AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ಸಿಎಂ ಮನೆಯ ಗಣಪತಿ ಪೂಜೆಯಲ್ಲಿ ಶಾರುಖ್; ಕೇಸರಿ ಶಾಲು ಹೊದ್ದು ಪೋಸ್ ಕೊಟ್ಟ ನಟ

ಮಹಾರಾಷ್ಟ್ರದಲ್ಲಿ ಗಣೇಶೋತ್ಸವ ಸಖತ್ ಅದ್ದೂರಿಯಾಗಿರುತ್ತದೆ. ಶಾರುಖ್ ಖಾನ್ ಅವರು ನೀಲಿ ಬಣ್ಣದ ಕುರ್ತಾ ಧರಿಸಿ ಬಂದಿದ್ದಾರೆ. ಅವರು ಆಗಮಿಸುತ್ತಿದ್ದಂತೆ ಏಕ್​ನಾಥ್ ಶಿಂಧೆ ಅವರು ಕೇಸರಿ ಬಣ್ಣದ ಶಾಲು ಹೊದಿಸಿದ್ದಾರೆ. ಆ ಬಳಿಕ ಹೂಗುಚ್ಛ ಹಾಗೂ ಗಣಪತಿ ಮೂರ್ತಿ ನೀಡಲಾಯಿತು.

ಮಹಾ ಸಿಎಂ ಮನೆಯ ಗಣಪತಿ ಪೂಜೆಯಲ್ಲಿ ಶಾರುಖ್; ಕೇಸರಿ ಶಾಲು ಹೊದ್ದು ಪೋಸ್ ಕೊಟ್ಟ ನಟ
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Sep 25, 2023 | 9:30 AM

Share

ಶಾರುಖ್ ಖಾನ್ (Shah Rukh Khan) ಅವರಿಗೆ ಹಿಂಶದೂ ಧರ್ಮದ ಬಗ್ಗೆ ಅಪಾರ ಗೌರವ ಇದೆ. ಅವರ ಪತ್ನಿ ಗೌರಿ ಖಾನ್ ಹಿಂದೂ. ಈ ಕಾರಣದಿಂದ ಅವರು ಈ ಧರ್ಮದ ಆಚರಣೆಗಳನ್ನು ಮಾಡುತ್ತಾರೆ. ಇತ್ತೀಚೆಗೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್​ನಾಥ್ ಶಿಂಧೆ ಅವರ ಮನೆಯ ಗಣಪತಿ ಪೂಜೆಗೆ ತೆರಳಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್ ಅವರಿಗೆ ಕೇಸರಿ ಶಾಲು ಹೊದಿಸಲಾಗಿದೆ. ಅವರು ಗಣಪತಿ ಮೂರ್ತಿ ಹಿಡಿದು ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಗಣೇಶೋತ್ಸವ ಸಖತ್ ಅದ್ದೂರಿಯಾಗಿರುತ್ತದೆ. ಶಾರುಖ್ ಖಾನ್ ಅವರು ನೀಲಿ ಬಣ್ಣದ ಕುರ್ತಾ ಧರಿಸಿ ಬಂದಿದ್ದಾರೆ. ಅವರು ಆಗಮಿಸುತ್ತಿದ್ದಂತೆ ಏಕ್​ನಾಥ್ ಶಿಂಧೆ ಅವರು ಕೇಸರಿ ಬಣ್ಣದ ಶಾಲು ಹೊದಿಸಿದ್ದಾರೆ. ಆ ಬಳಿಕ ಹೂಗುಚ್ಛ ಹಾಗೂ ಗಣಪತಿ ಮೂರ್ತಿ ನೀಡಲಾಯಿತು. ಶಾರುಖ್ ಖಾನ್ ಅವರನ್ನು ಅನೇಕರು ಶ್ಲಾಘಿಸಿದ್ದಾರೆ.

‘ಈ ವ್ಯಕ್ತಿಯನ್ನು ನೋಡಿ ಕಲಿತುಕೊಳ್ಳಿ. ಇವರದ್ದು ಮುಸ್ಲಿಂ ಧರ್ಮ. ಆದರೆ, ಎಲ್ಲಾ ಹಿಂದೂ ಹಬ್ಬಗಳ ಪೂಜೆಗಳಲ್ಲಿ ಭಯವಿಲ್ಲದೆ ಭಾಗಿ ಆಗುತ್ತಾರೆ. ಇವರು ಅನೇಕರಿಗೆ ಮಾದರಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಶಾರುಖ್ ಖಾನ್ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಶಾರುಖ್ ಖಾನ್ ಅವರು ತಮ್ಮ ಮನೆಯಲ್ಲಿ ಎಲ್ಲಾ ಹಬ್ಬಗಳನ್ನು ಆಚರಿಸುತ್ತಾರೆ. ಇದಕ್ಕೆ ಅವರು ಎಂದಿಗೂ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

ಇದನ್ನೂ ಓದಿ: ‘ಜವಾನ್​’ ತಂಡದಲ್ಲಿ ಕಿರಿಕ್​? ನಯನತಾರಾ ಮುನಿಸಿಗೆ ಪ್ರತಿಕ್ರಿಯೆ ನೀಡಿದ ಶಾರುಖ್​ ಖಾನ್​

‘ಜವಾನ್’ ಸಿನಿಮಾ ಯಶಸ್ಸಿನಿಂದ ಶಾರುಖ್ ಖಾನ್ ಖ್ಯಾತಿ ಹೆಚ್ಚಿದೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500+ ಕೋಟಿ ರೂಪಾಯಿ ಬಾಚಿಕೊಂಡಿದೆ. ತಮಿಳು ನಿರ್ದೇಶಕ ಅಟ್ಲಿ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್  ಹೇಳಿದ್ದಾರೆ. ಅಟ್ಲಿ ನಿರ್ದೇಶನ ಮಾಡಿದ ಮೊದಲ ಬಾಲಿವುಡ್ ಸಿನಿಮಾ ಇದು. ವಿಜಯ್ ಸೇತುಪತಿ, ನಯನತಾರಾ, ಪ್ರಿಯಾಮಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:29 am, Mon, 25 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?