AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ
ಶಾರುಖ್​-ರಸೆಲ್
Follow us
ರಾಜೇಶ್ ದುಗ್ಗುಮನೆ
|

Updated on:May 01, 2024 | 9:45 AM

ಶಾರುಖ್ ಖಾನ್ (Shah Rukh Khan) ಅವರು ‘ಕೆಕೆಆರ್’ ತಂಡದ ಒಡೆತನ ಹೊಂದಿದ್ದಾರೆ. ಸೋಮವಾರ (ಏಪ್ರಿಲ್ 29) ಡೆಲ್ಲಿ ಡೇರ್​ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತ ತಂಡ ಗೆಲುವು ಕಂಡಿದೆ. ಮ್ಯಾಚ್ ವೀಕ್ಷಣೆಗೆ ಶಾರುಖ್ ಖಾನ್ ಅವರ ಜೊತೆ ಅವರ ಕಿರಿಯ ಮಗ ಅಬ್ರಾಮ್ ಕೂಡ ಇದ್ದ. ಏಪ್ರಿಲ್ 29 ಆ್ಯಂಡ್ರೆ ರಸೆಲ್ ಜನ್ಮದಿನ. ಅವರಿಗೆ ಗೆಲುವಿನ ಉಡುಗೊರೆ ಸಿಕ್ಕಿದೆ. ಇದನ್ನು ಶಾರುಖ್ ಖಾನ್ ಅವರು ಸಂಭ್ರಮಿಸಿದ್ದಾರೆ. ಶಾರುಖ್ ಮಗ ಅಬ್ರಾಮ್ ಅವರು ರಸೆಲ್ ಮುಖಕ್ಕೆ ಕೇಕ್ ಬಳಿದಿದ್ದಾನೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ. ಇಬ್ಬರೂ ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್ ಹೆಸರಿಗಷ್ಟೇ ಗ್ಲೋಬಲ್ ಸ್ಟಾರ್; ಅವರು ನಡೆದುಕೊಳ್ಳೋದು ಹೇಗೆ ನೋಡಿ

ಈ ವಿಡಿಯೋದಲ್ಲಿ ಅಬ್ರಾಮ್ ಕೂಡ ಗಮನ ಸೆಳೆದಿದ್ದಾರೆ. ಮೊದಲು ಕೇಕ್ ಹಿಡಿದು ನಿಂತಿದ್ದ ಸುನಿಲ್ ನರೈನ್ ಅವರು ರಸೆಲ್ ತಲೆಗೆ ಬಳಿದರು. ಇದಾದ ಬಳಿಕ ಅಲ್ಲೇ ಇದ್ದ ಅಬ್ರಾಮ್ ಬಂದು ಕೇಕ್​ನಿಂದ ರಸೆಲ್ ಕೆನ್ನೆಗೆ ಕೇಕ್​ನ ಮೆತ್ತಿದ. ಈ ವಿಡಿಯೋ ಸಖತ್ ಕ್ಯೂಟ್ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಅಬ್ರಾಮ್​ ರಿಂಕು ಸಿಂಗ್​ಗೆ ಬೌಲ್ ಹಾಕುತ್ತಿರುವ ವಿಡಿಯೋ ಇದೆ.

ಶಾರುಖ್ ಖಾನ್ ಅವರು ಮಕ್ಕಳ ಜೊತೆ ಕೆಕೆಆರ್​ ಪಂದ್ಯ ವೀಕ್ಷಿಸಲು ಬರುತ್ತಿದ್ದಾರೆ. ಅವರ ಜೊತೆ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಶಾರುಖ್ ಖಾನ್ ನಟನೆಯ ಮೂರು ಸಿನಿಮಾಗಳು (ಪಠಾಣ್, ಜವಾನ್, ಡಂಕಿ) ರಿಲೀಸ್ ಆಗಿ ಯಶಸ್ಸು ಕಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:20 pm, Tue, 30 April 24

ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು