AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಶಾರುಖ್​ ಖಾನ್​ ಮಗಳ ಬ್ಯಾಂಗ್ ಎಂಟ್ರಿ; ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ ಸ್ಟಾರ್​ ನಿರ್ದೇಶಕಿ

2019ರಲ್ಲಿ ತೆರೆಗೆ ಬಂದಿದ್ದ ‘ಗಲ್ಲಿ ಬಾಯ್​’ ಸಿನಿಮಾ ನಿರ್ದೇಶನ ಮಾಡಿದ್ದು ಇದೇ ಜೋಯಾ. ಆಸ್ಕರ್​ ಅವಾರ್ಡ್​ ರೇಸ್​ಗೆ ಈ ಚಿತ್ರ ಭಾರತದಿಂದ ಆಯ್ಕೆ ಆಗಿತ್ತು ಅನ್ನೋದು ವಿಶೇಷ.

ಬಾಲಿವುಡ್​ಗೆ ಶಾರುಖ್​ ಖಾನ್​ ಮಗಳ ಬ್ಯಾಂಗ್ ಎಂಟ್ರಿ; ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ ಸ್ಟಾರ್​ ನಿರ್ದೇಶಕಿ
ಸುಹಾನಾ ಖಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 18, 2021 | 12:07 PM

Share

ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ ಈ ಮೊದಲಿನಿಂದಲೂ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸ್ಟಾರ್​ ನಟನ ಮಗಳು ಎನ್ನುವ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಹಿಂಬಾಲಕರನ್ನು ಹೊಂದಿರುವ ಅವರು, ತಮ್ಮ ಬೋಲ್ಡ್​ ಪೋಸ್ಟ್​ಗಳ ಮೂಲಕ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆಗಿದ್ದಾರೆ. ಸುಹಾನಾ ಅವರನ್ನು ಸ್ಟಾರ್​ ನಿರ್ದೇಶಕಿ ಜೋಯಾ ಅಖ್ತರ್​ ಬಾಲಿವುಡ್​ಗೆ ಪರಿಚಯಿಸುವ ಜವಾಬ್ದಾರಿ ಹೊತ್ತಿದ್ದಾರೆ.

2019ರಲ್ಲಿ ತೆರೆಗೆ ಬಂದಿದ್ದ ‘ಗಲ್ಲಿ ಬಾಯ್​’ ಸಿನಿಮಾ ನಿರ್ದೇಶನ ಮಾಡಿದ್ದು ಇದೇ ಜೋಯಾ. ಆಸ್ಕರ್​ ಅವಾರ್ಡ್​ ರೇಸ್​ಗೆ ಈ ಚಿತ್ರ ಭಾರತದಿಂದ ಆಯ್ಕೆ ಆಗಿತ್ತು ಅನ್ನೋದು ವಿಶೇಷ. ಈ ಸಿನಿಮಾವನ್ನು ಜೋಯಾ ಅವರೇ ನಿರ್ಮಾಣ ಮಾಡಿದ್ದರು. ಈಗ ಅವರು ಎಸ್​ಆರ್​​ಕೆ ಮಗಳನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

ಒಂದು ಕಾಮಿಕ್​ ಪುಸ್ತಕವನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಸುಹಾನಾ ಜತೆ ಇನ್ನೂ ಕೆಲ ಯುವ ನಟ-ನಟಿಯರು ಸಿನಿಮಾದಲ್ಲಿ ಇರಲಿದ್ದಾರಂತೆ. ಸುಹಾನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಹಾನಾ ಈಗಾಗಲೇ ಕಿರುಚಿತ್ರದ ಮೂಲಕ ನಟನೆ ತೋರಿಸಿದ್ದಾರೆ. ಈಗ ಅವರನ್ನು ಬೆಳ್ಳಿ ಪರದೆ ಮೇಲೆ ನೋಡೋಕೆ ಅಭಿಮಾನಿಗಳು ಕಾತುರರಾಗಿದ್ದಾರೆ.

ಸ್ಟಾರ್​ ಮಕ್ಕಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎಂದರೆ ನೆನಪಾಗೋದು ನಿರ್ಮಾಪಕ ಕರಣ್​ ಜೋಹರ್​. ಬಾಲಿವುಡ್​ಗೆ ಸಾಕಷ್ಟು ಸ್ಟಾರ್​ ಕಿಡ್​ಗಳನ್ನು ಪರಿಚಯಿಸಿದ ಖ್ಯಾತಿ ಅವರಿಗಿದೆ.  ಹೀಗಾಗಿ ಈ ಸಿನಿಮಾಗೆ ಕರಣ್​ ನಿರ್ಮಾಣ ಇರುತ್ತದೆಯೋ ಅಥವಾ ಜೋಯಾ ಅವರೇ ಈ ಜವಾಬ್ದಾರಿ ಹೊತ್ತುಕೊಳ್ಳುತ್ತಾರೋ ಅನ್ನೋದು ಸದ್ಯದ ಕುತೂಹಲ.

‘ಜೀರೋ’ ಚಿತ್ರ ಸೋತ ನಂತರದಲ್ಲಿ ಶಾರುಖ್ ಖಾನ್​​​ ಒಂದು ಗ್ಯಾಪ್​ ತೆಗೆದುಕೊಂಡಿದ್ದರು. ಈಗ ಅವರ ಮುಂದಿನ ಸಿನಿಮಾ ‘ಪಠಾಣ್​’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ​ ಸಿನಿಮಾದ ಶೂಟಿಂಗ್​ ಸದ್ಯ ಪ್ರಗತಿಯಲ್ಲಿದೆ. ಇದಲ್ಲದೆ, ಖ್ಯಾತ ನಿರ್ದೇಶಕ ಅಟ್ಲೀ ಕುಮಾರ್ ಜತೆ ಶಾರುಖ್​ ಕೈ ಜೋಡಿಸುತ್ತಿದ್ದಾರೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದೆ.

ಇದನ್ನೂ ಓದಿ: ಅಟ್ಲೀ-ಶಾರುಖ್​ ಖಾನ್​ ಸಿನಿಮಾದ ಬಗ್ಗೆ ಹೊಸ​ ಅಪ್​ಡೇಟ್​; ಆಗಸ್ಟ್ 15ಕ್ಕೆ ಅಭಿಮಾನಿಗಳಿಗೆ ಸಿಗುತ್ತಿದೆ ಸರ್​ಪ್ರೈಸ್

Published On - 11:42 am, Wed, 18 August 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು