಿಂದ ಶ್ಯೂರಿಟಿ; 1 ಲಕ್ಷ ರೂ.ಬಾಂಡ್​ಗೆ ಸಹಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ