AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?

Ganesh Chaturthi 2022 | SRK: ಶಾರುಖ್​ ಖಾನ್​ ಮನೆಯ ಗಣಪತಿ ಫೋಟೋ ಸಖತ್​ ವೈರಲ್ ಆಗಿದೆ. ತಮ್ಮ ನೆಚ್ಚಿನ ನಟನಿಗೆ ಅಭಿಮಾನಿಗಳು ಗಣೇಶ ಚತುರ್ಥಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
ಗಣೇಶ ಮೂರ್ತಿ, ಶಾರುಖ್​ ಖಾನ್​
Follow us
TV9 Web
| Updated By: ಮದನ್​ ಕುಮಾರ್​

Updated on:Sep 01, 2022 | 8:34 AM

ದೇಶಾದ್ಯಂತ ಗಣೇಶ ಚತುರ್ಥಿ (Ganesh Chaturthi 2022) ಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ. ಮನೆ-ಮನಗಳಲ್ಲಿ ಗಣಪತಿಯ ಆರಾಧನೆ ನಡೆದಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಈ ಹಬ್ಬ ಆಚರಿಸಿದ್ದಾರೆ. ಬಾಲಿವುಡ್​ನ ಅನೇಕ ನಟ-ನಟಿಯರ ಮನೆಯಲ್ಲಿ ಗಣೇಶನನ್ನು ಕೂರಿಸಿ ಸಂಭ್ರಮಿಸಲಾಗಿದೆ. ಶಾರುಖ್​ ಖಾನ್​ ಕೂಡ ಇದಕ್ಕೆ ಹೊರತಾಗಿಲ್ಲ. ಅವರ ಮುಂಬೈ ನಿವಾಸ ಮನ್ನತ್​ನಲ್ಲಿ (Mannat) ಗಣೇಶ ಚತುರ್ಥಿ ಸಂಭ್ರಮ ಕಳೆಗಟ್ಟಿದೆ. ಎಂದಿನ ಶೂಟಿಂಗ್​ ಕೆಲಸಗಳಿಗೆ ಶಾರುಖ್ ಖಾನ್ (Shah Rukh Khan)​ ಬ್ರೇಕ್​ ನೀಡಿದ್ದಾರೆ. ಮನೆಯವರ ಜೊತೆ ಸೇರಿ ಹಬ್ಬ ಆಚರಿಸಿದ್ದಾರೆ. ಮನೆಯಲ್ಲಿ ಹಬ್ಬದ ವಾತಾವರಣ ಹೇಗಿತ್ತು ಎಂಬುದನ್ನು ತಿಳಿಸಲು ಅವರು ಫೋಟೋವೊಂದನ್ನು ಪೋಸ್ಟ್​ ಮಾಡಿದ್ದಾರೆ.

‘ಮನೆಗೆ ಗಣಪತಿಯನ್ನು ಬರಮಾಡಿಕೊಳ್ಳಲಾಯಿತು. ನಂತರ ಸವಿದ ಮೋದಕ ತುಂಬ ರುಚಿಕರವಾಗಿತ್ತು. ಪರಿಶ್ರಮ ಮತ್ತು ದೇವರ ಮೇಲಿನ ನಂಬಿಕೆಯಿಂದ ನಾವು ನಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು’ ಎಂದು ಶಾರುಖ್​ ಖಾನ್​ ಪೋಸ್ಟ್​ ಮಾಡಿದ್ದಾರೆ. ತಮ್ಮ ಮನೆಯಲ್ಲಿ ಕೂರಿಸಿದ ಗಣೇಶನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Shah Rukh Khan: ಶಾರುಖ್​ ಖಾನ್​ ಬಾಲಿವುಡ್​ಗೆ ಕಾಲಿಟ್ಟು ಕಳೆಯಿತು 30 ವರ್ಷ; 14 ಬಾರಿ ‘ಫಿಲ್ಮ್​ಫೇರ್’​ ಪಡೆದ ಕಿಂಗ್​ ಖಾನ್
Image
Suhana Khan: ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ಗೆ ಏನು ಚಿಂತೆ? ಗಡಿಬಿಡಿಯಲ್ಲಿ ಹೊರಟ ಸ್ಟಾರ್​ ಕಿಡ್​
Image
ಮತ್ತೆ ಹಳೇ ಚಾರ್ಮ್​ ಪಡೆದ ಶಾರುಖ್​ ಖಾನ್​; ‘ಪಠಾಣ್​’ ಚಿತ್ರದ ಒಟಿಟಿ ಪ್ರಸಾರ ಹಕ್ಕು 200 ಕೋಟಿ ರೂ.ಗೆ ಸೇಲ್​?
Image
8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

ಶಾರುಖ್​ ಖಾನ್​ ಮನೆಯ ಗಣಪತಿ ಫೋಟೋ ಸಖತ್​ ವೈರಲ್ ಆಗಿದೆ. 8 ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 11 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ‘ಶಾರುಖ್​ ಖಾನ್​ ಅವರು ಎಲ್ಲ ಧರ್ಮವನ್ನು ಗೌರವಿಸುವಂತಹ ವ್ಯಕ್ತಿ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಎಲ್ಲರೂ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೋರಿದ್ದಾರೆ. ಶಾರುಖ್​ ಖಾನ್​ ಮಾತ್ರವಲ್ಲದೇ ಆಲಿಯಾ ಭಟ್​, ಶಿಲ್ಪಾ ಶೆಟ್ಟಿ, ಅಮಿತಾಭ್​ ಬಚ್ಚನ್​, ಶ್ರದ್ಧಾ ಕಪೂರ್​ ಸೇರಿದಂತೆ ಎಲ್ಲ ಸೆಲೆಬ್ರಿಟಿಗಳ ಮನೆಯಲ್ಲೂ ಗಣೇಶ ಚತುರ್ಥಿಯನ್ನು ಸಡಗರದಿಂದ ಆಚರಿಸಲಾಗಿದೆ.

View this post on Instagram

A post shared by Shah Rukh Khan (@iamsrk)

ಇತ್ತೀಚಿನ ವರ್ಷಗಳಲ್ಲಿ ಶಾರುಖ್​ ಖಾನ್​ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ನಟಿಸಿದ ಎಲ್ಲ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಮುಗ್ಗರಿಸಿವೆ. ಹಾಗಾಗಿ ಅವರು ಅದ್ದೂರಿಯಾಗಿ ಕಮ್​ಬ್ಯಾಕ್​ ಮಾಡಲು ಕಾದಿದ್ದಾರೆ. ಸದ್ಯ ಅವರು ಹಲವು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಪಠಾಣ್​’, ಜವಾನ್​’ ಹಾಗೂ ‘ಡಂಕಿ’ ಸಿನಿಮಾಗಳು ಸಖತ್​ ನಿರೀಕ್ಷೆ ಮೂಡಿಸಿವೆ. ಘಟಾನುಘಟಿ ನಿರ್ದೇಶಕರು ಈ ಚಿತ್ರಗಳಿಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಆದಷ್ಟು ಬೇಗ ಶಾರುಖ್​ ಖಾನ್​ ಅವರನ್ನು ದೊಡ್ಡ ಪರದೆಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಕಾದಿದ್ದಾರೆ. 2018ರಲ್ಲಿ ತೆರೆಗೆ ಬಂದು ‘ಜೀರೋ’ ಬಳಿಕ ಶಾರುಖ್​ ಖಾನ್​ ಅವರ ಬೇರೆ ಯಾವುದೇ ಸಿನಿಮಾ ತೆರೆಕಂಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:22 am, Thu, 1 September 22

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು