AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ
ಶಾರುಖ್​-ರಸೆಲ್
ರಾಜೇಶ್ ದುಗ್ಗುಮನೆ
|

Updated on:May 01, 2024 | 9:45 AM

Share

ಶಾರುಖ್ ಖಾನ್ (Shah Rukh Khan) ಅವರು ‘ಕೆಕೆಆರ್’ ತಂಡದ ಒಡೆತನ ಹೊಂದಿದ್ದಾರೆ. ಸೋಮವಾರ (ಏಪ್ರಿಲ್ 29) ಡೆಲ್ಲಿ ಡೇರ್​ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತ ತಂಡ ಗೆಲುವು ಕಂಡಿದೆ. ಮ್ಯಾಚ್ ವೀಕ್ಷಣೆಗೆ ಶಾರುಖ್ ಖಾನ್ ಅವರ ಜೊತೆ ಅವರ ಕಿರಿಯ ಮಗ ಅಬ್ರಾಮ್ ಕೂಡ ಇದ್ದ. ಏಪ್ರಿಲ್ 29 ಆ್ಯಂಡ್ರೆ ರಸೆಲ್ ಜನ್ಮದಿನ. ಅವರಿಗೆ ಗೆಲುವಿನ ಉಡುಗೊರೆ ಸಿಕ್ಕಿದೆ. ಇದನ್ನು ಶಾರುಖ್ ಖಾನ್ ಅವರು ಸಂಭ್ರಮಿಸಿದ್ದಾರೆ. ಶಾರುಖ್ ಮಗ ಅಬ್ರಾಮ್ ಅವರು ರಸೆಲ್ ಮುಖಕ್ಕೆ ಕೇಕ್ ಬಳಿದಿದ್ದಾನೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ. ಇಬ್ಬರೂ ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್ ಹೆಸರಿಗಷ್ಟೇ ಗ್ಲೋಬಲ್ ಸ್ಟಾರ್; ಅವರು ನಡೆದುಕೊಳ್ಳೋದು ಹೇಗೆ ನೋಡಿ

ಈ ವಿಡಿಯೋದಲ್ಲಿ ಅಬ್ರಾಮ್ ಕೂಡ ಗಮನ ಸೆಳೆದಿದ್ದಾರೆ. ಮೊದಲು ಕೇಕ್ ಹಿಡಿದು ನಿಂತಿದ್ದ ಸುನಿಲ್ ನರೈನ್ ಅವರು ರಸೆಲ್ ತಲೆಗೆ ಬಳಿದರು. ಇದಾದ ಬಳಿಕ ಅಲ್ಲೇ ಇದ್ದ ಅಬ್ರಾಮ್ ಬಂದು ಕೇಕ್​ನಿಂದ ರಸೆಲ್ ಕೆನ್ನೆಗೆ ಕೇಕ್​ನ ಮೆತ್ತಿದ. ಈ ವಿಡಿಯೋ ಸಖತ್ ಕ್ಯೂಟ್ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಅಬ್ರಾಮ್​ ರಿಂಕು ಸಿಂಗ್​ಗೆ ಬೌಲ್ ಹಾಕುತ್ತಿರುವ ವಿಡಿಯೋ ಇದೆ.

ಶಾರುಖ್ ಖಾನ್ ಅವರು ಮಕ್ಕಳ ಜೊತೆ ಕೆಕೆಆರ್​ ಪಂದ್ಯ ವೀಕ್ಷಿಸಲು ಬರುತ್ತಿದ್ದಾರೆ. ಅವರ ಜೊತೆ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಶಾರುಖ್ ಖಾನ್ ನಟನೆಯ ಮೂರು ಸಿನಿಮಾಗಳು (ಪಠಾಣ್, ಜವಾನ್, ಡಂಕಿ) ರಿಲೀಸ್ ಆಗಿ ಯಶಸ್ಸು ಕಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:20 pm, Tue, 30 April 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್