AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ.

ರಸೆಲ್ ಬರ್ತ್​ಡೇ ದಿನ ಮುಖಕ್ಕೆ ಕೇಕ್ ಬಳಿದ ಶಾರುಖ್ ಕಿರಿಯ ಮಗ ಅಬ್ರಾಮ್; ಇಲ್ಲಿದೆ ಕ್ಯೂಟ್ ವಿಡಿಯೋ
ಶಾರುಖ್​-ರಸೆಲ್
ರಾಜೇಶ್ ದುಗ್ಗುಮನೆ
|

Updated on:May 01, 2024 | 9:45 AM

Share

ಶಾರುಖ್ ಖಾನ್ (Shah Rukh Khan) ಅವರು ‘ಕೆಕೆಆರ್’ ತಂಡದ ಒಡೆತನ ಹೊಂದಿದ್ದಾರೆ. ಸೋಮವಾರ (ಏಪ್ರಿಲ್ 29) ಡೆಲ್ಲಿ ಡೇರ್​ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತ ತಂಡ ಗೆಲುವು ಕಂಡಿದೆ. ಮ್ಯಾಚ್ ವೀಕ್ಷಣೆಗೆ ಶಾರುಖ್ ಖಾನ್ ಅವರ ಜೊತೆ ಅವರ ಕಿರಿಯ ಮಗ ಅಬ್ರಾಮ್ ಕೂಡ ಇದ್ದ. ಏಪ್ರಿಲ್ 29 ಆ್ಯಂಡ್ರೆ ರಸೆಲ್ ಜನ್ಮದಿನ. ಅವರಿಗೆ ಗೆಲುವಿನ ಉಡುಗೊರೆ ಸಿಕ್ಕಿದೆ. ಇದನ್ನು ಶಾರುಖ್ ಖಾನ್ ಅವರು ಸಂಭ್ರಮಿಸಿದ್ದಾರೆ. ಶಾರುಖ್ ಮಗ ಅಬ್ರಾಮ್ ಅವರು ರಸೆಲ್ ಮುಖಕ್ಕೆ ಕೇಕ್ ಬಳಿದಿದ್ದಾನೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಅಧಿಕೃತ ಖಾತೆಯಲ್ಲಿ ರಸೆಲ್ ಬರ್ತ್​​ಡೇ ಸೆಲೆಬ್ರೇಷನ್ ವಿಡಿಯೋ ಹಂಚಿಕೊಳ್ಳಲಾಗಿದೆ. ಇದರಲ್ಲಿ ಶಾರುಖ್ ಖಾನ್ ಅವರು ಕೂಡ ಭಾಗವಹಿಸಿದ್ದರು. ಅಬ್ರಾಮ್ ಇತರ ಮಕ್ಕಳೊಂದಿಗೆ ಸೆಲೆಬ್ರೇಷನ್​ನಲ್ಲಿ ಭಾಗಿ ಆಗಿದ್ದಾನೆ. ಶಾರುಖ್ ಖಾನ್ ಅವರು ಪ್ರಿತಿಯಿಂದ ರಸೆಲ್​ನ ಹಗ್ ಮಾಡಿ ವಿಶ್ ತಿಳಿಸಿದ್ದಾರೆ. ಇಬ್ಬರೂ ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್ ಹೆಸರಿಗಷ್ಟೇ ಗ್ಲೋಬಲ್ ಸ್ಟಾರ್; ಅವರು ನಡೆದುಕೊಳ್ಳೋದು ಹೇಗೆ ನೋಡಿ

ಈ ವಿಡಿಯೋದಲ್ಲಿ ಅಬ್ರಾಮ್ ಕೂಡ ಗಮನ ಸೆಳೆದಿದ್ದಾರೆ. ಮೊದಲು ಕೇಕ್ ಹಿಡಿದು ನಿಂತಿದ್ದ ಸುನಿಲ್ ನರೈನ್ ಅವರು ರಸೆಲ್ ತಲೆಗೆ ಬಳಿದರು. ಇದಾದ ಬಳಿಕ ಅಲ್ಲೇ ಇದ್ದ ಅಬ್ರಾಮ್ ಬಂದು ಕೇಕ್​ನಿಂದ ರಸೆಲ್ ಕೆನ್ನೆಗೆ ಕೇಕ್​ನ ಮೆತ್ತಿದ. ಈ ವಿಡಿಯೋ ಸಖತ್ ಕ್ಯೂಟ್ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಅಬ್ರಾಮ್​ ರಿಂಕು ಸಿಂಗ್​ಗೆ ಬೌಲ್ ಹಾಕುತ್ತಿರುವ ವಿಡಿಯೋ ಇದೆ.

ಶಾರುಖ್ ಖಾನ್ ಅವರು ಮಕ್ಕಳ ಜೊತೆ ಕೆಕೆಆರ್​ ಪಂದ್ಯ ವೀಕ್ಷಿಸಲು ಬರುತ್ತಿದ್ದಾರೆ. ಅವರ ಜೊತೆ ಮ್ಯಾನೇಜರ್ ಪೂಜಾ ದದ್ಲಾನಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಶಾರುಖ್ ಖಾನ್ ನಟನೆಯ ಮೂರು ಸಿನಿಮಾಗಳು (ಪಠಾಣ್, ಜವಾನ್, ಡಂಕಿ) ರಿಲೀಸ್ ಆಗಿ ಯಶಸ್ಸು ಕಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:20 pm, Tue, 30 April 24

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ