AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ
ಶಾರುಖ್​-ರಸೆಲ್
ರಾಜೇಶ್ ದುಗ್ಗುಮನೆ
|

Updated on:May 01, 2024 | 9:45 AM

Share

ಶಾರುಖ್ ಖಾನ್ (Shah Rukh Khan) ಅವರು ‘ಕೆಕೆಆರ್’ ತಂಡದ ಒಡೆತನ ಹೊಂದಿದ್ದಾರೆ. ಸೋಮವಾರ (ಏಪ್ರಿಲ್ 29) ಡೆಲ್ಲಿ ಡೇರ್​ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತ ತಂಡ ಗೆಲುವು ಕಂಡಿದೆ. ಮ್ಯಾಚ್ ವೀಕ್ಷಣೆಗೆ ಶಾರುಖ್ ಖಾನ್ ಅವರ ಜೊತೆ ಅವರ ಕಿರಿಯ ಮಗ ಅಬ್ರಾಮ್ ಕೂಡ ಇದ್ದ. ಏಪ್ರಿಲ್ 29 ಆ್ಯಂಡ್ರೆ ರಸೆಲ್ ಜನ್ಮದಿನ. ಅವರಿಗೆ ಗೆಲುವಿನ ಉಡುಗೊರೆ ಸಿಕ್ಕಿದೆ. ಇದನ್ನು ಶಾರುಖ್ ಖಾನ್ ಅವರು ಸಂಭ್ರಮಿಸಿದ್ದಾರೆ. ಶಾರುಖ್ ಮಗ ಅಬ್ರಾಮ್ ಅವರು ರಸೆಲ್ ಮುಖಕ್ಕೆ ಕೇಕ್ ಬಳಿದಿದ್ದಾನೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ. ಇಬ್ಬರೂ ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್ ಹೆಸರಿಗಷ್ಟೇ ಗ್ಲೋಬಲ್ ಸ್ಟಾರ್; ಅವರು ನಡೆದುಕೊಳ್ಳೋದು ಹೇಗೆ ನೋಡಿ

ಈ ವಿಡಿಯೋದಲ್ಲಿ ಅಬ್ರಾಮ್ ಕೂಡ ಗಮನ ಸೆಳೆದಿದ್ದಾರೆ. ಮೊದಲು ಕೇಕ್ ಹಿಡಿದು ನಿಂತಿದ್ದ ಸುನಿಲ್ ನರೈನ್ ಅವರು ರಸೆಲ್ ತಲೆಗೆ ಬಳಿದರು. ಇದಾದ ಬಳಿಕ ಅಲ್ಲೇ ಇದ್ದ ಅಬ್ರಾಮ್ ಬಂದು ಕೇಕ್​ನಿಂದ ರಸೆಲ್ ಕೆನ್ನೆಗೆ ಕೇಕ್​ನ ಮೆತ್ತಿದ. ಈ ವಿಡಿಯೋ ಸಖತ್ ಕ್ಯೂಟ್ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಅಬ್ರಾಮ್​ ರಿಂಕು ಸಿಂಗ್​ಗೆ ಬೌಲ್ ಹಾಕುತ್ತಿರುವ ವಿಡಿಯೋ ಇದೆ.

ಶಾರುಖ್ ಖಾನ್ ಅವರು ಮಕ್ಕಳ ಜೊತೆ ಕೆಕೆಆರ್​ ಪಂದ್ಯ ವೀಕ್ಷಿಸಲು ಬರುತ್ತಿದ್ದಾರೆ. ಅವರ ಜೊತೆ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಶಾರುಖ್ ಖಾನ್ ನಟನೆಯ ಮೂರು ಸಿನಿಮಾಗಳು (ಪಠಾಣ್, ಜವಾನ್, ಡಂಕಿ) ರಿಲೀಸ್ ಆಗಿ ಯಶಸ್ಸು ಕಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:20 pm, Tue, 30 April 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ