AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ‘ಮಗಳನ್ನು ಸರಿಯಾಗಿ ಬೆಳೆಸಿದ್ದೇನೆ’ ಎಂದು ಹೆಮ್ಮೆಯಿಂದ ಹೇಳಿಕೊಂಡ ಶಾರುಖ್​ ಖಾನ್​

Shah Rukh Khan: ಖಾಸಗಿ ಕಾರ್ಯಕ್ರಮದಲ್ಲಿ ಸುಹಾನಾ ಖಾನ್​ ಅವರು ಗೌರವದಿಂದ ನಡೆದುಕೊಂಡ ರೀತಿ ಗಮನ ಸೆಳೆದಿದೆ. ಅವರು ಆಡಿದ ಮಾತುಗಳು ಸಹ ಎಲ್ಲರಿಗೂ ಮೆಚ್ಚುಗೆ ಆಗಿವೆ.

Suhana Khan: ‘ಮಗಳನ್ನು ಸರಿಯಾಗಿ ಬೆಳೆಸಿದ್ದೇನೆ’ ಎಂದು ಹೆಮ್ಮೆಯಿಂದ ಹೇಳಿಕೊಂಡ ಶಾರುಖ್​ ಖಾನ್​
ಶಾರುಖ್ ಖಾನ್, ಸುಹಾನಾ ಖಾನ್
ಮದನ್​ ಕುಮಾರ್​
|

Updated on:Apr 13, 2023 | 12:43 PM

Share

ಖ್ಯಾತ ನಟ ಶಾರುಖ್​ ಖಾನ್​ (Shah Rukh Khan) ಅವರ ಪುತ್ರಿ ಸುಹಾನಾ ಖಾನ್​ ಇನ್ನೂ ದೊಡ್ಡ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಅಷ್ಟರಲ್ಲಾಗಲೇ ಅವರು ದೊಡ್ಡ ದೊಡ್ಡ ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಸುಹಾನಾ ಖಾನ್​ (Suhana Khan) ಒಪ್ಪಿಕೊಂಡಿರುವ ಮೊದಲ ಸಿನಿಮಾ ‘ದಿ ಆರ್ಚೀಸ್​’ ಇನ್ನೂ ರಿಲೀಸ್​ ಆಗಿಲ್ಲ. ಅದಕ್ಕೂ ಮುನ್ನವೇ ಅವರು ಸೆಲೆಬ್ರಿಟಿ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಹೆಚ್ಚಾಗಿದೆ. ಎಲ್ಲರ ಎದುರು ಮಗಳು ನಡೆದುಕೊಳ್ಳುತ್ತಿರುವ ರೀತಿ ಕಂಡು ಶಾರುಖ್​ ಖಾನ್​ಗೆ ಹೆಮ್ಮೆ ಆಗಿದೆ. ಮಗಳನ್ನು ಸರಿಯಾದ ರೀತಿಯಲ್ಲಿ ಬೆಳೆಸಿದ್ದೇನೆ ಎಂದು ಅವರು ಹಿರಿಹಿರಿ ಹಿಗ್ಗುತ್ತಿದ್ದಾರೆ. ಈ ಕುರಿತು ಅವರು ಮಾಡಿರುವ ಪೋಸ್ಟ್​ ವೈರಲ್​ ಆಗಿದೆ. ಅದಕ್ಕೆ ಅನೇಕ ಸೆಲೆಬ್ರಿಟಿಗಳ ಜೊತೆಯಲ್ಲಿ ಸುಹಾನಾ ಖಾನ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೆಲೆಬ್ರಿಟಿಗಳ ಮಕ್ಕಳು ಹೋದಲ್ಲಿ ಬಂದಲ್ಲಿ ಕಿರಿಕ್​ ಮಾಡಿಕೊಳ್ಳುವುದು ಕಾಮನ್​. ಆದರೆ ಸುಹಾನಾ ಖಾನ್​ ಅವರು ಅಂಥವರ ಪಟ್ಟಿಗೆ ಸೇರಿಲ್ಲ. ಇತ್ತೀಚೆಗೆ ಅವರು ಜಾಗತಿಕ ಮಟ್ಟದ ಫ್ಯಾಷನ್​ ಬ್ರ್ಯಾಂಡ್​ಗೆ ರಾಯಭಾರಿಯಾಗಿ ಆಯ್ಕೆಯಾದರು. ಅದರ ಕಾರ್ಯಕ್ರಮದಲ್ಲಿ ಎಲ್ಲರ ಜೊತೆ ಅವರು ಗೌರವದಿಂದ ನಡೆದುಕೊಂಡ ರೀತಿ ಗಮನ ಸೆಳೆದಿದೆ. ಸುಹಾನಾ ಆಡಿದ ಮಾತುಗಳು ಸಹ ಎಲ್ಲರಿಗೂ ಮೆಚ್ಚುಗೆ ಆಗಿವೆ. ಇನ್ನು ಅವರು ಡ್ರೆಸ್​ ಮಾಡಿಕೊಂಡ ಪರಿಯೂ ಪ್ರಶಂಸೆಗೆ ಒಳಗಾಗಿದೆ. ಮಗಳ ಈ ಬೆಳವಣಿಗೆ ಕಂಡು ಶಾರುಖ್​ ಖಾನ್​ಗೆ ಖುಷಿ ಆಗಿದೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
View this post on Instagram

A post shared by Shah Rukh Khan (@iamsrk)

ಖಾಸಗಿ ಕಾರ್ಯಕ್ರಮದಲ್ಲಿ ಸುಹಾನಾ ಖಾನ್​ ಅವರು ಭಾಗವಹಿಸಿದ ಫೋಟೋ ಮತ್ತು ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಶಾರುಖ್​ ಖಾನ್​ ಶೇರ್​ ಮಾಡಿಕೊಂಡಿದ್ದಾರೆ. ‘ಈ ಅವಕಾಶ ಪಡೆದಿದ್ದಕ್ಕಾಗಿ ಅಭಿನಂದನೆಗಳು ಮಗಳೆ. ಬಟ್ಟೆ, ನಡೆ-ನುಡಿ ಎಲ್ಲವೂ ಚೆನ್ನಾಗಿದೆ. ಸರಿಯಾಗಿ ಬೆಳೆಸಿದ್ದಕ್ಕೆ ನಾನು ಕ್ರಿಡಿಟ್​ ತೆಗೆದುಕೊಳ್ಳಲೇ? ಲವ್​ ಯೂ’ ಎಂದು ಶಾರುಖ್​ ಖಾನ್​ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: Suhana Khan: ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ಗೆ ಏನು ಚಿಂತೆ? ಗಡಿಬಿಡಿಯಲ್ಲಿ ಹೊರಟ ಸ್ಟಾರ್​ ಕಿಡ್​

ಸುಹಾನಾ ಖಾನ್​ ಅವರಿಗೆ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಶಾರುಖ್​ ಖಾನ್​ ಅವರ ಈ ಪೋಸ್ಟ್​ಗೆ 23 ಲಕ್ಷಕ್ಕೂ ಅಧಿಕ ಮಂದಿ ಮೆಚ್ಚುಗೆ ಸೂಚಿಸಿದ್ದಾರೆ. ಮಗಳನ್ನು ಪ್ರೋತ್ಸಾಹಿಸುವ ಅವರ ಗುಣವನ್ನು ಕಂಡು ಫ್ಯಾನ್ಸ್​ ಚಪ್ಪಾಳೆ ತಟ್ಟಿದ್ದಾರೆ. 16 ಸಾವಿರಕ್ಕೂ ಅಧಿಕ ಕಮೆಂಟ್​ಗಳು ಬಂದಿವೆ. ಇದರಿಂದ ಸುಹಾನಾ ಖಾನ್​ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ಶಾರುಖ್​ ಪುತ್ರಿ ಸುಹಾನಾ ಖಾನ್​ ಹಾಟ್​ ಫೋಟೋಶೂಟ್ ವೈರಲ್​; ಅಪ್ಪನ ಕಮೆಂಟ್​ ಏನು?​

ಇನ್ನು, ಶಾರುಖ್​ ಖಾನ್​ ಅವರ ಪುತ್ರ ಆರ್ಯನ್​ ಖಾನ್​ 2021ರಲ್ಲಿ ಡ್ರಗ್ಸ್​ ಪಾರ್ಟಿ ಆರೋಪದ ಮೇಲೆ ಅರೆಸ್ಟ್​ ಆಗಿದ್ದರು. ಅದು ಕಿಂಗ್​ ಖಾನ್​ ಕುಟುಂಬಕ್ಕೆ ಬೇಸರ ಮೂಡಿಸಿತ್ತು. ಈಗ ಆರ್ಯನ್​ ಖಾನ್​ ಅವರು ನಿರ್ದೇಶನದಲ್ಲಿ ಆಸಕ್ತಿ ತೋರಿಸಿದ್ದಾರೆ. ಅವರ ಪ್ರಾಜೆಕ್ಟ್​ ಬಗ್ಗೆ ಶೀಘ್ರದಲ್ಲೇ ಅಪ್​ಡೇಟ್​ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:43 pm, Thu, 13 April 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ