AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್-ಆಲಿಯಾ ಸಿನಿಮಾಗೆ ಎಂಟ್ರಿ ಕೊಟ್ಟ ಶಾರುಖ್ ಖಾನ್; ರಿವೀಲ್ ಆಯ್ತು ಹೊಸ ವಿಚಾರ

ಟಾಲಿವುಡ್ ಸ್ಟಾರ್ ನಾಗಾರ್ಜುನ ಅಕ್ಕಿನೇನಿ, ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಹೊಸ ಪಾತ್ರದ ಬಗ್ಗೆ ಮೌನಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ರಣಬೀರ್-ಆಲಿಯಾ ಸಿನಿಮಾಗೆ ಎಂಟ್ರಿ ಕೊಟ್ಟ ಶಾರುಖ್ ಖಾನ್; ರಿವೀಲ್ ಆಯ್ತು ಹೊಸ ವಿಚಾರ
ಶಾರುಖ್-ರಣಬೀರ್​,ಆಲಿಯಾ
TV9 Web
| Edited By: |

Updated on: Sep 01, 2022 | 6:30 AM

Share

ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಒಟ್ಟಾಗಿ ನಟಿಸುತ್ತಿರುವ ‘ಬ್ರಹ್ಮಾಸ್ತ್ರ’ ಸಿನಿಮಾ ಸೆಪ್ಟೆಂಬರ್ 9ರಂದು ರಿಲೀಸ್ ಆಗುತ್ತಿದೆ. ಸಿನಿಮಾ ಬಗ್ಗೆ ಈಗಾಗಲೇ ಸಾಕಷ್ಟು ಹೈಪ್ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಆಲಿಯಾ ಹಾಗೂ ರಣಬೀರ್ ಇದೇ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದಾರೆ ಅನ್ನೋದು ಒಂದು ವಿಶೇಷವಾದರೆ, ಈ ಚಿತ್ರದಲ್ಲಿ ಅನೇಕ ಸ್ಟಾರ್ ಕಲಾವಿದರು ಅತಿಥಿ ಪಾತ್ರ ಮಾಡಿದ್ದಾರೆ ಎಂಬುದು ಮತ್ತೊಂದು ವಿಶೇಷ. ಈಗ ಚಿತ್ರದ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ (Shah Rukh Khan) ಕೂಡ ನಟಿಸಿದ್ದಾರೆ ಎಂಬ ಮಾಹಿತಿ ಈಗ ಲೀಕ್ ಆಗಿದೆ.

‘ಬ್ರಹ್ಮಾಸ್ತ್ರ’ ಸಿನಿಮಾದ ಟ್ರೇಲರ್​ ಈಗಾಗಲೇ ರಿಲೀಸ್ ಆಗಿದ್ದು, ವಿಶೇಷ ಶಕ್ತಿ ಉಳ್ಳ ವ್ಯಕ್ತಿಯಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಮೌನಿ ರಾಯ್ ಈ ಚಿತ್ರದಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿದ್ದಾರೆ. ಟಾಲಿವುಡ್ ಸ್ಟಾರ್ ನಾಗಾರ್ಜುನ ಅಕ್ಕಿನೇನಿ, ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಹೊಸ ಪಾತ್ರದ ಬಗ್ಗೆ ಮೌನಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ‘ರಣಬೀರ್, ಆಲಿಯಾ, ಅಮಿತಾಭ್ ನಾಗಾರ್ಜುನ ಹಾಗೂ ಶಾರುಖ್​ ಖಾನ್ ಜತೆ ನಟಿಸಿದ್ದು ಖುಷಿ ನೀಡಿದೆ. ಶಾರುಖ್ ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ’ ಎಂದು ಹೊಸ ಮಾಹಿತಿ ಲೀಕ್ ಮಾಡಿದ್ದಾರೆ ಮೌನಿ.

ಅಯಾನ್ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೂರು ಪಾರ್ಟ್​​ಗಳಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಇದು ಮೊದಲ ಭಾಗ​. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ
Image
119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?
Image
Brahmastra: ಮಾಜಿ ಪ್ರೇಮಿಯ ಸಿನಿಮಾದಲ್ಲಿ ದೀಪಿಕಾ ಕದ್ದುಮುಚ್ಚಿ ನಟನೆ? ಝೂಮ್​ ಮಾಡಿ ಸಾಕ್ಷಿ ತೋರಿಸಿದ ನೆಟ್ಟಿಗರು
Image
Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?
Image
Cannes 2022: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಮಿಂಚಿದ ದೀಪಿಕಾ; ಇಲ್ಲಿವೆ ಫೋಟೋಗಳು

ಇದನ್ನೂ ಓದಿ: ಶೂ ಧರಿಸಿ ರಣಬೀರ್ ದೇವಸ್ಥಾನಕ್ಕೆ ಬಂದಿರಲಿಲ್ಲ; ‘ಬ್ರಹ್ಮಾಸ್ತ್ರ’ ತಂಡದಿಂದ ಬಂತು ಸ್ಪಷ್ಟನೆ

‘ಬ್ರಹ್ಮಾಸ್ತ್ರ’ ಸಿನಿಮಾದ ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಚಿತ್ರದ ಟ್ರೇಲರ್​ನಲ್ಲಿ ಬಳಕೆಯಾದ ಗ್ರಾಫಿಕ್ಸ್ ಕಳಪೆಯಾಗಿದೆ ಎಂದು ಕೆಲವರು ಟೀಕೆ ಮಾಡಿದ್ದಿದೆ. ಈ ಬಗ್ಗೆ ಚಿತ್ರತಂಡ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ದಕ್ಷಿಣ ಭಾರತದ ಭಾಷೆಗಳಲ್ಲಿ ಎಸ್​.ಎಸ್​. ರಾಜಮೌಳಿ ಅವರು ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಕಾರಣದಿಂದಲೂ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು